Homeಕರ್ನಾಟಕಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

ಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

- Advertisement -
- Advertisement -

ಮುಕ್ಕಾಲುಪಾಲು ಅರಣ್ಯದಿಂದ ಆವೃತವಾಗಿರುವ ಉತ್ತರ ಕನ್ನಡ ವಿಸ್ತೀರ್ಣದಲ್ಲಿ ಮೂರು ಗೋವಾ ರಾಜ್ಯಕ್ಕೆ ಸಮನಾಗಿದೆ. ಕರಾವಳಿ, ಮಲೆನಾಡು ಮತ್ತು ಅರೆ ಬಯಲುಸೀಮೆ ಒಳಗೊಂಡ ಈ ಜಿಲ್ಲೆ 10291 ಚ.ಕಿ.ಮೀ ನಷ್ಟು ದೊಡ್ಡದು. ವಾಸ್ತವ್ಯ ಹಾಗೂ ಸಾಗುವಳಿಗೆ ಯೋಗ್ಯವಾದ ಪ್ರದೇಶವಿರುವುದು ಶೇ.10 ರಷ್ಟು ಮಾತ್ರ. ಈ ವಿಶಾಲವಾದ ಜಿಲ್ಲೆಯನ್ನು ಎರಡಾಗಿ ವಿಭಾಗಿಸುವುದು ಆಡಳಿತಾತ್ಮಕವಾಗಿ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ನೈಸರ್ಗಿಕ ನ್ಯಾಯತತ್ವದಂತೆ ಸರಿಯಾದ ಕ್ರಮವೆಂಬುದರಲ್ಲಿ ಎರಡು ಮಾತೇ ಇಲ್ಲ. ಆದರೆ ಘಟ್ಟದ ಮೇಲಿನ ಘಟಾನುಘಟಿ ರಾಜಕೀಯ ಪಟುಗಳ ಇಚ್ಛಾಶಕ್ತಿಯ ಕೊರತೆ ಮತ್ತು ಪೆದ್ದುತನದಿಂದ ಜನರು ತೊಂದರೆಗೀಡಾಗಿ ಪರದಾಡುತ್ತಿದ್ದಾರೆ.

ಘಟ್ಟದ ಮೇಲಿನ ಆರು ತಾಲ್ಲೂಕುಗಳನ್ನು ಒಳಗೊಂಡ ’ಕದಂಬ’ ಜಿಲ್ಲೆ ಮತ್ತು ಕರಾವಳಿಯ ಐದು ತಾಲ್ಲೂಕುಗಳ ಜೊತೆ ಜೋಯಿಡ ಸೇರಿಸಿ ಉತ್ತರ ಕನ್ನಡ ಜಿಲ್ಲೆ ರಚನೆ ಮಾಡುವ ಅನಿವಾರ್ಯತೆ ಎದುರಾಗಿ ದಶಕಗಳೇ ಉರುಳಿಹೋಗಿವೆ. ಹಾಗೆ ನೋಡಿದರೆ ಶಿರಸಿಯನ್ನು ಜಿಲ್ಲಾ ಕೇಂದ್ರವಾಗಿಸಿ ಶಿರಸಿ ಜಿಲ್ಲೆ ಮಾಡಬೇಕೆಂಬ ಕೂಗು ಮೂರು ದಶಕಗಳ ಹಿಂದಿನದು. ಭಾವನೆಗಳ ಬಂಧನ, ಅನುಕೂಲತೆ ಸಹಿಸಿಕೊಳ್ಳುವ ಮೂಗರ್ಜಿ ಸ್ವಭಾವ, ಹೋರಾಟದ ಹಠ ಮಾಡದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಸ್ಥಳೀಯ ಶಾಸಕ, ಸಂಸದ, ಸಚಿವರ ಉದಾಸೀನತೆಯಿಂದಾಗಿ ಜಿಲ್ಲೆಯ ಕನಸು ನನಸಾಗಲೇ ಇಲ್ಲ.

ಮೂರ್ನಾಲ್ಕು ತಾಲ್ಲೂಕುಗಳುಳ್ಳ ಉಡುಪಿ, ಹಾವೇರಿ, ಯಾದಗಿರಿಯಂತಹ ಜಿಲ್ಲೆಗಳನ್ನು ಹಿಂದೆ ರಚಿಸಲಾಗಿತ್ತು. ವಿವೇಚನೆ, ವಿವೇಕದಿಂದ ಉತ್ತರ ಕನ್ನಡ ವಿಭಾಗಿಸಿದರೆ ಆರಾರು ತಾಲ್ಲೂಕುಗಳ ಎರಡು ಜಿಲ್ಲೆ ಹುಟ್ಟುಹಾಕಬಹುದು. ಜೋಯಿಡ ಘಟ್ಟದ ಪ್ರದೇಶದಲ್ಲಿದ್ದರೂ, ಅದೂ ಕಾರವಾರಕ್ಕೆ ಹತ್ತಿರದಲ್ಲಿದೆ. ಅದನ್ನು ಶಿರಸಿ ಜಿಲ್ಲೆಗೆ ಸೇರಿಸಿದರೆ ಪ್ರಸ್ತಾವಿತ ಜಿಲ್ಲಾ ಕೇಂದ್ರ ಶಿರಸಿಯಿಂದ ನೂರೈವತ್ತು ಕಿ.ಮೀ ಅಂತರದಲ್ಲಿರುತ್ತದೆ. ಜೊತೆಗೆ ಜೋಯಿಡದ ಸಾಂಸ್ಕೃತಿಕ, ವ್ಯಾವಹಾರಿಕ, ಕೌಟುಂಬಿಕ ಭಾಷಾ ಬಾಂಧವ್ಯ ಹೆಚ್ಚಾಗಿ ಕಾರವಾರದೊಂದಿಗಿದೆ. ಜೋಯಿಡದಲ್ಲಿ ಕೊಂಕಣಿ ಮಾತನಾಡುವ ಮಂದಿಯೇ ಜಾಸ್ತಿ. ಹೀಗಾಗಿ ಕನ್ನಡ ಮಾತನಾಡುವ ಶಿರಸಿ ಸೀಮೆ ಜೊತೆ ಜೋಯಿಡಕ್ಕೆ ಹೊಂದಾಣಿಕೆ ಹಲವು ಕಾರಣದಿಂದ ಸಾಧ್ಯವಾಗದು. ಹಾಗಾಗಿ ಅದನ್ನು ಕರಾವಳಿಯ ಉತ್ತರ ಕನ್ನಡದ ಜೊತೆ ಇಡುವುದೇ ಸೂಕ್ತ.

ಈಚೆಗೆ ದಾಂಡೇಲಿ ತಾಲ್ಲೂಕು ರಚನೆಯಾಗಿದೆ. ಕನ್ನಡದ ಮೊದಲ ರಾಜಧಾನಿ ಎಂಬ ಹೆಗ್ಗಳಿಕೆಯ ಬನವಾಸಿ ತಾಲ್ಲೂಕು ರಚನೆಯ ಹೋರಾಟ ಜೋರಾಗಿದೆ. ಕರಾವಳಿಯ ಗೋಕರ್ಣ ತಾಲ್ಲೂಕು ಮಾಡುವ ಪ್ರಸ್ತಾಪವೂ ಇದೆ. ಈ ಎರಡೂ ತಾಲ್ಲೂಕುಗಳು ಅಸ್ತಿತ್ವಕ್ಕೆ ಬಂದರೆ ಒಟ್ಟು 14 ತಾಲ್ಲೂಕುಗಳಾಗಿ ಎರಡೂ ಜಿಲ್ಲೆಗೆ ತಲಾ ಏಳೇಳು ತಾಲ್ಲೂಕುಗಳು ಸೇರುತ್ತವೆ. ಈ ಭೌಗೋಳಿಕ ಕಾರಣ ಹೊಸ ಜಿಲ್ಲೆಗೆ ಒತ್ತಾಸೆಯಾಗಿ ನಿಂತಿದೆ. ಶಿರಸಿ, ಸಿದ್ಧಾಪುರ, ಮುಂಡಗೋಡ, ಯಲ್ಲಾಪುರ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಿರುವ ಶಿರಸಿ ಜಿಲ್ಲೆ ಮತ್ತು ಜೋಯಿಡ, ಕಾರವಾರ, ಅಂಕೋಲಾ, ಕುಮುಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳ ಉತ್ತರ ಕನ್ನಡ (ಕರಾವಳಿ) ಜಿಲ್ಲೆ ರಚನೆ ಮಾಡುವುದರಿಂದ ಅಭಿವೃದ್ಧಿಯೂ ವೇಗ ಪಡೆದುಕೊಳ್ಳುತ್ತದೆ. ಆಡಳಿತಾತ್ಮಕವಾಗಿ ಅಧಿಕಾರಿಗಳ ಕಾರ್ಯಕ್ಷಮತೆ ಎಚ್ಚರ ತಪ್ಪದಂತೆ ನಿಗಾ ವಹಿಸುತ್ತದೆ. ಅವಳಿ ಜಿಲ್ಲಾ ರಚನೆಯಿಂದ ವೈವಿಧ್ಯತೆ, ವೈಶಿಷ್ಟ್ಯತೆ, ಪ್ರಾಕೃತಿಕ ಸೊಬಗಿಗೂ ಭಂಗ ಬರದು. ಉಡುಪಿ ದಕ್ಷಿಣ ಕನ್ನಡದ ಸಂಬಂಧದಂತೆ ಕಾರವಾರ-ಶಿರಸಿ ಜಿಲ್ಲೆಗಳ ನಂಟು ಅನ್ಯೋನ್ಯವಾಗೇ ಇರುತ್ತದೆ.

ಈಗಿನ ಜಿಲ್ಲಾ ಕೇಂದ್ರ ಕಾರವಾರದಿಂದ ಘಟ್ಟದ ಮೇಲಿನ ಎಲ್ಲಾ ತಾಲ್ಲೂಕುಗಳು ತುಂಬಾ ದೂರದಲ್ಲಿದೆ. ಮುಂಡಗೋಡದವರು ಸರ್ಕಾರಿ ಕೆಲಸ, ಕಾರ್ಯಕ್ಕಾಗಿ ಜಿಲ್ಲಾ ಕೇಂದ್ರಕ್ಕೆ ಬರಬೇಕೆಂದರೆ ಬರೋಬ್ಬರಿ 140 ಕಿ.ಮೀ ಕ್ರಮಿಸಬೇಕು. ಅವರು ಜಿಲ್ಲಾ ಕೇಂದ್ರ ತಲುಪುವಾಗಲೇ ಅರ್ಧ ದಿನ ಕಳೆದಿರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಸಿಕ್ಕರೆ ಪುಣ್ಯ. ಮರಳಿ ಮನೆ ಸೇರುವಾಗ ನಡುರಾತ್ರಿ ಆಗಿರುತ್ತದೆ. ಅಧಿಕಾರಿಗಳಿಗೂ ಅಷ್ಟೆ. ಸಭೆ, ಸಮಾಲೋಚನೆ, ತರಬೇತಿ ಎಂದು ಜಿಲ್ಲಾ ಕೇಂದ್ರಕ್ಕೆ ಓಡಾಡಿ ಸ್ಥಳೀಯ ಕೆಲಸ ಕರ್ತವ್ಯ ನಿಭಾಯಿಸಲು ಸಾಧ್ಯವಾಗುವುದಿಲ್ಲ. ವ್ಯರ್ಥ ತಿರುಗಾಟ ಘಟ್ಟದ ಮೇಲಿನ ತಾಲ್ಲೂಕುಗಳಿಗೆ ಶಾಪದಂತೆ ಕಾಡುತ್ತಲೇ ಇದೆ. ಹೀಗಾಗಿ ವಿಭಜನೆ ಎರಡು ಜಿಲ್ಲೆಗಳ ಪ್ರಗತಿಗೂ ಪೂರಕ. ಎರಡೆರಡು ಆಡಳಿತ ವ್ಯವಸ್ಥೆ, ಎರಡೆರಡು ಅನುದಾನದಿಂದ ಅವಳಿ ಜಿಲ್ಲೆಗಳ ಅಭಿವೃದ್ಧಿ ನಕ್ಷೆಯೇ ಬದಲಾಗಲಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಶಿರಸಿ ಜಿಲ್ಲೆ ಮಾಡುವ ಪ್ರಯತ್ನ ಪಡದಿದ್ದರೂ ಹಲವು ಪ್ರತ್ಯೇಕ ಜಿಲ್ಲಾ ಮಟ್ಟದ ಕಚೇರಿ ಶಿರಸಿಗೆ ತಂದಿದ್ದರು. ಆಗ ಶಿಕ್ಷಣ ಮಂತ್ರಿಯಾಗಿದ್ದರಿಂದ ಶಿರಸಿಯನ್ನು ಶೈಕ್ಷಣಿಕ ಜಿಲ್ಲೆಯಾಗಿಸಿ ಉತ್ತರ ಕನ್ನಡದಿಂದ ಬೇರ್ಪಡಿಸಿದ್ದರು. ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಕಚೇರಿಗಳು ಶಿರಸಿಯಲ್ಲಿದೆ. ಶಿರಸಿಗೆ ಜಿಲ್ಲಾ ಕೇಂದ್ರವಾಗುವ ಅರ್ಹತೆ, ಅನುಕೂಲತೆ ಎರಡೂ ಇದೆ. ಉತ್ತರ ಕನ್ನಡದ ಜಿಲ್ಲಾ ಕೇಂದ್ರ ಕಾರವಾರವಾದರೂ ವಾಣಿಜ್ಯ, ಆರ್ಥಿಕ ಮತ್ತು ರಾಜಕೀಯ ಆಡಂಬೋಲ ಶಿರಸಿಯೇ. ವಾಣಿಜ್ಯ, ಕೃಷಿ, ಸಹಕಾರಿ ಕ್ಷೇತ್ರದ ಬೃಹತ್ ಸಂಸ್ಥೆಗಳು ಶಿರಸಿಯಲ್ಲಿವೆ. ತೋಟಗಾರಿಕೆ, ಅರಣ್ಯ, ಕಾನೂನು ಮಹಾವಿದ್ಯಾಲಯಗಳಿವೆ. ಜಿಲ್ಲಾ ಮಟ್ಟದ ನ್ಯಾಯಾಲಯ, ಕೃಷಿ ಸಂಶೋಧನಾ ಕೇಂದ್ರ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಿಭಾಗೀಯ ಕಚೇರಿಗಳಿವೆ.

ಜಿಲ್ಲಾ ಕೇಂದ್ರಕ್ಕೆ ಬೇಕಾದ ಹಲವು ಅನುಕೂಲಗಳು, ಸೌಲಭ್ಯಗಳು ಕಟ್ಟಡ ಇನ್ನಿತರ ಸೌಕರ್ಯ ಶಿರಸಿಯಲ್ಲಿದೆ. ಸರ್ಕಾರದ ಅಂಕಿಅಂಶಗಳು ಶಿರಸಿ ಪ್ರತ್ಯೇಕ ಜಿಲ್ಲೆಯ ಪ್ರಸ್ತುತತೆಯನ್ನು ಮನದಟ್ಟು ಮಾಡುತ್ತದೆ. ಹಾಗಂತ ಶಿರಸಿಯ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ದೀರ್ಘ ಕಾಲ ಉತ್ತರ ಕನ್ನಡ ಆಳಿದ ಆರ್.ವಿ. ದೇಶಪಾಂಡೆಯಾಗಲಿ ಈಗ ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಠಾಕುಠೀಕಿಂದ ಓಡಾಡುತ್ತಿರುವ ಶಿವರಾಮ ಹೆಬ್ಬಾರರಾಗಲಿ, ಸಂಸದ ಅನಂತ್ ಕುಮಾರ್ ಹೆಗಡೆಯಾಗಲಿ ಶಿರಸಿ ಜಿಲ್ಲಾ ರಚನೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳ ತ್ರಿಕೋನ ಒಣಪ್ರತಿಷ್ಠೆಯ ಮೋಗಮ್ ಕಾಳದಲ್ಲಿ ಶಿರಸಿ ಜಿಲ್ಲಾ ರಚನೆ ಬೇಡಿಕೆಗೆ ಮಹತ್ವ ಬರುತ್ತಿಲ್ಲ.

ಹೀಗಿದ್ದರೂ ಶಿರಸಿಯಲ್ಲಿ ಜಿಲ್ಲಾ ರಚನೆಯ ಹೋರಾಟ ನಡೆಯುತ್ತಲೇ ಇದೆ. ಕೆಲವು ದಿನಗಳ ಹಿಂದೆ ಕಂದಾಯ ಮಂತ್ರಿಯನ್ನು ಹೋರಾಟ ಸಮಿತಿಯ ನಿಯೋಗ ಭೇಟಿಯಾಗಿ ಇದೇ ಬಜೆಟ್‌ನಲ್ಲಿ ಶಿರಸಿ ಜಿಲ್ಲೆ ರಚನೆ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸರಣಿ ಪ್ರತಿಭಟನೆಗಳು ಘಟ್ಟದ ಮೇಲೆ ನಡೆಯುತ್ತಿದೆ. ನಿಧಾನಕ್ಕೆ ಜಿಲ್ಲಾ ಬೇಡಿಕೆಯ ಹೋರಾಟ ಹುರಿಗಟ್ಟುತ್ತಿದೆ. ಈ ವರದಿ ಬರೆಯುವ ಹೊತ್ತಿಗೆ ಶಿರಸಿ ಬಾರ್ ಅಸೋಸಿಯೇಶನ್ ಮೂಲಕ ಜಿಲ್ಲಾ ಬೇಡಿಕೆ ಮಂಡಿಸಲು ನಿರ್ಧರಿಸಲಾಗಿದೆ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳಿಗೆ ತಮ್ಮನ್ನು ಆರಿಸಿ ಕಳಿಸಿದವರ ಕೂಗು ಕೇಳಿಸುವುದೇ?


ಇದನ್ನೂ ಓದಿ: ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಭಿವೃದ್ಧಿಯ ಹೆಸರಲ್ಲಿ ನಿಮ್ಮ ಬೇಳೆ ಬೇಯಿಸಿಕೊಳ್ಳಬೇಡಿ.
    ಇವತ್ತು, ಉತ್ತರಕನ್ನಡ ವಿಭಿನ್ನವಾಗಿ ನಿಲ್ಲುವುದೇ ಅದರ ವಿಸ್ತಾರ ಮತ್ತು ಎಲ್ಲ ತರಹದ ಭೂ ಪ್ರದೇಶದಿಂದ. ಜಿಲ್ಲೆಯ ವಿಭಜನೆಯಿಂದ ಇನ್ನಷ್ಟು ಕಾಡು ನಾಶ ಮಾಡ್ತಾರೆಯೇ ಹೊರತೂ ಇನ್ನೇನು ಆಗಲ್ಲ…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...