Homeಕರ್ನಾಟಕಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

ಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

- Advertisement -
- Advertisement -

ಮುಕ್ಕಾಲುಪಾಲು ಅರಣ್ಯದಿಂದ ಆವೃತವಾಗಿರುವ ಉತ್ತರ ಕನ್ನಡ ವಿಸ್ತೀರ್ಣದಲ್ಲಿ ಮೂರು ಗೋವಾ ರಾಜ್ಯಕ್ಕೆ ಸಮನಾಗಿದೆ. ಕರಾವಳಿ, ಮಲೆನಾಡು ಮತ್ತು ಅರೆ ಬಯಲುಸೀಮೆ ಒಳಗೊಂಡ ಈ ಜಿಲ್ಲೆ 10291 ಚ.ಕಿ.ಮೀ ನಷ್ಟು ದೊಡ್ಡದು. ವಾಸ್ತವ್ಯ ಹಾಗೂ ಸಾಗುವಳಿಗೆ ಯೋಗ್ಯವಾದ ಪ್ರದೇಶವಿರುವುದು ಶೇ.10 ರಷ್ಟು ಮಾತ್ರ. ಈ ವಿಶಾಲವಾದ ಜಿಲ್ಲೆಯನ್ನು ಎರಡಾಗಿ ವಿಭಾಗಿಸುವುದು ಆಡಳಿತಾತ್ಮಕವಾಗಿ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ನೈಸರ್ಗಿಕ ನ್ಯಾಯತತ್ವದಂತೆ ಸರಿಯಾದ ಕ್ರಮವೆಂಬುದರಲ್ಲಿ ಎರಡು ಮಾತೇ ಇಲ್ಲ. ಆದರೆ ಘಟ್ಟದ ಮೇಲಿನ ಘಟಾನುಘಟಿ ರಾಜಕೀಯ ಪಟುಗಳ ಇಚ್ಛಾಶಕ್ತಿಯ ಕೊರತೆ ಮತ್ತು ಪೆದ್ದುತನದಿಂದ ಜನರು ತೊಂದರೆಗೀಡಾಗಿ ಪರದಾಡುತ್ತಿದ್ದಾರೆ.

ಘಟ್ಟದ ಮೇಲಿನ ಆರು ತಾಲ್ಲೂಕುಗಳನ್ನು ಒಳಗೊಂಡ ’ಕದಂಬ’ ಜಿಲ್ಲೆ ಮತ್ತು ಕರಾವಳಿಯ ಐದು ತಾಲ್ಲೂಕುಗಳ ಜೊತೆ ಜೋಯಿಡ ಸೇರಿಸಿ ಉತ್ತರ ಕನ್ನಡ ಜಿಲ್ಲೆ ರಚನೆ ಮಾಡುವ ಅನಿವಾರ್ಯತೆ ಎದುರಾಗಿ ದಶಕಗಳೇ ಉರುಳಿಹೋಗಿವೆ. ಹಾಗೆ ನೋಡಿದರೆ ಶಿರಸಿಯನ್ನು ಜಿಲ್ಲಾ ಕೇಂದ್ರವಾಗಿಸಿ ಶಿರಸಿ ಜಿಲ್ಲೆ ಮಾಡಬೇಕೆಂಬ ಕೂಗು ಮೂರು ದಶಕಗಳ ಹಿಂದಿನದು. ಭಾವನೆಗಳ ಬಂಧನ, ಅನುಕೂಲತೆ ಸಹಿಸಿಕೊಳ್ಳುವ ಮೂಗರ್ಜಿ ಸ್ವಭಾವ, ಹೋರಾಟದ ಹಠ ಮಾಡದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಸ್ಥಳೀಯ ಶಾಸಕ, ಸಂಸದ, ಸಚಿವರ ಉದಾಸೀನತೆಯಿಂದಾಗಿ ಜಿಲ್ಲೆಯ ಕನಸು ನನಸಾಗಲೇ ಇಲ್ಲ.

ಮೂರ್ನಾಲ್ಕು ತಾಲ್ಲೂಕುಗಳುಳ್ಳ ಉಡುಪಿ, ಹಾವೇರಿ, ಯಾದಗಿರಿಯಂತಹ ಜಿಲ್ಲೆಗಳನ್ನು ಹಿಂದೆ ರಚಿಸಲಾಗಿತ್ತು. ವಿವೇಚನೆ, ವಿವೇಕದಿಂದ ಉತ್ತರ ಕನ್ನಡ ವಿಭಾಗಿಸಿದರೆ ಆರಾರು ತಾಲ್ಲೂಕುಗಳ ಎರಡು ಜಿಲ್ಲೆ ಹುಟ್ಟುಹಾಕಬಹುದು. ಜೋಯಿಡ ಘಟ್ಟದ ಪ್ರದೇಶದಲ್ಲಿದ್ದರೂ, ಅದೂ ಕಾರವಾರಕ್ಕೆ ಹತ್ತಿರದಲ್ಲಿದೆ. ಅದನ್ನು ಶಿರಸಿ ಜಿಲ್ಲೆಗೆ ಸೇರಿಸಿದರೆ ಪ್ರಸ್ತಾವಿತ ಜಿಲ್ಲಾ ಕೇಂದ್ರ ಶಿರಸಿಯಿಂದ ನೂರೈವತ್ತು ಕಿ.ಮೀ ಅಂತರದಲ್ಲಿರುತ್ತದೆ. ಜೊತೆಗೆ ಜೋಯಿಡದ ಸಾಂಸ್ಕೃತಿಕ, ವ್ಯಾವಹಾರಿಕ, ಕೌಟುಂಬಿಕ ಭಾಷಾ ಬಾಂಧವ್ಯ ಹೆಚ್ಚಾಗಿ ಕಾರವಾರದೊಂದಿಗಿದೆ. ಜೋಯಿಡದಲ್ಲಿ ಕೊಂಕಣಿ ಮಾತನಾಡುವ ಮಂದಿಯೇ ಜಾಸ್ತಿ. ಹೀಗಾಗಿ ಕನ್ನಡ ಮಾತನಾಡುವ ಶಿರಸಿ ಸೀಮೆ ಜೊತೆ ಜೋಯಿಡಕ್ಕೆ ಹೊಂದಾಣಿಕೆ ಹಲವು ಕಾರಣದಿಂದ ಸಾಧ್ಯವಾಗದು. ಹಾಗಾಗಿ ಅದನ್ನು ಕರಾವಳಿಯ ಉತ್ತರ ಕನ್ನಡದ ಜೊತೆ ಇಡುವುದೇ ಸೂಕ್ತ.

ಈಚೆಗೆ ದಾಂಡೇಲಿ ತಾಲ್ಲೂಕು ರಚನೆಯಾಗಿದೆ. ಕನ್ನಡದ ಮೊದಲ ರಾಜಧಾನಿ ಎಂಬ ಹೆಗ್ಗಳಿಕೆಯ ಬನವಾಸಿ ತಾಲ್ಲೂಕು ರಚನೆಯ ಹೋರಾಟ ಜೋರಾಗಿದೆ. ಕರಾವಳಿಯ ಗೋಕರ್ಣ ತಾಲ್ಲೂಕು ಮಾಡುವ ಪ್ರಸ್ತಾಪವೂ ಇದೆ. ಈ ಎರಡೂ ತಾಲ್ಲೂಕುಗಳು ಅಸ್ತಿತ್ವಕ್ಕೆ ಬಂದರೆ ಒಟ್ಟು 14 ತಾಲ್ಲೂಕುಗಳಾಗಿ ಎರಡೂ ಜಿಲ್ಲೆಗೆ ತಲಾ ಏಳೇಳು ತಾಲ್ಲೂಕುಗಳು ಸೇರುತ್ತವೆ. ಈ ಭೌಗೋಳಿಕ ಕಾರಣ ಹೊಸ ಜಿಲ್ಲೆಗೆ ಒತ್ತಾಸೆಯಾಗಿ ನಿಂತಿದೆ. ಶಿರಸಿ, ಸಿದ್ಧಾಪುರ, ಮುಂಡಗೋಡ, ಯಲ್ಲಾಪುರ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಿರುವ ಶಿರಸಿ ಜಿಲ್ಲೆ ಮತ್ತು ಜೋಯಿಡ, ಕಾರವಾರ, ಅಂಕೋಲಾ, ಕುಮುಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳ ಉತ್ತರ ಕನ್ನಡ (ಕರಾವಳಿ) ಜಿಲ್ಲೆ ರಚನೆ ಮಾಡುವುದರಿಂದ ಅಭಿವೃದ್ಧಿಯೂ ವೇಗ ಪಡೆದುಕೊಳ್ಳುತ್ತದೆ. ಆಡಳಿತಾತ್ಮಕವಾಗಿ ಅಧಿಕಾರಿಗಳ ಕಾರ್ಯಕ್ಷಮತೆ ಎಚ್ಚರ ತಪ್ಪದಂತೆ ನಿಗಾ ವಹಿಸುತ್ತದೆ. ಅವಳಿ ಜಿಲ್ಲಾ ರಚನೆಯಿಂದ ವೈವಿಧ್ಯತೆ, ವೈಶಿಷ್ಟ್ಯತೆ, ಪ್ರಾಕೃತಿಕ ಸೊಬಗಿಗೂ ಭಂಗ ಬರದು. ಉಡುಪಿ ದಕ್ಷಿಣ ಕನ್ನಡದ ಸಂಬಂಧದಂತೆ ಕಾರವಾರ-ಶಿರಸಿ ಜಿಲ್ಲೆಗಳ ನಂಟು ಅನ್ಯೋನ್ಯವಾಗೇ ಇರುತ್ತದೆ.

ಈಗಿನ ಜಿಲ್ಲಾ ಕೇಂದ್ರ ಕಾರವಾರದಿಂದ ಘಟ್ಟದ ಮೇಲಿನ ಎಲ್ಲಾ ತಾಲ್ಲೂಕುಗಳು ತುಂಬಾ ದೂರದಲ್ಲಿದೆ. ಮುಂಡಗೋಡದವರು ಸರ್ಕಾರಿ ಕೆಲಸ, ಕಾರ್ಯಕ್ಕಾಗಿ ಜಿಲ್ಲಾ ಕೇಂದ್ರಕ್ಕೆ ಬರಬೇಕೆಂದರೆ ಬರೋಬ್ಬರಿ 140 ಕಿ.ಮೀ ಕ್ರಮಿಸಬೇಕು. ಅವರು ಜಿಲ್ಲಾ ಕೇಂದ್ರ ತಲುಪುವಾಗಲೇ ಅರ್ಧ ದಿನ ಕಳೆದಿರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಸಿಕ್ಕರೆ ಪುಣ್ಯ. ಮರಳಿ ಮನೆ ಸೇರುವಾಗ ನಡುರಾತ್ರಿ ಆಗಿರುತ್ತದೆ. ಅಧಿಕಾರಿಗಳಿಗೂ ಅಷ್ಟೆ. ಸಭೆ, ಸಮಾಲೋಚನೆ, ತರಬೇತಿ ಎಂದು ಜಿಲ್ಲಾ ಕೇಂದ್ರಕ್ಕೆ ಓಡಾಡಿ ಸ್ಥಳೀಯ ಕೆಲಸ ಕರ್ತವ್ಯ ನಿಭಾಯಿಸಲು ಸಾಧ್ಯವಾಗುವುದಿಲ್ಲ. ವ್ಯರ್ಥ ತಿರುಗಾಟ ಘಟ್ಟದ ಮೇಲಿನ ತಾಲ್ಲೂಕುಗಳಿಗೆ ಶಾಪದಂತೆ ಕಾಡುತ್ತಲೇ ಇದೆ. ಹೀಗಾಗಿ ವಿಭಜನೆ ಎರಡು ಜಿಲ್ಲೆಗಳ ಪ್ರಗತಿಗೂ ಪೂರಕ. ಎರಡೆರಡು ಆಡಳಿತ ವ್ಯವಸ್ಥೆ, ಎರಡೆರಡು ಅನುದಾನದಿಂದ ಅವಳಿ ಜಿಲ್ಲೆಗಳ ಅಭಿವೃದ್ಧಿ ನಕ್ಷೆಯೇ ಬದಲಾಗಲಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಶಿರಸಿ ಜಿಲ್ಲೆ ಮಾಡುವ ಪ್ರಯತ್ನ ಪಡದಿದ್ದರೂ ಹಲವು ಪ್ರತ್ಯೇಕ ಜಿಲ್ಲಾ ಮಟ್ಟದ ಕಚೇರಿ ಶಿರಸಿಗೆ ತಂದಿದ್ದರು. ಆಗ ಶಿಕ್ಷಣ ಮಂತ್ರಿಯಾಗಿದ್ದರಿಂದ ಶಿರಸಿಯನ್ನು ಶೈಕ್ಷಣಿಕ ಜಿಲ್ಲೆಯಾಗಿಸಿ ಉತ್ತರ ಕನ್ನಡದಿಂದ ಬೇರ್ಪಡಿಸಿದ್ದರು. ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಕಚೇರಿಗಳು ಶಿರಸಿಯಲ್ಲಿದೆ. ಶಿರಸಿಗೆ ಜಿಲ್ಲಾ ಕೇಂದ್ರವಾಗುವ ಅರ್ಹತೆ, ಅನುಕೂಲತೆ ಎರಡೂ ಇದೆ. ಉತ್ತರ ಕನ್ನಡದ ಜಿಲ್ಲಾ ಕೇಂದ್ರ ಕಾರವಾರವಾದರೂ ವಾಣಿಜ್ಯ, ಆರ್ಥಿಕ ಮತ್ತು ರಾಜಕೀಯ ಆಡಂಬೋಲ ಶಿರಸಿಯೇ. ವಾಣಿಜ್ಯ, ಕೃಷಿ, ಸಹಕಾರಿ ಕ್ಷೇತ್ರದ ಬೃಹತ್ ಸಂಸ್ಥೆಗಳು ಶಿರಸಿಯಲ್ಲಿವೆ. ತೋಟಗಾರಿಕೆ, ಅರಣ್ಯ, ಕಾನೂನು ಮಹಾವಿದ್ಯಾಲಯಗಳಿವೆ. ಜಿಲ್ಲಾ ಮಟ್ಟದ ನ್ಯಾಯಾಲಯ, ಕೃಷಿ ಸಂಶೋಧನಾ ಕೇಂದ್ರ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಿಭಾಗೀಯ ಕಚೇರಿಗಳಿವೆ.

ಜಿಲ್ಲಾ ಕೇಂದ್ರಕ್ಕೆ ಬೇಕಾದ ಹಲವು ಅನುಕೂಲಗಳು, ಸೌಲಭ್ಯಗಳು ಕಟ್ಟಡ ಇನ್ನಿತರ ಸೌಕರ್ಯ ಶಿರಸಿಯಲ್ಲಿದೆ. ಸರ್ಕಾರದ ಅಂಕಿಅಂಶಗಳು ಶಿರಸಿ ಪ್ರತ್ಯೇಕ ಜಿಲ್ಲೆಯ ಪ್ರಸ್ತುತತೆಯನ್ನು ಮನದಟ್ಟು ಮಾಡುತ್ತದೆ. ಹಾಗಂತ ಶಿರಸಿಯ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ದೀರ್ಘ ಕಾಲ ಉತ್ತರ ಕನ್ನಡ ಆಳಿದ ಆರ್.ವಿ. ದೇಶಪಾಂಡೆಯಾಗಲಿ ಈಗ ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಠಾಕುಠೀಕಿಂದ ಓಡಾಡುತ್ತಿರುವ ಶಿವರಾಮ ಹೆಬ್ಬಾರರಾಗಲಿ, ಸಂಸದ ಅನಂತ್ ಕುಮಾರ್ ಹೆಗಡೆಯಾಗಲಿ ಶಿರಸಿ ಜಿಲ್ಲಾ ರಚನೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳ ತ್ರಿಕೋನ ಒಣಪ್ರತಿಷ್ಠೆಯ ಮೋಗಮ್ ಕಾಳದಲ್ಲಿ ಶಿರಸಿ ಜಿಲ್ಲಾ ರಚನೆ ಬೇಡಿಕೆಗೆ ಮಹತ್ವ ಬರುತ್ತಿಲ್ಲ.

ಹೀಗಿದ್ದರೂ ಶಿರಸಿಯಲ್ಲಿ ಜಿಲ್ಲಾ ರಚನೆಯ ಹೋರಾಟ ನಡೆಯುತ್ತಲೇ ಇದೆ. ಕೆಲವು ದಿನಗಳ ಹಿಂದೆ ಕಂದಾಯ ಮಂತ್ರಿಯನ್ನು ಹೋರಾಟ ಸಮಿತಿಯ ನಿಯೋಗ ಭೇಟಿಯಾಗಿ ಇದೇ ಬಜೆಟ್‌ನಲ್ಲಿ ಶಿರಸಿ ಜಿಲ್ಲೆ ರಚನೆ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸರಣಿ ಪ್ರತಿಭಟನೆಗಳು ಘಟ್ಟದ ಮೇಲೆ ನಡೆಯುತ್ತಿದೆ. ನಿಧಾನಕ್ಕೆ ಜಿಲ್ಲಾ ಬೇಡಿಕೆಯ ಹೋರಾಟ ಹುರಿಗಟ್ಟುತ್ತಿದೆ. ಈ ವರದಿ ಬರೆಯುವ ಹೊತ್ತಿಗೆ ಶಿರಸಿ ಬಾರ್ ಅಸೋಸಿಯೇಶನ್ ಮೂಲಕ ಜಿಲ್ಲಾ ಬೇಡಿಕೆ ಮಂಡಿಸಲು ನಿರ್ಧರಿಸಲಾಗಿದೆ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳಿಗೆ ತಮ್ಮನ್ನು ಆರಿಸಿ ಕಳಿಸಿದವರ ಕೂಗು ಕೇಳಿಸುವುದೇ?


ಇದನ್ನೂ ಓದಿ: ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಭಿವೃದ್ಧಿಯ ಹೆಸರಲ್ಲಿ ನಿಮ್ಮ ಬೇಳೆ ಬೇಯಿಸಿಕೊಳ್ಳಬೇಡಿ.
    ಇವತ್ತು, ಉತ್ತರಕನ್ನಡ ವಿಭಿನ್ನವಾಗಿ ನಿಲ್ಲುವುದೇ ಅದರ ವಿಸ್ತಾರ ಮತ್ತು ಎಲ್ಲ ತರಹದ ಭೂ ಪ್ರದೇಶದಿಂದ. ಜಿಲ್ಲೆಯ ವಿಭಜನೆಯಿಂದ ಇನ್ನಷ್ಟು ಕಾಡು ನಾಶ ಮಾಡ್ತಾರೆಯೇ ಹೊರತೂ ಇನ್ನೇನು ಆಗಲ್ಲ…

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...