Homeಕರ್ನಾಟಕಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

ಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

- Advertisement -
- Advertisement -

ಮುಕ್ಕಾಲುಪಾಲು ಅರಣ್ಯದಿಂದ ಆವೃತವಾಗಿರುವ ಉತ್ತರ ಕನ್ನಡ ವಿಸ್ತೀರ್ಣದಲ್ಲಿ ಮೂರು ಗೋವಾ ರಾಜ್ಯಕ್ಕೆ ಸಮನಾಗಿದೆ. ಕರಾವಳಿ, ಮಲೆನಾಡು ಮತ್ತು ಅರೆ ಬಯಲುಸೀಮೆ ಒಳಗೊಂಡ ಈ ಜಿಲ್ಲೆ 10291 ಚ.ಕಿ.ಮೀ ನಷ್ಟು ದೊಡ್ಡದು. ವಾಸ್ತವ್ಯ ಹಾಗೂ ಸಾಗುವಳಿಗೆ ಯೋಗ್ಯವಾದ ಪ್ರದೇಶವಿರುವುದು ಶೇ.10 ರಷ್ಟು ಮಾತ್ರ. ಈ ವಿಶಾಲವಾದ ಜಿಲ್ಲೆಯನ್ನು ಎರಡಾಗಿ ವಿಭಾಗಿಸುವುದು ಆಡಳಿತಾತ್ಮಕವಾಗಿ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ನೈಸರ್ಗಿಕ ನ್ಯಾಯತತ್ವದಂತೆ ಸರಿಯಾದ ಕ್ರಮವೆಂಬುದರಲ್ಲಿ ಎರಡು ಮಾತೇ ಇಲ್ಲ. ಆದರೆ ಘಟ್ಟದ ಮೇಲಿನ ಘಟಾನುಘಟಿ ರಾಜಕೀಯ ಪಟುಗಳ ಇಚ್ಛಾಶಕ್ತಿಯ ಕೊರತೆ ಮತ್ತು ಪೆದ್ದುತನದಿಂದ ಜನರು ತೊಂದರೆಗೀಡಾಗಿ ಪರದಾಡುತ್ತಿದ್ದಾರೆ.

ಘಟ್ಟದ ಮೇಲಿನ ಆರು ತಾಲ್ಲೂಕುಗಳನ್ನು ಒಳಗೊಂಡ ’ಕದಂಬ’ ಜಿಲ್ಲೆ ಮತ್ತು ಕರಾವಳಿಯ ಐದು ತಾಲ್ಲೂಕುಗಳ ಜೊತೆ ಜೋಯಿಡ ಸೇರಿಸಿ ಉತ್ತರ ಕನ್ನಡ ಜಿಲ್ಲೆ ರಚನೆ ಮಾಡುವ ಅನಿವಾರ್ಯತೆ ಎದುರಾಗಿ ದಶಕಗಳೇ ಉರುಳಿಹೋಗಿವೆ. ಹಾಗೆ ನೋಡಿದರೆ ಶಿರಸಿಯನ್ನು ಜಿಲ್ಲಾ ಕೇಂದ್ರವಾಗಿಸಿ ಶಿರಸಿ ಜಿಲ್ಲೆ ಮಾಡಬೇಕೆಂಬ ಕೂಗು ಮೂರು ದಶಕಗಳ ಹಿಂದಿನದು. ಭಾವನೆಗಳ ಬಂಧನ, ಅನುಕೂಲತೆ ಸಹಿಸಿಕೊಳ್ಳುವ ಮೂಗರ್ಜಿ ಸ್ವಭಾವ, ಹೋರಾಟದ ಹಠ ಮಾಡದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಸ್ಥಳೀಯ ಶಾಸಕ, ಸಂಸದ, ಸಚಿವರ ಉದಾಸೀನತೆಯಿಂದಾಗಿ ಜಿಲ್ಲೆಯ ಕನಸು ನನಸಾಗಲೇ ಇಲ್ಲ.

ಮೂರ್ನಾಲ್ಕು ತಾಲ್ಲೂಕುಗಳುಳ್ಳ ಉಡುಪಿ, ಹಾವೇರಿ, ಯಾದಗಿರಿಯಂತಹ ಜಿಲ್ಲೆಗಳನ್ನು ಹಿಂದೆ ರಚಿಸಲಾಗಿತ್ತು. ವಿವೇಚನೆ, ವಿವೇಕದಿಂದ ಉತ್ತರ ಕನ್ನಡ ವಿಭಾಗಿಸಿದರೆ ಆರಾರು ತಾಲ್ಲೂಕುಗಳ ಎರಡು ಜಿಲ್ಲೆ ಹುಟ್ಟುಹಾಕಬಹುದು. ಜೋಯಿಡ ಘಟ್ಟದ ಪ್ರದೇಶದಲ್ಲಿದ್ದರೂ, ಅದೂ ಕಾರವಾರಕ್ಕೆ ಹತ್ತಿರದಲ್ಲಿದೆ. ಅದನ್ನು ಶಿರಸಿ ಜಿಲ್ಲೆಗೆ ಸೇರಿಸಿದರೆ ಪ್ರಸ್ತಾವಿತ ಜಿಲ್ಲಾ ಕೇಂದ್ರ ಶಿರಸಿಯಿಂದ ನೂರೈವತ್ತು ಕಿ.ಮೀ ಅಂತರದಲ್ಲಿರುತ್ತದೆ. ಜೊತೆಗೆ ಜೋಯಿಡದ ಸಾಂಸ್ಕೃತಿಕ, ವ್ಯಾವಹಾರಿಕ, ಕೌಟುಂಬಿಕ ಭಾಷಾ ಬಾಂಧವ್ಯ ಹೆಚ್ಚಾಗಿ ಕಾರವಾರದೊಂದಿಗಿದೆ. ಜೋಯಿಡದಲ್ಲಿ ಕೊಂಕಣಿ ಮಾತನಾಡುವ ಮಂದಿಯೇ ಜಾಸ್ತಿ. ಹೀಗಾಗಿ ಕನ್ನಡ ಮಾತನಾಡುವ ಶಿರಸಿ ಸೀಮೆ ಜೊತೆ ಜೋಯಿಡಕ್ಕೆ ಹೊಂದಾಣಿಕೆ ಹಲವು ಕಾರಣದಿಂದ ಸಾಧ್ಯವಾಗದು. ಹಾಗಾಗಿ ಅದನ್ನು ಕರಾವಳಿಯ ಉತ್ತರ ಕನ್ನಡದ ಜೊತೆ ಇಡುವುದೇ ಸೂಕ್ತ.

ಈಚೆಗೆ ದಾಂಡೇಲಿ ತಾಲ್ಲೂಕು ರಚನೆಯಾಗಿದೆ. ಕನ್ನಡದ ಮೊದಲ ರಾಜಧಾನಿ ಎಂಬ ಹೆಗ್ಗಳಿಕೆಯ ಬನವಾಸಿ ತಾಲ್ಲೂಕು ರಚನೆಯ ಹೋರಾಟ ಜೋರಾಗಿದೆ. ಕರಾವಳಿಯ ಗೋಕರ್ಣ ತಾಲ್ಲೂಕು ಮಾಡುವ ಪ್ರಸ್ತಾಪವೂ ಇದೆ. ಈ ಎರಡೂ ತಾಲ್ಲೂಕುಗಳು ಅಸ್ತಿತ್ವಕ್ಕೆ ಬಂದರೆ ಒಟ್ಟು 14 ತಾಲ್ಲೂಕುಗಳಾಗಿ ಎರಡೂ ಜಿಲ್ಲೆಗೆ ತಲಾ ಏಳೇಳು ತಾಲ್ಲೂಕುಗಳು ಸೇರುತ್ತವೆ. ಈ ಭೌಗೋಳಿಕ ಕಾರಣ ಹೊಸ ಜಿಲ್ಲೆಗೆ ಒತ್ತಾಸೆಯಾಗಿ ನಿಂತಿದೆ. ಶಿರಸಿ, ಸಿದ್ಧಾಪುರ, ಮುಂಡಗೋಡ, ಯಲ್ಲಾಪುರ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಿರುವ ಶಿರಸಿ ಜಿಲ್ಲೆ ಮತ್ತು ಜೋಯಿಡ, ಕಾರವಾರ, ಅಂಕೋಲಾ, ಕುಮುಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳ ಉತ್ತರ ಕನ್ನಡ (ಕರಾವಳಿ) ಜಿಲ್ಲೆ ರಚನೆ ಮಾಡುವುದರಿಂದ ಅಭಿವೃದ್ಧಿಯೂ ವೇಗ ಪಡೆದುಕೊಳ್ಳುತ್ತದೆ. ಆಡಳಿತಾತ್ಮಕವಾಗಿ ಅಧಿಕಾರಿಗಳ ಕಾರ್ಯಕ್ಷಮತೆ ಎಚ್ಚರ ತಪ್ಪದಂತೆ ನಿಗಾ ವಹಿಸುತ್ತದೆ. ಅವಳಿ ಜಿಲ್ಲಾ ರಚನೆಯಿಂದ ವೈವಿಧ್ಯತೆ, ವೈಶಿಷ್ಟ್ಯತೆ, ಪ್ರಾಕೃತಿಕ ಸೊಬಗಿಗೂ ಭಂಗ ಬರದು. ಉಡುಪಿ ದಕ್ಷಿಣ ಕನ್ನಡದ ಸಂಬಂಧದಂತೆ ಕಾರವಾರ-ಶಿರಸಿ ಜಿಲ್ಲೆಗಳ ನಂಟು ಅನ್ಯೋನ್ಯವಾಗೇ ಇರುತ್ತದೆ.

ಈಗಿನ ಜಿಲ್ಲಾ ಕೇಂದ್ರ ಕಾರವಾರದಿಂದ ಘಟ್ಟದ ಮೇಲಿನ ಎಲ್ಲಾ ತಾಲ್ಲೂಕುಗಳು ತುಂಬಾ ದೂರದಲ್ಲಿದೆ. ಮುಂಡಗೋಡದವರು ಸರ್ಕಾರಿ ಕೆಲಸ, ಕಾರ್ಯಕ್ಕಾಗಿ ಜಿಲ್ಲಾ ಕೇಂದ್ರಕ್ಕೆ ಬರಬೇಕೆಂದರೆ ಬರೋಬ್ಬರಿ 140 ಕಿ.ಮೀ ಕ್ರಮಿಸಬೇಕು. ಅವರು ಜಿಲ್ಲಾ ಕೇಂದ್ರ ತಲುಪುವಾಗಲೇ ಅರ್ಧ ದಿನ ಕಳೆದಿರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಸಿಕ್ಕರೆ ಪುಣ್ಯ. ಮರಳಿ ಮನೆ ಸೇರುವಾಗ ನಡುರಾತ್ರಿ ಆಗಿರುತ್ತದೆ. ಅಧಿಕಾರಿಗಳಿಗೂ ಅಷ್ಟೆ. ಸಭೆ, ಸಮಾಲೋಚನೆ, ತರಬೇತಿ ಎಂದು ಜಿಲ್ಲಾ ಕೇಂದ್ರಕ್ಕೆ ಓಡಾಡಿ ಸ್ಥಳೀಯ ಕೆಲಸ ಕರ್ತವ್ಯ ನಿಭಾಯಿಸಲು ಸಾಧ್ಯವಾಗುವುದಿಲ್ಲ. ವ್ಯರ್ಥ ತಿರುಗಾಟ ಘಟ್ಟದ ಮೇಲಿನ ತಾಲ್ಲೂಕುಗಳಿಗೆ ಶಾಪದಂತೆ ಕಾಡುತ್ತಲೇ ಇದೆ. ಹೀಗಾಗಿ ವಿಭಜನೆ ಎರಡು ಜಿಲ್ಲೆಗಳ ಪ್ರಗತಿಗೂ ಪೂರಕ. ಎರಡೆರಡು ಆಡಳಿತ ವ್ಯವಸ್ಥೆ, ಎರಡೆರಡು ಅನುದಾನದಿಂದ ಅವಳಿ ಜಿಲ್ಲೆಗಳ ಅಭಿವೃದ್ಧಿ ನಕ್ಷೆಯೇ ಬದಲಾಗಲಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಶಿರಸಿ ಜಿಲ್ಲೆ ಮಾಡುವ ಪ್ರಯತ್ನ ಪಡದಿದ್ದರೂ ಹಲವು ಪ್ರತ್ಯೇಕ ಜಿಲ್ಲಾ ಮಟ್ಟದ ಕಚೇರಿ ಶಿರಸಿಗೆ ತಂದಿದ್ದರು. ಆಗ ಶಿಕ್ಷಣ ಮಂತ್ರಿಯಾಗಿದ್ದರಿಂದ ಶಿರಸಿಯನ್ನು ಶೈಕ್ಷಣಿಕ ಜಿಲ್ಲೆಯಾಗಿಸಿ ಉತ್ತರ ಕನ್ನಡದಿಂದ ಬೇರ್ಪಡಿಸಿದ್ದರು. ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಕಚೇರಿಗಳು ಶಿರಸಿಯಲ್ಲಿದೆ. ಶಿರಸಿಗೆ ಜಿಲ್ಲಾ ಕೇಂದ್ರವಾಗುವ ಅರ್ಹತೆ, ಅನುಕೂಲತೆ ಎರಡೂ ಇದೆ. ಉತ್ತರ ಕನ್ನಡದ ಜಿಲ್ಲಾ ಕೇಂದ್ರ ಕಾರವಾರವಾದರೂ ವಾಣಿಜ್ಯ, ಆರ್ಥಿಕ ಮತ್ತು ರಾಜಕೀಯ ಆಡಂಬೋಲ ಶಿರಸಿಯೇ. ವಾಣಿಜ್ಯ, ಕೃಷಿ, ಸಹಕಾರಿ ಕ್ಷೇತ್ರದ ಬೃಹತ್ ಸಂಸ್ಥೆಗಳು ಶಿರಸಿಯಲ್ಲಿವೆ. ತೋಟಗಾರಿಕೆ, ಅರಣ್ಯ, ಕಾನೂನು ಮಹಾವಿದ್ಯಾಲಯಗಳಿವೆ. ಜಿಲ್ಲಾ ಮಟ್ಟದ ನ್ಯಾಯಾಲಯ, ಕೃಷಿ ಸಂಶೋಧನಾ ಕೇಂದ್ರ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಿಭಾಗೀಯ ಕಚೇರಿಗಳಿವೆ.

ಜಿಲ್ಲಾ ಕೇಂದ್ರಕ್ಕೆ ಬೇಕಾದ ಹಲವು ಅನುಕೂಲಗಳು, ಸೌಲಭ್ಯಗಳು ಕಟ್ಟಡ ಇನ್ನಿತರ ಸೌಕರ್ಯ ಶಿರಸಿಯಲ್ಲಿದೆ. ಸರ್ಕಾರದ ಅಂಕಿಅಂಶಗಳು ಶಿರಸಿ ಪ್ರತ್ಯೇಕ ಜಿಲ್ಲೆಯ ಪ್ರಸ್ತುತತೆಯನ್ನು ಮನದಟ್ಟು ಮಾಡುತ್ತದೆ. ಹಾಗಂತ ಶಿರಸಿಯ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ದೀರ್ಘ ಕಾಲ ಉತ್ತರ ಕನ್ನಡ ಆಳಿದ ಆರ್.ವಿ. ದೇಶಪಾಂಡೆಯಾಗಲಿ ಈಗ ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಠಾಕುಠೀಕಿಂದ ಓಡಾಡುತ್ತಿರುವ ಶಿವರಾಮ ಹೆಬ್ಬಾರರಾಗಲಿ, ಸಂಸದ ಅನಂತ್ ಕುಮಾರ್ ಹೆಗಡೆಯಾಗಲಿ ಶಿರಸಿ ಜಿಲ್ಲಾ ರಚನೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳ ತ್ರಿಕೋನ ಒಣಪ್ರತಿಷ್ಠೆಯ ಮೋಗಮ್ ಕಾಳದಲ್ಲಿ ಶಿರಸಿ ಜಿಲ್ಲಾ ರಚನೆ ಬೇಡಿಕೆಗೆ ಮಹತ್ವ ಬರುತ್ತಿಲ್ಲ.

ಹೀಗಿದ್ದರೂ ಶಿರಸಿಯಲ್ಲಿ ಜಿಲ್ಲಾ ರಚನೆಯ ಹೋರಾಟ ನಡೆಯುತ್ತಲೇ ಇದೆ. ಕೆಲವು ದಿನಗಳ ಹಿಂದೆ ಕಂದಾಯ ಮಂತ್ರಿಯನ್ನು ಹೋರಾಟ ಸಮಿತಿಯ ನಿಯೋಗ ಭೇಟಿಯಾಗಿ ಇದೇ ಬಜೆಟ್‌ನಲ್ಲಿ ಶಿರಸಿ ಜಿಲ್ಲೆ ರಚನೆ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸರಣಿ ಪ್ರತಿಭಟನೆಗಳು ಘಟ್ಟದ ಮೇಲೆ ನಡೆಯುತ್ತಿದೆ. ನಿಧಾನಕ್ಕೆ ಜಿಲ್ಲಾ ಬೇಡಿಕೆಯ ಹೋರಾಟ ಹುರಿಗಟ್ಟುತ್ತಿದೆ. ಈ ವರದಿ ಬರೆಯುವ ಹೊತ್ತಿಗೆ ಶಿರಸಿ ಬಾರ್ ಅಸೋಸಿಯೇಶನ್ ಮೂಲಕ ಜಿಲ್ಲಾ ಬೇಡಿಕೆ ಮಂಡಿಸಲು ನಿರ್ಧರಿಸಲಾಗಿದೆ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳಿಗೆ ತಮ್ಮನ್ನು ಆರಿಸಿ ಕಳಿಸಿದವರ ಕೂಗು ಕೇಳಿಸುವುದೇ?


ಇದನ್ನೂ ಓದಿ: ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಭಿವೃದ್ಧಿಯ ಹೆಸರಲ್ಲಿ ನಿಮ್ಮ ಬೇಳೆ ಬೇಯಿಸಿಕೊಳ್ಳಬೇಡಿ.
    ಇವತ್ತು, ಉತ್ತರಕನ್ನಡ ವಿಭಿನ್ನವಾಗಿ ನಿಲ್ಲುವುದೇ ಅದರ ವಿಸ್ತಾರ ಮತ್ತು ಎಲ್ಲ ತರಹದ ಭೂ ಪ್ರದೇಶದಿಂದ. ಜಿಲ್ಲೆಯ ವಿಭಜನೆಯಿಂದ ಇನ್ನಷ್ಟು ಕಾಡು ನಾಶ ಮಾಡ್ತಾರೆಯೇ ಹೊರತೂ ಇನ್ನೇನು ಆಗಲ್ಲ…

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...