Homeಕರ್ನಾಟಕಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

ಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

- Advertisement -
- Advertisement -

ಮುಕ್ಕಾಲುಪಾಲು ಅರಣ್ಯದಿಂದ ಆವೃತವಾಗಿರುವ ಉತ್ತರ ಕನ್ನಡ ವಿಸ್ತೀರ್ಣದಲ್ಲಿ ಮೂರು ಗೋವಾ ರಾಜ್ಯಕ್ಕೆ ಸಮನಾಗಿದೆ. ಕರಾವಳಿ, ಮಲೆನಾಡು ಮತ್ತು ಅರೆ ಬಯಲುಸೀಮೆ ಒಳಗೊಂಡ ಈ ಜಿಲ್ಲೆ 10291 ಚ.ಕಿ.ಮೀ ನಷ್ಟು ದೊಡ್ಡದು. ವಾಸ್ತವ್ಯ ಹಾಗೂ ಸಾಗುವಳಿಗೆ ಯೋಗ್ಯವಾದ ಪ್ರದೇಶವಿರುವುದು ಶೇ.10 ರಷ್ಟು ಮಾತ್ರ. ಈ ವಿಶಾಲವಾದ ಜಿಲ್ಲೆಯನ್ನು ಎರಡಾಗಿ ವಿಭಾಗಿಸುವುದು ಆಡಳಿತಾತ್ಮಕವಾಗಿ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ನೈಸರ್ಗಿಕ ನ್ಯಾಯತತ್ವದಂತೆ ಸರಿಯಾದ ಕ್ರಮವೆಂಬುದರಲ್ಲಿ ಎರಡು ಮಾತೇ ಇಲ್ಲ. ಆದರೆ ಘಟ್ಟದ ಮೇಲಿನ ಘಟಾನುಘಟಿ ರಾಜಕೀಯ ಪಟುಗಳ ಇಚ್ಛಾಶಕ್ತಿಯ ಕೊರತೆ ಮತ್ತು ಪೆದ್ದುತನದಿಂದ ಜನರು ತೊಂದರೆಗೀಡಾಗಿ ಪರದಾಡುತ್ತಿದ್ದಾರೆ.

ಘಟ್ಟದ ಮೇಲಿನ ಆರು ತಾಲ್ಲೂಕುಗಳನ್ನು ಒಳಗೊಂಡ ’ಕದಂಬ’ ಜಿಲ್ಲೆ ಮತ್ತು ಕರಾವಳಿಯ ಐದು ತಾಲ್ಲೂಕುಗಳ ಜೊತೆ ಜೋಯಿಡ ಸೇರಿಸಿ ಉತ್ತರ ಕನ್ನಡ ಜಿಲ್ಲೆ ರಚನೆ ಮಾಡುವ ಅನಿವಾರ್ಯತೆ ಎದುರಾಗಿ ದಶಕಗಳೇ ಉರುಳಿಹೋಗಿವೆ. ಹಾಗೆ ನೋಡಿದರೆ ಶಿರಸಿಯನ್ನು ಜಿಲ್ಲಾ ಕೇಂದ್ರವಾಗಿಸಿ ಶಿರಸಿ ಜಿಲ್ಲೆ ಮಾಡಬೇಕೆಂಬ ಕೂಗು ಮೂರು ದಶಕಗಳ ಹಿಂದಿನದು. ಭಾವನೆಗಳ ಬಂಧನ, ಅನುಕೂಲತೆ ಸಹಿಸಿಕೊಳ್ಳುವ ಮೂಗರ್ಜಿ ಸ್ವಭಾವ, ಹೋರಾಟದ ಹಠ ಮಾಡದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಸ್ಥಳೀಯ ಶಾಸಕ, ಸಂಸದ, ಸಚಿವರ ಉದಾಸೀನತೆಯಿಂದಾಗಿ ಜಿಲ್ಲೆಯ ಕನಸು ನನಸಾಗಲೇ ಇಲ್ಲ.

ಮೂರ್ನಾಲ್ಕು ತಾಲ್ಲೂಕುಗಳುಳ್ಳ ಉಡುಪಿ, ಹಾವೇರಿ, ಯಾದಗಿರಿಯಂತಹ ಜಿಲ್ಲೆಗಳನ್ನು ಹಿಂದೆ ರಚಿಸಲಾಗಿತ್ತು. ವಿವೇಚನೆ, ವಿವೇಕದಿಂದ ಉತ್ತರ ಕನ್ನಡ ವಿಭಾಗಿಸಿದರೆ ಆರಾರು ತಾಲ್ಲೂಕುಗಳ ಎರಡು ಜಿಲ್ಲೆ ಹುಟ್ಟುಹಾಕಬಹುದು. ಜೋಯಿಡ ಘಟ್ಟದ ಪ್ರದೇಶದಲ್ಲಿದ್ದರೂ, ಅದೂ ಕಾರವಾರಕ್ಕೆ ಹತ್ತಿರದಲ್ಲಿದೆ. ಅದನ್ನು ಶಿರಸಿ ಜಿಲ್ಲೆಗೆ ಸೇರಿಸಿದರೆ ಪ್ರಸ್ತಾವಿತ ಜಿಲ್ಲಾ ಕೇಂದ್ರ ಶಿರಸಿಯಿಂದ ನೂರೈವತ್ತು ಕಿ.ಮೀ ಅಂತರದಲ್ಲಿರುತ್ತದೆ. ಜೊತೆಗೆ ಜೋಯಿಡದ ಸಾಂಸ್ಕೃತಿಕ, ವ್ಯಾವಹಾರಿಕ, ಕೌಟುಂಬಿಕ ಭಾಷಾ ಬಾಂಧವ್ಯ ಹೆಚ್ಚಾಗಿ ಕಾರವಾರದೊಂದಿಗಿದೆ. ಜೋಯಿಡದಲ್ಲಿ ಕೊಂಕಣಿ ಮಾತನಾಡುವ ಮಂದಿಯೇ ಜಾಸ್ತಿ. ಹೀಗಾಗಿ ಕನ್ನಡ ಮಾತನಾಡುವ ಶಿರಸಿ ಸೀಮೆ ಜೊತೆ ಜೋಯಿಡಕ್ಕೆ ಹೊಂದಾಣಿಕೆ ಹಲವು ಕಾರಣದಿಂದ ಸಾಧ್ಯವಾಗದು. ಹಾಗಾಗಿ ಅದನ್ನು ಕರಾವಳಿಯ ಉತ್ತರ ಕನ್ನಡದ ಜೊತೆ ಇಡುವುದೇ ಸೂಕ್ತ.

ಈಚೆಗೆ ದಾಂಡೇಲಿ ತಾಲ್ಲೂಕು ರಚನೆಯಾಗಿದೆ. ಕನ್ನಡದ ಮೊದಲ ರಾಜಧಾನಿ ಎಂಬ ಹೆಗ್ಗಳಿಕೆಯ ಬನವಾಸಿ ತಾಲ್ಲೂಕು ರಚನೆಯ ಹೋರಾಟ ಜೋರಾಗಿದೆ. ಕರಾವಳಿಯ ಗೋಕರ್ಣ ತಾಲ್ಲೂಕು ಮಾಡುವ ಪ್ರಸ್ತಾಪವೂ ಇದೆ. ಈ ಎರಡೂ ತಾಲ್ಲೂಕುಗಳು ಅಸ್ತಿತ್ವಕ್ಕೆ ಬಂದರೆ ಒಟ್ಟು 14 ತಾಲ್ಲೂಕುಗಳಾಗಿ ಎರಡೂ ಜಿಲ್ಲೆಗೆ ತಲಾ ಏಳೇಳು ತಾಲ್ಲೂಕುಗಳು ಸೇರುತ್ತವೆ. ಈ ಭೌಗೋಳಿಕ ಕಾರಣ ಹೊಸ ಜಿಲ್ಲೆಗೆ ಒತ್ತಾಸೆಯಾಗಿ ನಿಂತಿದೆ. ಶಿರಸಿ, ಸಿದ್ಧಾಪುರ, ಮುಂಡಗೋಡ, ಯಲ್ಲಾಪುರ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಿರುವ ಶಿರಸಿ ಜಿಲ್ಲೆ ಮತ್ತು ಜೋಯಿಡ, ಕಾರವಾರ, ಅಂಕೋಲಾ, ಕುಮುಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳ ಉತ್ತರ ಕನ್ನಡ (ಕರಾವಳಿ) ಜಿಲ್ಲೆ ರಚನೆ ಮಾಡುವುದರಿಂದ ಅಭಿವೃದ್ಧಿಯೂ ವೇಗ ಪಡೆದುಕೊಳ್ಳುತ್ತದೆ. ಆಡಳಿತಾತ್ಮಕವಾಗಿ ಅಧಿಕಾರಿಗಳ ಕಾರ್ಯಕ್ಷಮತೆ ಎಚ್ಚರ ತಪ್ಪದಂತೆ ನಿಗಾ ವಹಿಸುತ್ತದೆ. ಅವಳಿ ಜಿಲ್ಲಾ ರಚನೆಯಿಂದ ವೈವಿಧ್ಯತೆ, ವೈಶಿಷ್ಟ್ಯತೆ, ಪ್ರಾಕೃತಿಕ ಸೊಬಗಿಗೂ ಭಂಗ ಬರದು. ಉಡುಪಿ ದಕ್ಷಿಣ ಕನ್ನಡದ ಸಂಬಂಧದಂತೆ ಕಾರವಾರ-ಶಿರಸಿ ಜಿಲ್ಲೆಗಳ ನಂಟು ಅನ್ಯೋನ್ಯವಾಗೇ ಇರುತ್ತದೆ.

ಈಗಿನ ಜಿಲ್ಲಾ ಕೇಂದ್ರ ಕಾರವಾರದಿಂದ ಘಟ್ಟದ ಮೇಲಿನ ಎಲ್ಲಾ ತಾಲ್ಲೂಕುಗಳು ತುಂಬಾ ದೂರದಲ್ಲಿದೆ. ಮುಂಡಗೋಡದವರು ಸರ್ಕಾರಿ ಕೆಲಸ, ಕಾರ್ಯಕ್ಕಾಗಿ ಜಿಲ್ಲಾ ಕೇಂದ್ರಕ್ಕೆ ಬರಬೇಕೆಂದರೆ ಬರೋಬ್ಬರಿ 140 ಕಿ.ಮೀ ಕ್ರಮಿಸಬೇಕು. ಅವರು ಜಿಲ್ಲಾ ಕೇಂದ್ರ ತಲುಪುವಾಗಲೇ ಅರ್ಧ ದಿನ ಕಳೆದಿರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಸಿಕ್ಕರೆ ಪುಣ್ಯ. ಮರಳಿ ಮನೆ ಸೇರುವಾಗ ನಡುರಾತ್ರಿ ಆಗಿರುತ್ತದೆ. ಅಧಿಕಾರಿಗಳಿಗೂ ಅಷ್ಟೆ. ಸಭೆ, ಸಮಾಲೋಚನೆ, ತರಬೇತಿ ಎಂದು ಜಿಲ್ಲಾ ಕೇಂದ್ರಕ್ಕೆ ಓಡಾಡಿ ಸ್ಥಳೀಯ ಕೆಲಸ ಕರ್ತವ್ಯ ನಿಭಾಯಿಸಲು ಸಾಧ್ಯವಾಗುವುದಿಲ್ಲ. ವ್ಯರ್ಥ ತಿರುಗಾಟ ಘಟ್ಟದ ಮೇಲಿನ ತಾಲ್ಲೂಕುಗಳಿಗೆ ಶಾಪದಂತೆ ಕಾಡುತ್ತಲೇ ಇದೆ. ಹೀಗಾಗಿ ವಿಭಜನೆ ಎರಡು ಜಿಲ್ಲೆಗಳ ಪ್ರಗತಿಗೂ ಪೂರಕ. ಎರಡೆರಡು ಆಡಳಿತ ವ್ಯವಸ್ಥೆ, ಎರಡೆರಡು ಅನುದಾನದಿಂದ ಅವಳಿ ಜಿಲ್ಲೆಗಳ ಅಭಿವೃದ್ಧಿ ನಕ್ಷೆಯೇ ಬದಲಾಗಲಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಶಿರಸಿ ಜಿಲ್ಲೆ ಮಾಡುವ ಪ್ರಯತ್ನ ಪಡದಿದ್ದರೂ ಹಲವು ಪ್ರತ್ಯೇಕ ಜಿಲ್ಲಾ ಮಟ್ಟದ ಕಚೇರಿ ಶಿರಸಿಗೆ ತಂದಿದ್ದರು. ಆಗ ಶಿಕ್ಷಣ ಮಂತ್ರಿಯಾಗಿದ್ದರಿಂದ ಶಿರಸಿಯನ್ನು ಶೈಕ್ಷಣಿಕ ಜಿಲ್ಲೆಯಾಗಿಸಿ ಉತ್ತರ ಕನ್ನಡದಿಂದ ಬೇರ್ಪಡಿಸಿದ್ದರು. ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಕಚೇರಿಗಳು ಶಿರಸಿಯಲ್ಲಿದೆ. ಶಿರಸಿಗೆ ಜಿಲ್ಲಾ ಕೇಂದ್ರವಾಗುವ ಅರ್ಹತೆ, ಅನುಕೂಲತೆ ಎರಡೂ ಇದೆ. ಉತ್ತರ ಕನ್ನಡದ ಜಿಲ್ಲಾ ಕೇಂದ್ರ ಕಾರವಾರವಾದರೂ ವಾಣಿಜ್ಯ, ಆರ್ಥಿಕ ಮತ್ತು ರಾಜಕೀಯ ಆಡಂಬೋಲ ಶಿರಸಿಯೇ. ವಾಣಿಜ್ಯ, ಕೃಷಿ, ಸಹಕಾರಿ ಕ್ಷೇತ್ರದ ಬೃಹತ್ ಸಂಸ್ಥೆಗಳು ಶಿರಸಿಯಲ್ಲಿವೆ. ತೋಟಗಾರಿಕೆ, ಅರಣ್ಯ, ಕಾನೂನು ಮಹಾವಿದ್ಯಾಲಯಗಳಿವೆ. ಜಿಲ್ಲಾ ಮಟ್ಟದ ನ್ಯಾಯಾಲಯ, ಕೃಷಿ ಸಂಶೋಧನಾ ಕೇಂದ್ರ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಿಭಾಗೀಯ ಕಚೇರಿಗಳಿವೆ.

ಜಿಲ್ಲಾ ಕೇಂದ್ರಕ್ಕೆ ಬೇಕಾದ ಹಲವು ಅನುಕೂಲಗಳು, ಸೌಲಭ್ಯಗಳು ಕಟ್ಟಡ ಇನ್ನಿತರ ಸೌಕರ್ಯ ಶಿರಸಿಯಲ್ಲಿದೆ. ಸರ್ಕಾರದ ಅಂಕಿಅಂಶಗಳು ಶಿರಸಿ ಪ್ರತ್ಯೇಕ ಜಿಲ್ಲೆಯ ಪ್ರಸ್ತುತತೆಯನ್ನು ಮನದಟ್ಟು ಮಾಡುತ್ತದೆ. ಹಾಗಂತ ಶಿರಸಿಯ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ದೀರ್ಘ ಕಾಲ ಉತ್ತರ ಕನ್ನಡ ಆಳಿದ ಆರ್.ವಿ. ದೇಶಪಾಂಡೆಯಾಗಲಿ ಈಗ ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಠಾಕುಠೀಕಿಂದ ಓಡಾಡುತ್ತಿರುವ ಶಿವರಾಮ ಹೆಬ್ಬಾರರಾಗಲಿ, ಸಂಸದ ಅನಂತ್ ಕುಮಾರ್ ಹೆಗಡೆಯಾಗಲಿ ಶಿರಸಿ ಜಿಲ್ಲಾ ರಚನೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳ ತ್ರಿಕೋನ ಒಣಪ್ರತಿಷ್ಠೆಯ ಮೋಗಮ್ ಕಾಳದಲ್ಲಿ ಶಿರಸಿ ಜಿಲ್ಲಾ ರಚನೆ ಬೇಡಿಕೆಗೆ ಮಹತ್ವ ಬರುತ್ತಿಲ್ಲ.

ಹೀಗಿದ್ದರೂ ಶಿರಸಿಯಲ್ಲಿ ಜಿಲ್ಲಾ ರಚನೆಯ ಹೋರಾಟ ನಡೆಯುತ್ತಲೇ ಇದೆ. ಕೆಲವು ದಿನಗಳ ಹಿಂದೆ ಕಂದಾಯ ಮಂತ್ರಿಯನ್ನು ಹೋರಾಟ ಸಮಿತಿಯ ನಿಯೋಗ ಭೇಟಿಯಾಗಿ ಇದೇ ಬಜೆಟ್‌ನಲ್ಲಿ ಶಿರಸಿ ಜಿಲ್ಲೆ ರಚನೆ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸರಣಿ ಪ್ರತಿಭಟನೆಗಳು ಘಟ್ಟದ ಮೇಲೆ ನಡೆಯುತ್ತಿದೆ. ನಿಧಾನಕ್ಕೆ ಜಿಲ್ಲಾ ಬೇಡಿಕೆಯ ಹೋರಾಟ ಹುರಿಗಟ್ಟುತ್ತಿದೆ. ಈ ವರದಿ ಬರೆಯುವ ಹೊತ್ತಿಗೆ ಶಿರಸಿ ಬಾರ್ ಅಸೋಸಿಯೇಶನ್ ಮೂಲಕ ಜಿಲ್ಲಾ ಬೇಡಿಕೆ ಮಂಡಿಸಲು ನಿರ್ಧರಿಸಲಾಗಿದೆ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳಿಗೆ ತಮ್ಮನ್ನು ಆರಿಸಿ ಕಳಿಸಿದವರ ಕೂಗು ಕೇಳಿಸುವುದೇ?


ಇದನ್ನೂ ಓದಿ: ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಭಿವೃದ್ಧಿಯ ಹೆಸರಲ್ಲಿ ನಿಮ್ಮ ಬೇಳೆ ಬೇಯಿಸಿಕೊಳ್ಳಬೇಡಿ.
    ಇವತ್ತು, ಉತ್ತರಕನ್ನಡ ವಿಭಿನ್ನವಾಗಿ ನಿಲ್ಲುವುದೇ ಅದರ ವಿಸ್ತಾರ ಮತ್ತು ಎಲ್ಲ ತರಹದ ಭೂ ಪ್ರದೇಶದಿಂದ. ಜಿಲ್ಲೆಯ ವಿಭಜನೆಯಿಂದ ಇನ್ನಷ್ಟು ಕಾಡು ನಾಶ ಮಾಡ್ತಾರೆಯೇ ಹೊರತೂ ಇನ್ನೇನು ಆಗಲ್ಲ…

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...