Homeಕರ್ನಾಟಕವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ‘ನರೇಗಾ ಉಳಿಸಿ ಆಂದೋಲನ’ದ ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಹಾಗೂ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ರದ್ದು ಮಾಡಿ, ದುರುದ್ದೇಶದಿಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ಸಿಎಂ ತಿಳಿಸಿದರು.

ಬಡವರ ಬಗ್ಗೆ ಕಾಂಗ್ರೆಸ್ ಪಕ್ಷ ಮಾತ್ರವೇ ಚಿಂತಿಸುತ್ತದೆ

2005ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರದ ಹಕ್ಕು, ಕೆಲಸದ ಹಕ್ಕು, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದವು. ಎಂದಿಗೂ ಮಹಿಳೆಯರು, ದಲಿತರು ಹಿಂದುಳಿದವರು, ಅಲ್ಪಸಂಖ್ಯಾತರು, ಸಣ್ಣ ರೈತರ ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದು ಸಿಎಂ ಹೇಳಿದರು.

ಬಡವರು ಸೇವಕರಾಗಿಯೇ ಇರಲು ಬಿಜೆಪಿ-ಆರ್‌ಎಸ್‌ಎಸ್ ಕುತಂತ್ರ

ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ. ಸುಮಾರು ಶೇ. 53ರಷ್ಟು ಮಹಿಳೆಯರು, ಶೇ.28ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ, ಕೇಂದ್ರ ಸರ್ಕಾರದವರು ಆರ್‌ಎಸ್‌ಎಸ್‌ನವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.

ಬಡವರ ಕೆಲಸವನ್ನು ದಿಲ್ಲಿಯಲ್ಲಿ ನಿರ್ಧರಿಸುವುದು ತಪ್ಪು

ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ರೈತರು ನರೇಗಾ ಯೋಜನೆಯ ಮೂಲಕ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು. ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಕೆಲಸವನ್ನು ನಿರ್ಧರಿಸುತ್ತಿತ್ತು. ಆದರೆ, ಈಗ ಬಡವರ, ಗ್ರಾಮೀಣ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು, ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.

ನರೇಗಾದಿಂದ 100 ದಿನಗಳ ಕೆಲಸದ ಭರವಸೆಯಿತ್ತು

ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ಅವಕಾಶವಿಲ್ಲ. ನರೇಗಾ ಯೋಜನೆಯಿಂದ ಈ ಹಿಂದೆ ಕೂಲಿಗಾರರಿಗೆ 100 ದಿನಗಳ ಕೆಲಸ ಖಾತ್ರಿಯಾಗಿ ಸಿಗುತ್ತಿತ್ತು. ಬಡವರ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು. ಆದರೆ, ವಿಬಿ-ರಾಮ್ ಜಿ ಯ ಜಾರಿಯಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಹಿಂದೆ ನರೇಗಾ ಅಡಿಯಲ್ಲಿ ವೆಚ್ಚಮಾಡಲಾಗುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಈ ಅನುದಾನವನ್ನು ನಿಲ್ಲಿಸಲಾಗಿದ್ದು, ಕೇಂದ್ರದ ಈ ಹೊಸ ಕಾಯ್ದೆಯಂತೆ ಶೇ. 40ರಷ್ಟು ಹಣವನ್ನು ರಾಜ್ಯ ಸರ್ಕಾರಗಳು ಕೊಡಬೇಕು, ಕೇಂದ್ರ ಶೇ.60ರಷ್ಟು ಮಾತ್ರ ಪಾವತಿಸುತ್ತವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ

ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರೆಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.

ವಿಬಿ-ಜಿ ರಾಮ್ ಜಿ ಆರ್‌ಎಸ್‌ಎಸ್ ಹುನ್ನಾರ

ವಿಬಿ-ಜಿ ರಾಮ್ ಜಿ ಕಾಯ್ದೆ ಬಡವರ ಹಕ್ಕನ್ನು ರಕ್ಷಿಸುವುದಿಲ್ಲ. ಈ ಹುನ್ನಾರದ ಹಿಂದೆ ಆರ್‌ಎಸ್‌ಎಸ್ ಇದೆ. ಬಡವರು ಬಲಯುತರಾಗದೇ, ಸೇವಕರಾಗಿಯೇ ಇರಬೇಕೆಂಬ ಕುತಂತ್ರ ಅವರದ್ದಾಗಿದೆ. ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ ಅರ್‌ಎಸ್‌ಎಸ್‌ ಹುನ್ನಾರ ಎಂದು ಹೇಳಿದರು.

ನರೇಗಾ ರದ್ಧತಿ ಬಗ್ಗೆ ವಿಶೇಷ ಅಧಿವೇಶನ- ಬಿಜೆಪಿ ಚರ್ಚಿಸುತ್ತಿಲ್ಲ

ಡಾ.ಬಿ.ಆರ್ ಅಂಬೇಡ್ಕರ್ ಹೇಳಿದಂತೆ ದೇಶದಲ್ಲಿ ಸಮಾನತೆ ಸ್ಥಾಪನೆಯಾಗಿಸಲು ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ಮಹಾತ್ಮಾ ಗಾಂಧಿಯವರು ಗ್ರಾಮ ಸ್ವರಾಜ್ಯ ಪ್ರತಿಪಾದಿಸಿದರು. ಗೋಡ್ಸೆ ಮಹಾತ್ಮಾಗಾಂಧಿಯವರನ್ನು ಹತ್ಯೆ ಮಾಡಿದರೆ, ಬಿಜೆಪಿಯವರು ನರೇಗಾ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಮಹಾತ್ಮಾ ಗಾಂಧಿಯವರನ್ನು ಮತ್ತೊಮ್ಮೆ ಹತ್ಯೆ ಮಾಡಿದಂತಾಗಿದೆ. ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ. ಈ ಕಾಯ್ದೆಯ ರದ್ದತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಬಿಜೆಪಿಯವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆದರೆ, ರದ್ದತಿಯ ವಿರುದ್ಧ ಸರ್ಕಾರ ಖಂಡಿತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಂದಿನ ಬಜೆಟ್‌ನಲ್ಲಿ ಗ್ರಾಮಪಂಚಾಯತ್‌ಗಳಿಗೆ ಮಹಾತ್ಮಾ ಗಾಂಧಿ ಹೆಸರು

ನರೇಗಾ ಯೋಜನೆಯ ಪುನರ್ ಸ್ಥಾಪನೆ ಹಾಗೂ ವಿಬಿ-ಜಿ ರಾಮ್ ಜಿ ಯ ರದ್ದತಿಯನ್ನು ಒತ್ತಾಯಿಸಿ ರಾಜಭವನಕ್ಕೆ ಮನವಿಯನ್ನು ತಲುಪಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಾದಯಾತ್ರೆ ಪ್ರಾರಂಭಿಸಲಾಗಿದ್ದು, ರಾಜ್ಯದ ಪ್ರತಿಯೊಬ್ಬರೂ ಕಾಂಗ್ರೆಸ್‌ ಈ ಉದ್ದೇಶಕ್ಕೆ ಸಹಕರಿಸಬೇಕು. ಮುಂದಿನ ಬಜೆಟ್ ನಲ್ಲಿ ರಾಜ್ಯದ 6000 ಗ್ರಾಮ ಪಂಚಾಯತ್‌ ಕಚೇರಿಗಳಿಗೂ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಸಿಎಂ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...