Homeಕರ್ನಾಟಕವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ‘ನರೇಗಾ ಉಳಿಸಿ ಆಂದೋಲನ’ದ ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಹಾಗೂ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ರದ್ದು ಮಾಡಿ, ದುರುದ್ದೇಶದಿಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ಸಿಎಂ ತಿಳಿಸಿದರು.

ಬಡವರ ಬಗ್ಗೆ ಕಾಂಗ್ರೆಸ್ ಪಕ್ಷ ಮಾತ್ರವೇ ಚಿಂತಿಸುತ್ತದೆ

2005ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರದ ಹಕ್ಕು, ಕೆಲಸದ ಹಕ್ಕು, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದವು. ಎಂದಿಗೂ ಮಹಿಳೆಯರು, ದಲಿತರು ಹಿಂದುಳಿದವರು, ಅಲ್ಪಸಂಖ್ಯಾತರು, ಸಣ್ಣ ರೈತರ ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದು ಸಿಎಂ ಹೇಳಿದರು.

ಬಡವರು ಸೇವಕರಾಗಿಯೇ ಇರಲು ಬಿಜೆಪಿ-ಆರ್‌ಎಸ್‌ಎಸ್ ಕುತಂತ್ರ

ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ. ಸುಮಾರು ಶೇ. 53ರಷ್ಟು ಮಹಿಳೆಯರು, ಶೇ.28ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ, ಕೇಂದ್ರ ಸರ್ಕಾರದವರು ಆರ್‌ಎಸ್‌ಎಸ್‌ನವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.

ಬಡವರ ಕೆಲಸವನ್ನು ದಿಲ್ಲಿಯಲ್ಲಿ ನಿರ್ಧರಿಸುವುದು ತಪ್ಪು

ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ರೈತರು ನರೇಗಾ ಯೋಜನೆಯ ಮೂಲಕ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು. ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಕೆಲಸವನ್ನು ನಿರ್ಧರಿಸುತ್ತಿತ್ತು. ಆದರೆ, ಈಗ ಬಡವರ, ಗ್ರಾಮೀಣ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು, ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.

ನರೇಗಾದಿಂದ 100 ದಿನಗಳ ಕೆಲಸದ ಭರವಸೆಯಿತ್ತು

ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ಅವಕಾಶವಿಲ್ಲ. ನರೇಗಾ ಯೋಜನೆಯಿಂದ ಈ ಹಿಂದೆ ಕೂಲಿಗಾರರಿಗೆ 100 ದಿನಗಳ ಕೆಲಸ ಖಾತ್ರಿಯಾಗಿ ಸಿಗುತ್ತಿತ್ತು. ಬಡವರ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು. ಆದರೆ, ವಿಬಿ-ರಾಮ್ ಜಿ ಯ ಜಾರಿಯಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಹಿಂದೆ ನರೇಗಾ ಅಡಿಯಲ್ಲಿ ವೆಚ್ಚಮಾಡಲಾಗುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಈ ಅನುದಾನವನ್ನು ನಿಲ್ಲಿಸಲಾಗಿದ್ದು, ಕೇಂದ್ರದ ಈ ಹೊಸ ಕಾಯ್ದೆಯಂತೆ ಶೇ. 40ರಷ್ಟು ಹಣವನ್ನು ರಾಜ್ಯ ಸರ್ಕಾರಗಳು ಕೊಡಬೇಕು, ಕೇಂದ್ರ ಶೇ.60ರಷ್ಟು ಮಾತ್ರ ಪಾವತಿಸುತ್ತವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ

ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರೆಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.

ವಿಬಿ-ಜಿ ರಾಮ್ ಜಿ ಆರ್‌ಎಸ್‌ಎಸ್ ಹುನ್ನಾರ

ವಿಬಿ-ಜಿ ರಾಮ್ ಜಿ ಕಾಯ್ದೆ ಬಡವರ ಹಕ್ಕನ್ನು ರಕ್ಷಿಸುವುದಿಲ್ಲ. ಈ ಹುನ್ನಾರದ ಹಿಂದೆ ಆರ್‌ಎಸ್‌ಎಸ್ ಇದೆ. ಬಡವರು ಬಲಯುತರಾಗದೇ, ಸೇವಕರಾಗಿಯೇ ಇರಬೇಕೆಂಬ ಕುತಂತ್ರ ಅವರದ್ದಾಗಿದೆ. ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ ಅರ್‌ಎಸ್‌ಎಸ್‌ ಹುನ್ನಾರ ಎಂದು ಹೇಳಿದರು.

ನರೇಗಾ ರದ್ಧತಿ ಬಗ್ಗೆ ವಿಶೇಷ ಅಧಿವೇಶನ- ಬಿಜೆಪಿ ಚರ್ಚಿಸುತ್ತಿಲ್ಲ

ಡಾ.ಬಿ.ಆರ್ ಅಂಬೇಡ್ಕರ್ ಹೇಳಿದಂತೆ ದೇಶದಲ್ಲಿ ಸಮಾನತೆ ಸ್ಥಾಪನೆಯಾಗಿಸಲು ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ಮಹಾತ್ಮಾ ಗಾಂಧಿಯವರು ಗ್ರಾಮ ಸ್ವರಾಜ್ಯ ಪ್ರತಿಪಾದಿಸಿದರು. ಗೋಡ್ಸೆ ಮಹಾತ್ಮಾಗಾಂಧಿಯವರನ್ನು ಹತ್ಯೆ ಮಾಡಿದರೆ, ಬಿಜೆಪಿಯವರು ನರೇಗಾ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಮಹಾತ್ಮಾ ಗಾಂಧಿಯವರನ್ನು ಮತ್ತೊಮ್ಮೆ ಹತ್ಯೆ ಮಾಡಿದಂತಾಗಿದೆ. ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ. ಈ ಕಾಯ್ದೆಯ ರದ್ದತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಬಿಜೆಪಿಯವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆದರೆ, ರದ್ದತಿಯ ವಿರುದ್ಧ ಸರ್ಕಾರ ಖಂಡಿತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಂದಿನ ಬಜೆಟ್‌ನಲ್ಲಿ ಗ್ರಾಮಪಂಚಾಯತ್‌ಗಳಿಗೆ ಮಹಾತ್ಮಾ ಗಾಂಧಿ ಹೆಸರು

ನರೇಗಾ ಯೋಜನೆಯ ಪುನರ್ ಸ್ಥಾಪನೆ ಹಾಗೂ ವಿಬಿ-ಜಿ ರಾಮ್ ಜಿ ಯ ರದ್ದತಿಯನ್ನು ಒತ್ತಾಯಿಸಿ ರಾಜಭವನಕ್ಕೆ ಮನವಿಯನ್ನು ತಲುಪಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಾದಯಾತ್ರೆ ಪ್ರಾರಂಭಿಸಲಾಗಿದ್ದು, ರಾಜ್ಯದ ಪ್ರತಿಯೊಬ್ಬರೂ ಕಾಂಗ್ರೆಸ್‌ ಈ ಉದ್ದೇಶಕ್ಕೆ ಸಹಕರಿಸಬೇಕು. ಮುಂದಿನ ಬಜೆಟ್ ನಲ್ಲಿ ರಾಜ್ಯದ 6000 ಗ್ರಾಮ ಪಂಚಾಯತ್‌ ಕಚೇರಿಗಳಿಗೂ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಸಿಎಂ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...