Homeಕರ್ನಾಟಕವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ‘ನರೇಗಾ ಉಳಿಸಿ ಆಂದೋಲನ’ದ ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಹಾಗೂ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ರದ್ದು ಮಾಡಿ, ದುರುದ್ದೇಶದಿಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ಸಿಎಂ ತಿಳಿಸಿದರು.

ಬಡವರ ಬಗ್ಗೆ ಕಾಂಗ್ರೆಸ್ ಪಕ್ಷ ಮಾತ್ರವೇ ಚಿಂತಿಸುತ್ತದೆ

2005ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರದ ಹಕ್ಕು, ಕೆಲಸದ ಹಕ್ಕು, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದವು. ಎಂದಿಗೂ ಮಹಿಳೆಯರು, ದಲಿತರು ಹಿಂದುಳಿದವರು, ಅಲ್ಪಸಂಖ್ಯಾತರು, ಸಣ್ಣ ರೈತರ ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದು ಸಿಎಂ ಹೇಳಿದರು.

ಬಡವರು ಸೇವಕರಾಗಿಯೇ ಇರಲು ಬಿಜೆಪಿ-ಆರ್‌ಎಸ್‌ಎಸ್ ಕುತಂತ್ರ

ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ. ಸುಮಾರು ಶೇ. 53ರಷ್ಟು ಮಹಿಳೆಯರು, ಶೇ.28ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ, ಕೇಂದ್ರ ಸರ್ಕಾರದವರು ಆರ್‌ಎಸ್‌ಎಸ್‌ನವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.

ಬಡವರ ಕೆಲಸವನ್ನು ದಿಲ್ಲಿಯಲ್ಲಿ ನಿರ್ಧರಿಸುವುದು ತಪ್ಪು

ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ರೈತರು ನರೇಗಾ ಯೋಜನೆಯ ಮೂಲಕ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು. ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಕೆಲಸವನ್ನು ನಿರ್ಧರಿಸುತ್ತಿತ್ತು. ಆದರೆ, ಈಗ ಬಡವರ, ಗ್ರಾಮೀಣ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು, ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.

ನರೇಗಾದಿಂದ 100 ದಿನಗಳ ಕೆಲಸದ ಭರವಸೆಯಿತ್ತು

ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ಅವಕಾಶವಿಲ್ಲ. ನರೇಗಾ ಯೋಜನೆಯಿಂದ ಈ ಹಿಂದೆ ಕೂಲಿಗಾರರಿಗೆ 100 ದಿನಗಳ ಕೆಲಸ ಖಾತ್ರಿಯಾಗಿ ಸಿಗುತ್ತಿತ್ತು. ಬಡವರ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು. ಆದರೆ, ವಿಬಿ-ರಾಮ್ ಜಿ ಯ ಜಾರಿಯಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಹಿಂದೆ ನರೇಗಾ ಅಡಿಯಲ್ಲಿ ವೆಚ್ಚಮಾಡಲಾಗುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಈ ಅನುದಾನವನ್ನು ನಿಲ್ಲಿಸಲಾಗಿದ್ದು, ಕೇಂದ್ರದ ಈ ಹೊಸ ಕಾಯ್ದೆಯಂತೆ ಶೇ. 40ರಷ್ಟು ಹಣವನ್ನು ರಾಜ್ಯ ಸರ್ಕಾರಗಳು ಕೊಡಬೇಕು, ಕೇಂದ್ರ ಶೇ.60ರಷ್ಟು ಮಾತ್ರ ಪಾವತಿಸುತ್ತವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ

ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರೆಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.

ವಿಬಿ-ಜಿ ರಾಮ್ ಜಿ ಆರ್‌ಎಸ್‌ಎಸ್ ಹುನ್ನಾರ

ವಿಬಿ-ಜಿ ರಾಮ್ ಜಿ ಕಾಯ್ದೆ ಬಡವರ ಹಕ್ಕನ್ನು ರಕ್ಷಿಸುವುದಿಲ್ಲ. ಈ ಹುನ್ನಾರದ ಹಿಂದೆ ಆರ್‌ಎಸ್‌ಎಸ್ ಇದೆ. ಬಡವರು ಬಲಯುತರಾಗದೇ, ಸೇವಕರಾಗಿಯೇ ಇರಬೇಕೆಂಬ ಕುತಂತ್ರ ಅವರದ್ದಾಗಿದೆ. ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ ಅರ್‌ಎಸ್‌ಎಸ್‌ ಹುನ್ನಾರ ಎಂದು ಹೇಳಿದರು.

ನರೇಗಾ ರದ್ಧತಿ ಬಗ್ಗೆ ವಿಶೇಷ ಅಧಿವೇಶನ- ಬಿಜೆಪಿ ಚರ್ಚಿಸುತ್ತಿಲ್ಲ

ಡಾ.ಬಿ.ಆರ್ ಅಂಬೇಡ್ಕರ್ ಹೇಳಿದಂತೆ ದೇಶದಲ್ಲಿ ಸಮಾನತೆ ಸ್ಥಾಪನೆಯಾಗಿಸಲು ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ಮಹಾತ್ಮಾ ಗಾಂಧಿಯವರು ಗ್ರಾಮ ಸ್ವರಾಜ್ಯ ಪ್ರತಿಪಾದಿಸಿದರು. ಗೋಡ್ಸೆ ಮಹಾತ್ಮಾಗಾಂಧಿಯವರನ್ನು ಹತ್ಯೆ ಮಾಡಿದರೆ, ಬಿಜೆಪಿಯವರು ನರೇಗಾ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಮಹಾತ್ಮಾ ಗಾಂಧಿಯವರನ್ನು ಮತ್ತೊಮ್ಮೆ ಹತ್ಯೆ ಮಾಡಿದಂತಾಗಿದೆ. ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ. ಈ ಕಾಯ್ದೆಯ ರದ್ದತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಬಿಜೆಪಿಯವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆದರೆ, ರದ್ದತಿಯ ವಿರುದ್ಧ ಸರ್ಕಾರ ಖಂಡಿತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಂದಿನ ಬಜೆಟ್‌ನಲ್ಲಿ ಗ್ರಾಮಪಂಚಾಯತ್‌ಗಳಿಗೆ ಮಹಾತ್ಮಾ ಗಾಂಧಿ ಹೆಸರು

ನರೇಗಾ ಯೋಜನೆಯ ಪುನರ್ ಸ್ಥಾಪನೆ ಹಾಗೂ ವಿಬಿ-ಜಿ ರಾಮ್ ಜಿ ಯ ರದ್ದತಿಯನ್ನು ಒತ್ತಾಯಿಸಿ ರಾಜಭವನಕ್ಕೆ ಮನವಿಯನ್ನು ತಲುಪಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಾದಯಾತ್ರೆ ಪ್ರಾರಂಭಿಸಲಾಗಿದ್ದು, ರಾಜ್ಯದ ಪ್ರತಿಯೊಬ್ಬರೂ ಕಾಂಗ್ರೆಸ್‌ ಈ ಉದ್ದೇಶಕ್ಕೆ ಸಹಕರಿಸಬೇಕು. ಮುಂದಿನ ಬಜೆಟ್ ನಲ್ಲಿ ರಾಜ್ಯದ 6000 ಗ್ರಾಮ ಪಂಚಾಯತ್‌ ಕಚೇರಿಗಳಿಗೂ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಸಿಎಂ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...