Homeಕರ್ನಾಟಕ'ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..'; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

‘ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..’; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಪತ್ನಿ ಹೆಸರಿಗೆ ನಿವೇಶನಗಳನ್ನು ಮಂಜೂರು ಮಾಡಿಸಿದ ಆರೋಪದ ಮೇಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾ ಇಂದು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, “ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ” ಎಂದಿದ್ದಾರೆ.

“ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು” ಎಂದು ಅವರು ವಿವರಿಸಿದ್ದಾರೆ.

“ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ” ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದಿದ್ದಾರೆ.

“ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ” ಎಂದು ಹೇಳಿದರು.

“ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ” ಎಂದು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದರು.

“ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿದ್ದರಾಮಯ್ಯ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...