Homeಕರ್ನಾಟಕಬಾಕಿ ಬರ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

ಬಾಕಿ ಬರ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

"ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ನೀಡಬೇಕಾಗಿದ್ದರೂ, ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ".

- Advertisement -
- Advertisement -

ಎನ್‌ಡಿಆರ್‌ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3, 454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ ಎಂಬ ಸುದ್ದಿಯ ಬೆನ್ನಲ್ಲೇ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರ ಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ.

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಈ ಬರ ಪರಿಹಾರ ಬಿಡುಗಡೆಯ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಬಿಜೆಪಿ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು. ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ. 3,454 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...