Homeಕರ್ನಾಟಕಲವ್‌ ಯೂ ರಚ್ಚು ಶೂಟಿಂಗ್ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ ಫೈಟರ್‌ ವಿವೇಕ್ ಸಾವು

ಲವ್‌ ಯೂ ರಚ್ಚು ಶೂಟಿಂಗ್ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ ಫೈಟರ್‌ ವಿವೇಕ್ ಸಾವು

- Advertisement -
- Advertisement -

ಮಾಸ್ತಿಗುಡಿ ದುರಂತ ಇನ್ನು ಕನ್ನಡ ಸಿನಿಮಾಸಕ್ತರ ಮನಗಳಿಂದ ದೂರವಾಗುವ ಮುನ್ನವೇ ಮತ್ತೆ ಚಂದನವನದಲ್ಲಿ ದುರಂತವೊಂದು ಸಂಭವಿಸಿದೆ. ನಟಿ ರಚಿತಾ ರಾಮ್ ಮತ್ತು ನಟ ಅಜಯ್ ರಾವ್‌ ತಾರಾಂಗಣದಲ್ಲಿರುವ ಲವ್‌ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್‌ ವಿವೇಕ್ ಸಾವನ್ನಪ್ಪಿದ್ದಾರೆ.

ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿಯ ಖಾಸಗಿ ರೆಸಾರ್ಟ್ ಬಳಿ ನಡೆಯುತಿತ್ತು. ಸಾಹಸ ದೃಶ್ಯಗಳನ್ನು ಶೂಟ್ ಮಾಡುವಾಗ ದುರಂತ ಸಂಭವಿಸಿದೆ. ಫೈಟರ್‌ ವಿವೇಕ್ ಮತ್ತು ಸ್ಟಂಟ್ ಮ್ಯಾನ್ ‌ಈ ದೃಶ್ಯದ ಭಾಗವಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವೇಳೆ ತಮಿಳುನಾಡು ಮೂಲದ ಫೈಟರ್‌ ವಿವೇಕ್‌ಗೆ ಹೈ ಟೆನ್ಶನ್ ವೈರ್‌ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣ ಚಿತ್ರೀಕರಣದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ವಿವೇಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ದುರಂತದ ಬಗ್ಗೆ ಮಾಹಿತಿ ನೀಡಿರುವ ನಾಯಕ ನಟ ಅಜಯ್​ ರಾವ್​, ಮೆಟಲ್​ ರೋಪ್​ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ನಾನು ಫೈಟ್ ನಡೆಯುತ್ತಿದ್ದ ಸ್ಥಳದಿಂದ 200 ಮೀಟರ್ ದೂರದಲ್ಲಿ ಕುಳಿತಿದ್ದೆ. ಬೇರೆಯವರು ಬಂದು ವಿಷಯ ತಿಳಿಸಿದರು” ಎಂದು ಹೇಳಿದ್ದಾರೆ.

ಸಾಹಸ‌ ನಿರ್ದೇಶಕ ವಿನೋದ್ ಚಿತ್ರದ ದೃಶ್ಯಗಳನ್ನು ಸಂಯೋಜನೆ ಮಾಡುತ್ತಿದ್ದರು. ದುರಂತದ ಬಳಿಕ ಚಿತ್ರದ ನಿರ್ದೇಶಕ ಶಂಕರ್​ ರಾಜ್​, ಫೈಟ್ ಮಾಸ್ಟರ್‌ರನ್ನು ಬಿಡದಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.   ರಾಜರಾಜೇಶ್ವರಿ ಆಸ್ಪತ್ರೆಗೆ ಫೈಟರ್‌ ವಿವೇಕ್ ಮೃತದೇಹ ಸಾಗಿಸಲಾಗಿದೆ.

Image

 

ಶಂಕರ್ ಎಸ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕರಾಗಿದ್ದಾರೆ.

2016 ರ ನವೆಂಬರ್‌ನಲ್ಲಿ ದುನಿಯಾ ವಿಜಯ್ ನಟನೆಯ ‘ಮಾಸ್ತಿ ಗುಡಿ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ಖಳನಟರಾದ ಅನಿಲ್, ಉದಯ್ ಪ್ರಾಣ ಕಳೆದುಕೊಂಡಿದ್ದ ದುರ್ಘಟನೆ ರಾಮನಗರದ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ನಡೆದಿತ್ತು. ಹೆಲಿಕಾಫ್ಟರ್ ನಿಂದ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಹಾರಿದ್ದ ಅನಿಲ್ ಮತ್ತು ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿದ್ದರು.


ಇದನ್ನೂ ಓದಿ: ಪ್ರೇಕ್ಷಕನ ವ್ಯಾಖ್ಯಾನದಿಂದಲೇ ಸೃಷ್ಟಿಯಾಗುವ ಆಂಡ್ರೆಯವರ ಅಮೂರ್ತ ಸಿನಿಮಾಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...