Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಿ: ಕಾಂಗ್ರೆಸ್ ಆಗ್ರಹ

ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಿ: ಕಾಂಗ್ರೆಸ್ ಆಗ್ರಹ

- Advertisement -
- Advertisement -

ವಿನಾಕಾರಣ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದು ಪ್ರಯಾಣಿಕರ ಜೀವಕ್ಕೆ ಬೆದರಿಕೆಯೊಡ್ಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ತೇಜಸ್ವಿ ಸೂರ್ಯ ವಿಮಾನದ ತುರ್ತು ಬಾಗಿಲನ್ನು ತೆರೆದಿರುವುದನ್ನು, ಕ್ಷಮೆ ಕೇಳಿದ್ದನ್ನು ಕೇಂದ್ರ ವಿಮಾನಯಾನ ಸಚಿವರೇ ಸ್ಪಷ್ಟಪಡಿಸಿರುವಾಗ ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತೆ ಬಿಜೆಪಿ ಮುಖಂಡ ಸಿ.ಟಿ ರವಿ ಸುಳ್ಳು ಪೋಣಿಸುತ್ತಿರುವುದೇಕೆ? ಕುಚೇಷ್ಟೆ ಮಾಡಿದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಇದ್ದ ಕಾರಣಕ್ಕೆ ಅನಾಹುತ ತಪ್ಪಿದೆ. ಅವರು ಡೋರ್ ಸ್ವಲ್ಪ ಓಪನ್ ಇದೆ ನೋಡಿ ಎಂದು ಹೇಳಿದ್ದೇ ಅಪರಾಧವಾ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸುವ ಮೂಲಕ ತೇಜಸ್ವಿ ಸೂರ್ಯರವರ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಘಟನೆ ಬಗ್ಗೆ ಮಾತನಾಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಸತ್ಯಗಳನ್ನು ನೋಡುವುದು ಬಹಳ ಮುಖ್ಯ. ವಿಮಾನವು ಇನ್ನೂ ನೆಲದ ಮೇಲೆ ಇದ್ದಾಗ ಅವರು ಆಕಸ್ಮಿಕವಾಗಿ ತುರ್ತು ನಿರ್ಗಮನ ಬಾಗಿಲು ತೆರೆದಿದ್ದಾರೆ. ಇದರ ನಂತರ ಎಲ್ಲಾ ತಪಾಸಣೆಯ ನಂತರ ವಿಮಾನವನ್ನು ಟೇಕ್ ಆಫ್ ಮಾಡಲು ಅನುಮತಿಸಲಾಯಿತು. ತನ್ನ ತಪ್ಪಿಗೆ ಅವರು ಕ್ಷಮೆಯನ್ನೂ ಕೇಳಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ಬಗ್ಗೆ ಸ್ವತಃ ತೇಜಸ್ವಿ ಸೂರ್ಯ ಅವರೇ ಪೈಲಟ್ ಮತ್ತು ಸಿಬ್ಬಂದಿಗೆ ತಿಳಿಸಿದ್ದಾರೆ. ಡಿಜಿಸಿಎ ತನಿಖೆ ನಡೆಸಿದಂತೆ ಸಂಪೂರ್ಣ ಪ್ರೋಟೋಕಾಲ್ ಅನುಸರಿಸಲಾಗಿದೆ. ಎಲ್ಲಾ ತಪಾಸಣೆಯ ನಂತರವೇ ವಿಮಾನ ಹಾರಾಡಿತ್ತು. ಘಟನೆಯಿಂದ ಉಂಟಾದ ವಿಳಂಬಕ್ಕೆ ಸೂರ್ಯ ಅವರೇ ಕ್ಷಮೆಯಾಚಿಸಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ; ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...