Homeಮುಖಪುಟತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

- Advertisement -
- Advertisement -

‘ಪ್ರಸಾದ’ದ ಪ್ಯಾಕೆಟ್‌ಗಳ ಮೇಲೆ ಉತ್ಪನ್ನದ ತೂಕ, ಉತ್ಪಾದನಾ ದಿನಾಂಕ, ಮುಕ್ತಾಯ ದಿನಾಂಕ ಮತ್ತು ತೂಕದ ಪ್ರಮಾಣವನ್ನು ತೋರಿಸಿಲ್ಲ ಎಂದು ಗ್ರಾಹಕರು ನೀಡಿದ ದೂರಿನ ಮೇರೆಗೆ ತೆಲಂಗಾಣದ ಸಮಾನತೆಯ ಪ್ರತಿಮೆಯ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಪ್ರಕರಣ ದಾಖಲು ಮಾಡಿದೆ.

11ನೇ ಶತಮಾನದ ಸಮಾಜ ಸುಧಾರಕ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ಹೆಸರಿಸಲಾಗಿದೆ. ಈ ಪ್ರತಿಮೆಯು ಶಂಶಾಬಾದ್ ಬಳಿಯ 45 ಎಕರೆ ಜಾಗದಲ್ಲಿ, ರಂಗಾ ರೆಡ್ಡಿ ಜಿಲ್ಲೆಯ ಮುಚಿಂತಲ್‌ನಲ್ಲಿರುವ ಚಿನ್ನಾ ಜೀಯರ್ ಟ್ರಸ್ಟ್‌ನ ಆವರಣದಲ್ಲಿದೆ.

ಈ ಹಿಂದೆ ಮೇ 26ರಂದು ವಿನಯ್ ವಂಗಾಲ ಎಂಬವರು ದೂರು ನೀಡಿದ್ದರು. ಪ್ರಸಾದದ ಪ್ಯಾಕೆಟ್‌ಗಳಲ್ಲಿ ತೂಕ, ಉತ್ಪಾದನೆ ಮತ್ತು ಮುಕ್ತಾಯ ದಿನಾಂಕ ನಮೂದಿಸದ ಕಾರಣ ಸಮಾನತೆಯ ಪ್ರತಿಮೆ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

ದೂರಿನ ಆಧಾರದ ಮೇಲೆ, ರಂಗಾರೆಡ್ಡಿ ವಲಯದ ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕರು ಪ್ರಕರಣ ದಾಖಲು ಮಾಡಿರುವುದಾಗಿ ಜೂ.21 ರಂದು ತೆಲಂಗಾಣದ ಕಾನೂನು ಮಾಪನಶಾಸ್ತ್ರದ ನಿಯಂತ್ರಕರಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಜೂನ್ 20ರಂದು ಸಮಾನತೆಯ ಪ್ರತಿಮೆ ಆವರಣವನ್ನು ಪರಿಶೀಲಿಸಲಾಯಿತು. ಅದರ ಆಧಾರದ ಮೇಲೆ, ಕಾನೂನು ಮಾಪನಶಾಸ್ತ್ರ ಕಾಯಿದೆ, 2009ರ ಕಲಂ 10, 11, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

ಸಮಾನತೆಯ ಪ್ರತಿಮೆ ಸ್ಥಳದ ಪ್ರವೇಶ ದರವೂ ಹೆಚ್ಚಾಗಿದೆ ಎಂಬ ಆರೋಪಗಳು ಬಂದಿವೆ. ವಯಸ್ಕರಿಗೆ 200 ಮತ್ತು ಮಕ್ಕಳಿಗೆ 125 ರೂ.ಗಳನ್ನು ಚಿನ್ನ ಜೀಯರ್ ಸ್ವಾಮಿಯ ಸಂಸ್ಥೆಯು ವಿಧಿಸುತ್ತಿದೆ.

“ಇತರ ಚಟುವಟಿಕೆಗಳು ಈ ಪ್ರದೇಶದಲ್ಲಿ ನಡೆಯುತ್ತಿದ್ದು, ಅವುಗಳನ್ನು ನಿರ್ವಹಿಸಲು ಶುಲ್ಕ ವಿಧಿಸಲಾಗಿದೆ” ಎಂದು ಸಂಸ್ಥೆ ಹೇಳಿಕೊಂಡಿದೆ. “ಒಂದಿಷ್ಟು ಪ್ರವೇಶ ಶುಲ್ಕವನ್ನು ಇರಿಸದ ಹೊರತು, ಗುಂಪನ್ನು ನಿಯಂತ್ರಿಸುವುದು ಕಷ್ಟ. ಅಂತಹ ಸ್ಥಳಗಳಿಗೆ ಸಾಮಾನ್ಯವಾಗಿ ಸಾವಿರಾರು ರೂಪಾಯಿಗಳ ಪ್ರವೇಶ ದರವಿದೆ, ಆದರೆ ನಾವು ಸ್ಥಳದ ನಿರ್ವಹಣೆಗೆ ಅಗತ್ಯವಿರುವ ಶುಲ್ಕವನ್ನು ಮಾತ್ರ ಇರಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...