Homeಮುಖಪುಟತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ತೆಲಂಗಾಣ: ‘ಸಮಾನತೆಯ ಪ್ರತಿಮೆ’ ವಿರುದ್ಧ ಪ್ರಕರಣ ದಾಖಲು

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

- Advertisement -
- Advertisement -

‘ಪ್ರಸಾದ’ದ ಪ್ಯಾಕೆಟ್‌ಗಳ ಮೇಲೆ ಉತ್ಪನ್ನದ ತೂಕ, ಉತ್ಪಾದನಾ ದಿನಾಂಕ, ಮುಕ್ತಾಯ ದಿನಾಂಕ ಮತ್ತು ತೂಕದ ಪ್ರಮಾಣವನ್ನು ತೋರಿಸಿಲ್ಲ ಎಂದು ಗ್ರಾಹಕರು ನೀಡಿದ ದೂರಿನ ಮೇರೆಗೆ ತೆಲಂಗಾಣದ ಸಮಾನತೆಯ ಪ್ರತಿಮೆಯ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಪ್ರಕರಣ ದಾಖಲು ಮಾಡಿದೆ.

11ನೇ ಶತಮಾನದ ಸಮಾಜ ಸುಧಾರಕ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ಹೆಸರಿಸಲಾಗಿದೆ. ಈ ಪ್ರತಿಮೆಯು ಶಂಶಾಬಾದ್ ಬಳಿಯ 45 ಎಕರೆ ಜಾಗದಲ್ಲಿ, ರಂಗಾ ರೆಡ್ಡಿ ಜಿಲ್ಲೆಯ ಮುಚಿಂತಲ್‌ನಲ್ಲಿರುವ ಚಿನ್ನಾ ಜೀಯರ್ ಟ್ರಸ್ಟ್‌ನ ಆವರಣದಲ್ಲಿದೆ.

ಈ ಹಿಂದೆ ಮೇ 26ರಂದು ವಿನಯ್ ವಂಗಾಲ ಎಂಬವರು ದೂರು ನೀಡಿದ್ದರು. ಪ್ರಸಾದದ ಪ್ಯಾಕೆಟ್‌ಗಳಲ್ಲಿ ತೂಕ, ಉತ್ಪಾದನೆ ಮತ್ತು ಮುಕ್ತಾಯ ದಿನಾಂಕ ನಮೂದಿಸದ ಕಾರಣ ಸಮಾನತೆಯ ಪ್ರತಿಮೆ ವಿರುದ್ಧ ಕಾನೂನು ಮಾಪನಶಾಸ್ತ್ರ ಇಲಾಖೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

ದೂರಿನ ಆಧಾರದ ಮೇಲೆ, ರಂಗಾರೆಡ್ಡಿ ವಲಯದ ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕರು ಪ್ರಕರಣ ದಾಖಲು ಮಾಡಿರುವುದಾಗಿ ಜೂ.21 ರಂದು ತೆಲಂಗಾಣದ ಕಾನೂನು ಮಾಪನಶಾಸ್ತ್ರದ ನಿಯಂತ್ರಕರಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಜೂನ್ 20ರಂದು ಸಮಾನತೆಯ ಪ್ರತಿಮೆ ಆವರಣವನ್ನು ಪರಿಶೀಲಿಸಲಾಯಿತು. ಅದರ ಆಧಾರದ ಮೇಲೆ, ಕಾನೂನು ಮಾಪನಶಾಸ್ತ್ರ ಕಾಯಿದೆ, 2009ರ ಕಲಂ 10, 11, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾನತೆಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ್ದರು.

ಸಮಾನತೆಯ ಪ್ರತಿಮೆ ಸ್ಥಳದ ಪ್ರವೇಶ ದರವೂ ಹೆಚ್ಚಾಗಿದೆ ಎಂಬ ಆರೋಪಗಳು ಬಂದಿವೆ. ವಯಸ್ಕರಿಗೆ 200 ಮತ್ತು ಮಕ್ಕಳಿಗೆ 125 ರೂ.ಗಳನ್ನು ಚಿನ್ನ ಜೀಯರ್ ಸ್ವಾಮಿಯ ಸಂಸ್ಥೆಯು ವಿಧಿಸುತ್ತಿದೆ.

“ಇತರ ಚಟುವಟಿಕೆಗಳು ಈ ಪ್ರದೇಶದಲ್ಲಿ ನಡೆಯುತ್ತಿದ್ದು, ಅವುಗಳನ್ನು ನಿರ್ವಹಿಸಲು ಶುಲ್ಕ ವಿಧಿಸಲಾಗಿದೆ” ಎಂದು ಸಂಸ್ಥೆ ಹೇಳಿಕೊಂಡಿದೆ. “ಒಂದಿಷ್ಟು ಪ್ರವೇಶ ಶುಲ್ಕವನ್ನು ಇರಿಸದ ಹೊರತು, ಗುಂಪನ್ನು ನಿಯಂತ್ರಿಸುವುದು ಕಷ್ಟ. ಅಂತಹ ಸ್ಥಳಗಳಿಗೆ ಸಾಮಾನ್ಯವಾಗಿ ಸಾವಿರಾರು ರೂಪಾಯಿಗಳ ಪ್ರವೇಶ ದರವಿದೆ, ಆದರೆ ನಾವು ಸ್ಥಳದ ನಿರ್ವಹಣೆಗೆ ಅಗತ್ಯವಿರುವ ಶುಲ್ಕವನ್ನು ಮಾತ್ರ ಇರಿಸಿದ್ದೇವೆ” ಎಂದು ಪ್ರತಿಕ್ರಿಯೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....