Homeಕರ್ನಾಟಕಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

- Advertisement -
- Advertisement -

• ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ
• ಅಕ್ರಮಗಳನ್ನು ಕಂಡು ಸರ್ಕಾರ ಸುಮ್ಮನೆ ಕೂರಲಾಗದು
• ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!
• ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪೆನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.

ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!

ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ ಸ್ವೀಕರಿಸುವಾಗ ಐದು ವರ್ಷಕ್ಕೆ ಮೇಲ್ಪಟ್ಟ 32777 ಪ್ರಕರಣಗಳಿದ್ದವು, ಈ ಸಂಖ್ಯೆಯನ್ನು 6,602ಕ್ಕೆ ಇಳಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಉಳಿದ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇದರಿಂದ ಜನರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.

ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!

ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...