Homeಕರ್ನಾಟಕಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

- Advertisement -
- Advertisement -

• ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ
• ಅಕ್ರಮಗಳನ್ನು ಕಂಡು ಸರ್ಕಾರ ಸುಮ್ಮನೆ ಕೂರಲಾಗದು
• ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!
• ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪೆನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರು ಜನವರಿ.7 ರಂದು ಸಭೆ ನಡೆಸಿ ಫೆ.10 ರಿಂದ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳ ಒಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.

ಅನದೀಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಇದೀಗ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಇದಾದ ಮೇಲೆ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿಅನದೀಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!

ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಆದರೆ, ಪ್ರಸ್ತುತ 67 ದಿನಕ್ಕೆ ಪ್ರಕರಣಗಳನ್ನು ವಿಲೇ ಮಾಡಲಾಗುತ್ತಿದೆ ಎಂದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 62,857 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಸಂಖ್ಯೆಯನ್ನು 26,726ಕ್ಕೆ ಇಳಿಸಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ 36,131 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನಾವು ಅಧಿಕಾರ ಸ್ವೀಕರಿಸುವಾಗ ಐದು ವರ್ಷಕ್ಕೆ ಮೇಲ್ಪಟ್ಟ 32777 ಪ್ರಕರಣಗಳಿದ್ದವು, ಈ ಸಂಖ್ಯೆಯನ್ನು 6,602ಕ್ಕೆ ಇಳಿಸಲಾಗಿದೆ. ಮುಂದಿನ ಆರು ತಿಂಗಳಲ್ಲಿ ಉಳಿದ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇದರಿಂದ ಜನರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ತಿಳಿಸಿದರು.

ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..!

ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ ಇರುತ್ತಿರಲಿಲ್ಲ. ಹಲವರು ತಮ್ಮ ಕೈಯಿಂದ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಮುಡಾ ವಿವಾದ: ಹೈಕೋರ್ಟ್‌ ಧಾರವಾಡ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...