Homeಕರ್ನಾಟಕಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

- Advertisement -
- Advertisement -

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಪೋಕ್ಸೋ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಲಿ ಎಂದು ಚಿತ್ರದುರ್ಗದಲ್ಲಿ ಸ್ಥಳೀಯರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಆಗ್ರಹಿಸಿದರು.

“ಸದರಿ ಪ್ರಕರಣದಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ಹೆಣ್ಣುಮಗಳು ಸಂತ್ರಸ್ತೆಯಾಗಿದ್ದಾರೆ. ಈ ಪೊಲೀಸರಿಂದ, ಜಿಲ್ಲಾಧಿಕಾರಿಗಳಿಂದ ಏನೂ ಆಗುವುದಿಲ್ಲ. ಲಿಂಗಾಯತರ ಸರ್ಕಾರ ರಾಜ್ಯದಲ್ಲಿದೆ. ನ್ಯಾಯಾಂಗ ತನಿಖೆಯಾಗಬೇಕು. ಲಿಂಗಾಯತ ಹುಡುಗಿಯರ ಮೇಲೆ ಯಾಕೆ ದೌರ್ಜನ್ಯ ನಡೆಯಲ್ಲ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

“ದಲಿತ ಹುಡಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ಯಾಕೆ ದಾಖಲಿಸಿಲ್ಲ? ಒಂದು ಮಗುವಿಗೆ ಅನ್ಯಾಯವಾಗಿದೆ. ಯಾರೋ ವಿರುದ್ಧ ನಾನು ಮಾತನಾಡಿದ್ದಕ್ಕೆ 24 ಗಂಟೆಗಳಲ್ಲಿ ನನ್ನ ಬಂಧಿಸಿದ್ದರು. ಎರಡು ದಿನವಾದರೂ ಸ್ವಾಮೀಜಿಯ ಬಂಧನ ಏಕೆ ಆಗಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ‘ಈ ದಿನ ಮಾಧ್ಯಮ’ ವರದಿ ಮಾಡಿದೆ.

ಚಿತ್ರದುರ್ಗದಲ್ಲಿ ಸಕ್ರಿಯವಾಗಿರುವ ದಲಿತ ಹಾಗೂ ಶೂದ್ರ ಸಮುದಾಯಗಳ ಸಾಮಾಜಿಕ ಸಂಘರ್ಷ ಸಮಿತಿಯು ಪ್ರಕರಣದ ಸುತ್ತ ಆಗುತ್ತಿರುವ ಬೆಳವಣಿಗೆಯನ್ನು ಖಂಡಿಸಿದೆ. ತಕ್ಷಣವೇ ಸ್ವಾಮೀಜಿ ಸಂವಿಧಾನಕ್ಕೆ ಗೌರವಕ್ಕೆ ಕೊಟ್ಟು ಬಂಧನಕ್ಕೊಳಗಾಗಿ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದರು.

“ಇಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಕ್ಕಳು ಶೋಷಿತ ಸಮುದಾಯಕ್ಕೆ ಸೇರಿದವರೋ, ಬೇರೆಯ ಸಮುದಾಯಕ್ಕೆ ಸೇರಿದವರೋ ಬೇಕಿಲ್ಲ. ಎಳೆಯ ಹೆಣ್ಣುಮಕ್ಕಳನ್ನು ಪೋಷಣೆ ಮಾಡುವುದಾಗಿ ಸೇರಿಸಿಕೊಂಡು ಲೈಂಗಿಕ ಕ್ರಿಯೆಗೆ ಬಳಸಿದ್ದರೆ ಅದು ಅಕ್ಷಮ್ಯ ಅಪರಾಧ. ಅಂತಹ ಅಪರಾಧ ಮಾಡಿರುವ ವ್ಯಕ್ತಿಗೆ ಶಿಕ್ಷೆಯಾಗಲೇಬೇಕು. ಪೋಕ್ಸೋ ಕಾನೂನಿನ ಪ್ರಕಾರ, ಎಫ್‌ಐಆರ್‌ ಆದ ತಕ್ಷಣವೇ ಅರೆಸ್ಟ್ ಮಾಡಿ ಮುಂದಿನ ಕ್ರಮಗಳನ್ನು ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಮುರುಘಾ ಶರಣರು ಇಡೀ ರಾಜ್ಯದಲ್ಲಿ ಗುರುತಿಸಿಕೊಂಡವರು. ಬುದ್ಧ, ಯೇಸು, ಪೈಗಂಬರ್‌ ಮೇಲೆಯೂ ಆರೋಪಗಳು ಬಂದಿದ್ದವು ಎಂದು ಸ್ವಾಮೀಜಿ ಹೇಳಿಕೊಳ್ಳುತ್ತಿದ್ದಾರೆ. ಆ ಮೂಲಕ ಮಹಾನೀಯರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುತ್ತಿದ್ದಾರೆ. ತಮ್ಮ ಮೇಲೆ ಆರೋಪಗಳು ಬಂದಾಗ ಬಸವಣ್ಣ ಹಾಗೂ ಬುದ್ಧ ಮುಕ್ತ ತನಿಖೆಗೆ ಒಳಪಟ್ಟಿದ್ದರು ಎಂಬುದನ್ನು ಮುರುಘಾ ಶರಣರು ಮರೆಯಬಾರದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಸಾಮಾಜಿಕ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಿ.ದುರ್ಗೇಶ್‌ ಮಾತನಾಡಿ, “ಈ ಸ್ವಾಮೀಜಿ ಮಾಡಿರುವ ಕೆಲಸ ಅಕ್ಷಮ್ಯ ಅಪರಾಧ. ಸಾಮಾನ್ಯ ಪ್ರಜೆಯಾಗಿದ್ದರೆ ತಕ್ಷಣವೇ ಬಂಧನಕ್ಕೊಳಗಾಗುತ್ತಿದ್ದ. ಆದರೆ ಮಠಾಧಿಪತಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಅನಿಸುತ್ತಿದೆ. ಮುರುಘಾ ಶರಣರನ್ನು ಮೊದಲು ಬಂಧಿಸಬೇಕಾಗಿದೆ” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಆರೋಪ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...