Homeಕರ್ನಾಟಕ'ಆಂತರಿಕ ಸಮಿತಿ' ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

- Advertisement -
- Advertisement -

ಮಹಿಳಾ ಕಲಾವಿದರ ಸಮಸ್ಯೆ ಆಲಿಸಲು ‘ಆಂತರಿಕ ಸಮಿತಿ’ (ಪಾಶ್ ಸಮಿತಿ) ರಚಿಸುವಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ವಿಫಲವಾಗಿದ್ದು, ಈ ಕುರಿತು ರಾಜ್ಯ ಮಹಿಳಾ ಆಯೋಗ ಬೆಂಗಳೂರು ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸುವಂತೆ ಮಹಿಳಾ ಆಯೋಗ ಈ ಹಿಂದೆ ಕೆಎಫ್‌ಸಿಸಿಗೆ ಸೂಚಿಸಿತ್ತು. ಆದರೆ, ಕೆಎಫ್‌ಸಿಸಿ ಸಮಿತಿ ರಚಿಸುವ ಬದಲು ಪದೇ ಪದೇ ಸಮಯ ವಿಸ್ತರಣೆ ಕೇಳುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಕೆಲಸದ ಸ್ಥಳದಲ್ಲಿ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (POSH) ಸಮಿತಿಯ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸಲು, ವಿಫಲವಾದರೆ ಮಾನ್ಯ ಕಾರಣಗಳನ್ನು ನೀಡಲು ಸೆಪ್ಟೆಂಬರ್ 16 ರಂದು 15 ದಿನಗಳ ಗಡುವನ್ನು ಮಹಿಳಾ ಆಯೋಗವು ಕೆಎಫ್‌ಸಿಸಿಗೆ ನೀಡಿತ್ತು. ಪಾಶ್ ಕಾಯ್ದೆಯಡಿ ಆಂತರಿಕ ಸಮಿತಿ ರಚಿಸುವುದು ಕಡ್ಡಾಯ. ಆ ನಿಟ್ಟಿನಲ್ಲಿ ಮಹಿಳಾ ಆಯೋಗ ಕೆಎಫ್‌ಸಿಸಿಗೆ ಸೂಚನೆ ನೀಡಿತ್ತು.

ಗಡುವಿನ ಒಳಗೆ ಸಮಿತಿ ರಚಿಸಲು ವಿಫಲವಾದ ಕೆಎಫ್‌ಸಿಸಿ, ಸಮಯ ವಿಸ್ತರಣೆ ಕೋರಿ ಎರಡು ಬಾರಿ ಪತ್ರ ಬರೆದಿದೆ. ಆ ಬಳಿಕವೂ ಸಮಿತಿ ರಚನೆ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಕಂಡು ಬಂದಿರಲಿಲ್ಲ. ಸೆಪ್ಟೆಂಬರ್ 18 ರಂದು ಕೆಎಫ್‌ಸಿಸಿಗೆ ಪತ್ರ ಬರೆದಿದ್ದ ಮಹಿಳಾ ಆಯೋಗ, ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ, ಹಕ್ಕುಗಳು ಮತ್ತು ಕಲ್ಯಾಣದ ಬಗ್ಗೆ ವಿವರವಾದ ಕ್ರಿಯಾ ಯೋಜನೆಯನ್ನು ಕೋರಿತ್ತು.

ವರದಿಗಳ ಪ್ರಕಾರ, ಆಂತರಿಕ ಸಮಿತಿ ರಚನೆ ಪ್ರಯತ್ನಕ್ಕೆ ಕನ್ನಡ ಚಿತ್ರರಂಗದಲ್ಲಿ ಪ್ರತಿರೋಧವೂ ಎದುರಾಗಿದೆ. ಸಮಿತಿ ರಚನೆ ಸಂಬಂಧ ಚರ್ಚಿಸಲು ಮಹಿಳಾ ಆಯೋಗ ಕರೆದಿದ್ದ ಸಭೆಯಲ್ಲಿ ಹಾಜರಿದ್ದ ಕೆಲ ಮಹಿಳಾ ಕಲಾವಿದರು, ತಾವು ಬಯಸಿದ್ದನ್ನು ಹೇಳಲು ತಡೆ ಎದುರಿಸುತ್ತಿದ್ದರು. ಇನ್ನೂ ಕೆಲವರು ಮೌನವಾಗಿದ್ದರು.

ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು, “ಪಾಶ್ ಕಾಯ್ದೆಯ ಪ್ರಕಾರ ಕಡ್ಡಾಯವಾಗಿ ಆಂತರಿಕ ಸಮಿತಿ ರಚನೆ ಮಾಡಬೇಕು. ಇಲ್ಲದಿದ್ದರೆ, ಫಿಲ್ಮ್ ಚೇಂಬರ್ ಮಾನ್ಯತೆ ರದ್ದಾಗಬಹುದು ಮತ್ತು ದಂಡ ವಿಧಿಸಬಹುದು. ನಾವು ಸಮಿತಿ ರಚಿಸಲು ಕೊಟ್ಟ ಗಡುವು ಮುಗಿದ ಮೇಲೆ ಫಿಲ್ಮ್ ಚೇಂಬರ್ ಎರಡು ಬಾರಿ ಸಮಯ ವಿಸ್ತರಣೆ ಕೇಳಿದೆ. ಹಾಗೆಲ್ಲ ಸಮಯ ವಿಸ್ತರಣೆ ಮಾಡಲು ಅವಕಾಶವಿಲ್ಲ. ಅವರು ಕಡ್ಡಾಯವಾಗಿ ಸಮಿತಿ ರಚಿಸಲೇಬೇಕು. ಹಾಗಾಗಿ, ನಾವು ಪಾಶ್ ನೋಡಲ್ ಅಧಿಕಾರಿಯಾದ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇವೆ” ಎಂದಿದ್ದಾರೆ.

ಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಲು ಸಮಿತಿ ರಚಿಸುವ ಬೇಡಿಕೆ ಬಂದಿತ್ತು. ನಾವು ಸಮಿತಿ ರಚನೆ ಕೋರಿ ಸರ್ಕಾರಕ್ಕೆ ಪತ್ರ ಬರೆದಾಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ಒಬ್ಬರು ಹಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆಗೆ ನಾವು ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ. ಸರ್ಕಾರದ ಒಪ್ಪಿಗೆಯೊಂದೇ ಬಾಕಿಯಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸಿದ ಲೈಂಗಿಕ ದೌರ್ಜನ್ಯಗಳನ್ನು ಬಿಚ್ಚಿಟ್ಟ ಬಳಿಕ, ಕರ್ನಾಟಕದಲ್ಲೂ ಅಂತಹದ್ದೇ ಸಮಿತಿ ರಚನೆಗೆ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ನಟಿಯರ ತಂಡವೊಂದು ಸಿಎಂಗೆ ಮನವಿಯನ್ನೂ ಸಲ್ಲಿಸಿದೆ.

ಇದನ್ನೂ ಓದಿ : ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...