Homeಕರ್ನಾಟಕ'ಆಂತರಿಕ ಸಮಿತಿ' ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

- Advertisement -
- Advertisement -

ಮಹಿಳಾ ಕಲಾವಿದರ ಸಮಸ್ಯೆ ಆಲಿಸಲು ‘ಆಂತರಿಕ ಸಮಿತಿ’ (ಪಾಶ್ ಸಮಿತಿ) ರಚಿಸುವಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ವಿಫಲವಾಗಿದ್ದು, ಈ ಕುರಿತು ರಾಜ್ಯ ಮಹಿಳಾ ಆಯೋಗ ಬೆಂಗಳೂರು ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸುವಂತೆ ಮಹಿಳಾ ಆಯೋಗ ಈ ಹಿಂದೆ ಕೆಎಫ್‌ಸಿಸಿಗೆ ಸೂಚಿಸಿತ್ತು. ಆದರೆ, ಕೆಎಫ್‌ಸಿಸಿ ಸಮಿತಿ ರಚಿಸುವ ಬದಲು ಪದೇ ಪದೇ ಸಮಯ ವಿಸ್ತರಣೆ ಕೇಳುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಕೆಲಸದ ಸ್ಥಳದಲ್ಲಿ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (POSH) ಸಮಿತಿಯ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸಲು, ವಿಫಲವಾದರೆ ಮಾನ್ಯ ಕಾರಣಗಳನ್ನು ನೀಡಲು ಸೆಪ್ಟೆಂಬರ್ 16 ರಂದು 15 ದಿನಗಳ ಗಡುವನ್ನು ಮಹಿಳಾ ಆಯೋಗವು ಕೆಎಫ್‌ಸಿಸಿಗೆ ನೀಡಿತ್ತು. ಪಾಶ್ ಕಾಯ್ದೆಯಡಿ ಆಂತರಿಕ ಸಮಿತಿ ರಚಿಸುವುದು ಕಡ್ಡಾಯ. ಆ ನಿಟ್ಟಿನಲ್ಲಿ ಮಹಿಳಾ ಆಯೋಗ ಕೆಎಫ್‌ಸಿಸಿಗೆ ಸೂಚನೆ ನೀಡಿತ್ತು.

ಗಡುವಿನ ಒಳಗೆ ಸಮಿತಿ ರಚಿಸಲು ವಿಫಲವಾದ ಕೆಎಫ್‌ಸಿಸಿ, ಸಮಯ ವಿಸ್ತರಣೆ ಕೋರಿ ಎರಡು ಬಾರಿ ಪತ್ರ ಬರೆದಿದೆ. ಆ ಬಳಿಕವೂ ಸಮಿತಿ ರಚನೆ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಕಂಡು ಬಂದಿರಲಿಲ್ಲ. ಸೆಪ್ಟೆಂಬರ್ 18 ರಂದು ಕೆಎಫ್‌ಸಿಸಿಗೆ ಪತ್ರ ಬರೆದಿದ್ದ ಮಹಿಳಾ ಆಯೋಗ, ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ, ಹಕ್ಕುಗಳು ಮತ್ತು ಕಲ್ಯಾಣದ ಬಗ್ಗೆ ವಿವರವಾದ ಕ್ರಿಯಾ ಯೋಜನೆಯನ್ನು ಕೋರಿತ್ತು.

ವರದಿಗಳ ಪ್ರಕಾರ, ಆಂತರಿಕ ಸಮಿತಿ ರಚನೆ ಪ್ರಯತ್ನಕ್ಕೆ ಕನ್ನಡ ಚಿತ್ರರಂಗದಲ್ಲಿ ಪ್ರತಿರೋಧವೂ ಎದುರಾಗಿದೆ. ಸಮಿತಿ ರಚನೆ ಸಂಬಂಧ ಚರ್ಚಿಸಲು ಮಹಿಳಾ ಆಯೋಗ ಕರೆದಿದ್ದ ಸಭೆಯಲ್ಲಿ ಹಾಜರಿದ್ದ ಕೆಲ ಮಹಿಳಾ ಕಲಾವಿದರು, ತಾವು ಬಯಸಿದ್ದನ್ನು ಹೇಳಲು ತಡೆ ಎದುರಿಸುತ್ತಿದ್ದರು. ಇನ್ನೂ ಕೆಲವರು ಮೌನವಾಗಿದ್ದರು.

ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು, “ಪಾಶ್ ಕಾಯ್ದೆಯ ಪ್ರಕಾರ ಕಡ್ಡಾಯವಾಗಿ ಆಂತರಿಕ ಸಮಿತಿ ರಚನೆ ಮಾಡಬೇಕು. ಇಲ್ಲದಿದ್ದರೆ, ಫಿಲ್ಮ್ ಚೇಂಬರ್ ಮಾನ್ಯತೆ ರದ್ದಾಗಬಹುದು ಮತ್ತು ದಂಡ ವಿಧಿಸಬಹುದು. ನಾವು ಸಮಿತಿ ರಚಿಸಲು ಕೊಟ್ಟ ಗಡುವು ಮುಗಿದ ಮೇಲೆ ಫಿಲ್ಮ್ ಚೇಂಬರ್ ಎರಡು ಬಾರಿ ಸಮಯ ವಿಸ್ತರಣೆ ಕೇಳಿದೆ. ಹಾಗೆಲ್ಲ ಸಮಯ ವಿಸ್ತರಣೆ ಮಾಡಲು ಅವಕಾಶವಿಲ್ಲ. ಅವರು ಕಡ್ಡಾಯವಾಗಿ ಸಮಿತಿ ರಚಿಸಲೇಬೇಕು. ಹಾಗಾಗಿ, ನಾವು ಪಾಶ್ ನೋಡಲ್ ಅಧಿಕಾರಿಯಾದ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇವೆ” ಎಂದಿದ್ದಾರೆ.

ಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಲು ಸಮಿತಿ ರಚಿಸುವ ಬೇಡಿಕೆ ಬಂದಿತ್ತು. ನಾವು ಸಮಿತಿ ರಚನೆ ಕೋರಿ ಸರ್ಕಾರಕ್ಕೆ ಪತ್ರ ಬರೆದಾಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ಒಬ್ಬರು ಹಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆಗೆ ನಾವು ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ. ಸರ್ಕಾರದ ಒಪ್ಪಿಗೆಯೊಂದೇ ಬಾಕಿಯಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸಿದ ಲೈಂಗಿಕ ದೌರ್ಜನ್ಯಗಳನ್ನು ಬಿಚ್ಚಿಟ್ಟ ಬಳಿಕ, ಕರ್ನಾಟಕದಲ್ಲೂ ಅಂತಹದ್ದೇ ಸಮಿತಿ ರಚನೆಗೆ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ನಟಿಯರ ತಂಡವೊಂದು ಸಿಎಂಗೆ ಮನವಿಯನ್ನೂ ಸಲ್ಲಿಸಿದೆ.

ಇದನ್ನೂ ಓದಿ : ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....