Homeಕರ್ನಾಟಕ'ಆಂತರಿಕ ಸಮಿತಿ' ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

‘ಆಂತರಿಕ ಸಮಿತಿ’ ರಚಿಸುವಲ್ಲಿ ಫಿಲ್ಮ್ ಚೇಂಬರ್ ವಿಫಲ : ಜಿಲ್ಲಾಧಿಕಾರಿಗೆ ಪತ್ರ ಬರೆದ ಮಹಿಳಾ ಆಯೋಗ

- Advertisement -
- Advertisement -

ಮಹಿಳಾ ಕಲಾವಿದರ ಸಮಸ್ಯೆ ಆಲಿಸಲು ‘ಆಂತರಿಕ ಸಮಿತಿ’ (ಪಾಶ್ ಸಮಿತಿ) ರಚಿಸುವಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ವಿಫಲವಾಗಿದ್ದು, ಈ ಕುರಿತು ರಾಜ್ಯ ಮಹಿಳಾ ಆಯೋಗ ಬೆಂಗಳೂರು ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸುವಂತೆ ಮಹಿಳಾ ಆಯೋಗ ಈ ಹಿಂದೆ ಕೆಎಫ್‌ಸಿಸಿಗೆ ಸೂಚಿಸಿತ್ತು. ಆದರೆ, ಕೆಎಫ್‌ಸಿಸಿ ಸಮಿತಿ ರಚಿಸುವ ಬದಲು ಪದೇ ಪದೇ ಸಮಯ ವಿಸ್ತರಣೆ ಕೇಳುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಕೆಲಸದ ಸ್ಥಳದಲ್ಲಿ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ (POSH) ಸಮಿತಿಯ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆಂತರಿಕ ಸಮಿತಿ ರಚಿಸಲು, ವಿಫಲವಾದರೆ ಮಾನ್ಯ ಕಾರಣಗಳನ್ನು ನೀಡಲು ಸೆಪ್ಟೆಂಬರ್ 16 ರಂದು 15 ದಿನಗಳ ಗಡುವನ್ನು ಮಹಿಳಾ ಆಯೋಗವು ಕೆಎಫ್‌ಸಿಸಿಗೆ ನೀಡಿತ್ತು. ಪಾಶ್ ಕಾಯ್ದೆಯಡಿ ಆಂತರಿಕ ಸಮಿತಿ ರಚಿಸುವುದು ಕಡ್ಡಾಯ. ಆ ನಿಟ್ಟಿನಲ್ಲಿ ಮಹಿಳಾ ಆಯೋಗ ಕೆಎಫ್‌ಸಿಸಿಗೆ ಸೂಚನೆ ನೀಡಿತ್ತು.

ಗಡುವಿನ ಒಳಗೆ ಸಮಿತಿ ರಚಿಸಲು ವಿಫಲವಾದ ಕೆಎಫ್‌ಸಿಸಿ, ಸಮಯ ವಿಸ್ತರಣೆ ಕೋರಿ ಎರಡು ಬಾರಿ ಪತ್ರ ಬರೆದಿದೆ. ಆ ಬಳಿಕವೂ ಸಮಿತಿ ರಚನೆ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಕಂಡು ಬಂದಿರಲಿಲ್ಲ. ಸೆಪ್ಟೆಂಬರ್ 18 ರಂದು ಕೆಎಫ್‌ಸಿಸಿಗೆ ಪತ್ರ ಬರೆದಿದ್ದ ಮಹಿಳಾ ಆಯೋಗ, ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ, ಹಕ್ಕುಗಳು ಮತ್ತು ಕಲ್ಯಾಣದ ಬಗ್ಗೆ ವಿವರವಾದ ಕ್ರಿಯಾ ಯೋಜನೆಯನ್ನು ಕೋರಿತ್ತು.

ವರದಿಗಳ ಪ್ರಕಾರ, ಆಂತರಿಕ ಸಮಿತಿ ರಚನೆ ಪ್ರಯತ್ನಕ್ಕೆ ಕನ್ನಡ ಚಿತ್ರರಂಗದಲ್ಲಿ ಪ್ರತಿರೋಧವೂ ಎದುರಾಗಿದೆ. ಸಮಿತಿ ರಚನೆ ಸಂಬಂಧ ಚರ್ಚಿಸಲು ಮಹಿಳಾ ಆಯೋಗ ಕರೆದಿದ್ದ ಸಭೆಯಲ್ಲಿ ಹಾಜರಿದ್ದ ಕೆಲ ಮಹಿಳಾ ಕಲಾವಿದರು, ತಾವು ಬಯಸಿದ್ದನ್ನು ಹೇಳಲು ತಡೆ ಎದುರಿಸುತ್ತಿದ್ದರು. ಇನ್ನೂ ಕೆಲವರು ಮೌನವಾಗಿದ್ದರು.

ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು, “ಪಾಶ್ ಕಾಯ್ದೆಯ ಪ್ರಕಾರ ಕಡ್ಡಾಯವಾಗಿ ಆಂತರಿಕ ಸಮಿತಿ ರಚನೆ ಮಾಡಬೇಕು. ಇಲ್ಲದಿದ್ದರೆ, ಫಿಲ್ಮ್ ಚೇಂಬರ್ ಮಾನ್ಯತೆ ರದ್ದಾಗಬಹುದು ಮತ್ತು ದಂಡ ವಿಧಿಸಬಹುದು. ನಾವು ಸಮಿತಿ ರಚಿಸಲು ಕೊಟ್ಟ ಗಡುವು ಮುಗಿದ ಮೇಲೆ ಫಿಲ್ಮ್ ಚೇಂಬರ್ ಎರಡು ಬಾರಿ ಸಮಯ ವಿಸ್ತರಣೆ ಕೇಳಿದೆ. ಹಾಗೆಲ್ಲ ಸಮಯ ವಿಸ್ತರಣೆ ಮಾಡಲು ಅವಕಾಶವಿಲ್ಲ. ಅವರು ಕಡ್ಡಾಯವಾಗಿ ಸಮಿತಿ ರಚಿಸಲೇಬೇಕು. ಹಾಗಾಗಿ, ನಾವು ಪಾಶ್ ನೋಡಲ್ ಅಧಿಕಾರಿಯಾದ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇವೆ” ಎಂದಿದ್ದಾರೆ.

ಕೇರಳದ ಹೇಮಾ ಸಮಿತಿಯಂತೆ ಕರ್ನಾಟಕದಲ್ಲೂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಧ್ಯಯನ ಮಾಡಲು ಸಮಿತಿ ರಚಿಸುವ ಬೇಡಿಕೆ ಬಂದಿತ್ತು. ನಾವು ಸಮಿತಿ ರಚನೆ ಕೋರಿ ಸರ್ಕಾರಕ್ಕೆ ಪತ್ರ ಬರೆದಾಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ಒಬ್ಬರು ಹಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆಗೆ ನಾವು ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ. ಸರ್ಕಾರದ ಒಪ್ಪಿಗೆಯೊಂದೇ ಬಾಕಿಯಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸಿದ ಲೈಂಗಿಕ ದೌರ್ಜನ್ಯಗಳನ್ನು ಬಿಚ್ಚಿಟ್ಟ ಬಳಿಕ, ಕರ್ನಾಟಕದಲ್ಲೂ ಅಂತಹದ್ದೇ ಸಮಿತಿ ರಚನೆಗೆ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ನಟಿಯರ ತಂಡವೊಂದು ಸಿಎಂಗೆ ಮನವಿಯನ್ನೂ ಸಲ್ಲಿಸಿದೆ.

ಇದನ್ನೂ ಓದಿ : ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...