HomeUncategorizedಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ 'ಅಭಿಮಾನಿ'ಯೊಬ್ಬರ ಕಣ್ಣಲ್ಲಿ

ಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ ‘ಅಭಿಮಾನಿ’ಯೊಬ್ಬರ ಕಣ್ಣಲ್ಲಿ

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ.

- Advertisement -
- Advertisement -

ಭಾರತ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಭಗತ್‌ಸಿಂಗ್‌ ಲಕ್ಷಾಂತರ ಜನರಿಗೆ ಸ್ಫೂರ್ತಿ. ಅವರನ್ನು ಆದರ್ಶವಾಗಿಟ್ಟುಕೊಂಡು ಹೋರಾಟಕ್ಕಿಳಿದವರು ಸಾವಿರಾರು ಜನ. ತನ್ನ ಸಹಪಾಠಿಗಳಿಗೆ ಅನ್ಯಾಯವನ್ನು ಅಸಮಾನತೆಯನ್ನು ಎದುರಿಸುವ ಧೈರ್ಯಕೊಟ್ಟು, ದಿಟ್ಟ ಹೋರಾಟ ಮುನ್ನಡೆಸಿದ ವಿದ್ಯಾರ್ಥಿ ಯುವಜನ ನಾಯಕ ಜಾರ್ಜ್ ರೆಡ್ಡಿ ಕೂಡ ಅಂಥವರಲ್ಲಿ ಒಬ್ಬರು.

ಇಂತಹ ಹೋರಾಟಗಾರನ ಜೀವನದ ಹಲವು ಘಟನೆಗಳ ಎಳೆಗಳನ್ನು ಇಟ್ಟುಕೊಂಡು ತೆಲುಗಿನಲ್ಲಿ ಜಾರ್ಜ್ ರೆಡ್ಡಿ ಸಿನೆಮಾ ನಿರ್ಮಾಣವಾಗಿದೆ. ಆದರೆ ಸಿನೆಮಾದಲ್ಲಿ ತೋರಿಸಿದ್ದಷ್ಟೇ ಜಾರ್ಜ್ ರೆಡ್ಡಿಯಲ್ಲ ಎಂದು ಸಿನೆಮಾ ನಿರ್ದೇಶಕರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಸಿನೆಮಾ ಕಮರ್ಷಿಯಲ್ ನೋಟದಲ್ಲಿ ಯಶಸ್ವಿಯಾಗಿ ಮಾಡಿಬಂದಿದೆ. ಈ ಸಿನೆಮಾ 60/70ರ ದಶಕದ ಕಾಲಕ್ಕೆ ವೀಕ್ಷಕರನ್ನು ಕರೆದುಕೊಂಡು ಹೋಗುವದರಲ್ಲಿ ಸಂದೇಹವೇ ಇಲ್ಲ.

ಜಾರ್ಜ್ ರೆಡ್ಡಿ ಜೀವನವನ್ನು ತಿಳಿಯಲು ಹೊರಟ ನಿರೂಪಕಿ ಜಾರ್ಜ್ ಜೊತೆ ಒಡನಾಟವಿದ್ದವರನ್ನು ಮಾತನಾಡಿಸುತ್ತ ಸಿನೆಮಾ ತೆರೆದುಕೊಳ್ಳುತ್ತದೆ. ಇನ್ನು ಸಿನೆಮಾದಲ್ಲಿ ಬರುವ ಸಂಭಾಷಣೆಗಳು ಕೂಡ ಸಿನೆಮಾವನ್ನು ಹತ್ತಿರವಾಗಿಸುತ್ತವೆ ಮತ್ತು ಪಾತ್ರಗಳನ್ನ ಮನಸ್ಸಿನಲ್ಲಿ ನಿಲ್ಲಿಸುತ್ತವೆ. ಆದರೆ ಜಾರ್ಜ್ ರೆಡ್ಡಿ ಮಾಡುವ ಫೈಟ್ಸ್ ತೆಲುಗು ಸಿನೆಮಾಗಳ ಫ್ಯಾಕ್ಷನ್ ಫೈಟ್‌ಗಳಂತೆಯೂ ತೋರುತ್ತವೆ. ಹಾಗಾಗಿ ಕೆಲವು ಕಡೆ ಜಾರ್ಜ್ ರೆಡ್ಡಿ ಕೂಡ ಒಬ್ಬ ರೌಡಿಯಂತೆ ಕಂಡರೂ ಸಹ ಅಚ್ಚರಿ ಇಲ್ಲ.

ಇಲ್ಲಿ ಜಾರ್ಜ್ ರೆಡ್ಡಿ (ಸಂದೀಪ್ ಮಾದವ್) ಜೊತೆ ಅವನ ಸ್ನೇಹಿತ ದೌರ್ಜನ್ಯವನ್ನು ಸಹಿಸದೆ ತಿರುಗಿ ಬೀಳುವ ರಾಜನ್ನನ (ಅಭಯ್) ಪಾತ್ರ ಮನಸ್ಸಿನಲ್ಲಿ ಉಳಿಯುತ್ತದೆ. ತೆಲುಗಿನ ಹೊಸ ಪೀಳಿಗೆಗೆ ಜಾರ್ಜ್ ರೆಡ್ಡಿಯನ್ನು ಪರಿಚಯಿಸುವ ಕೆಲಸವನ್ನು ಸಿನೆಮಾ ತಂಡ ಮಾಡಿದೆ. ಈ ಸಿನಿಮಾವನ್ನು ಜೀವನ್ ರೆಡ್ಡಿ ನಿರ್ದೇಶಿಸಿದ್ದು, ಸುರೇಶ್ ಬೊಬ್ಬಿಲಿಯವರ ಸಂಗೀತ, ಜೆ.ಪ್ರತಾಪ್ ಕುಮಾರ್ ಸಂಕಲನ, ಛಾಯಾಗ್ರಹಣ ಸೈರಾಟ್ ಸಿನೆಮಾದ ಯಾಕಂಟಿ ಮತ್ತು ಸುಧಾಕರ್ ರೆಡ್ಡಿ ಮಾಡಿದ್ದಾರೆ. ಈ ಸಿನೆಮಾವನ್ನು ಮಿಕ್ ಮೂವಿಸ್ ಕಂಪನಿ ನಿರ್ಮಾಣ ಮಾಡಿದೆ. ತಾರಾಗಣದಲ್ಲಿ ಸಂದೀಪ್ ಮಾದವ್ (ಜಾರ್ಜ್ ರೆಡ್ಡಿ), ಮುಸ್ಕುನ್ ಕುಬಚಂದಿನಿ(ಮಾಯ), ದೇವಿಕಾ( ಜಾರ್ಜ್ ತಾಯಿ), ಅಭಯ್ ಮುಖ್ಯ ಪಾತ್ರಗಳಲ್ಲಿ ಇದ್ದಾರೆ.

ಸಿನೆಮಾದ ಕಥೆ

ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಕೂಸಾದ ಎಬಿವಿಪಿ (ಎಬಿಸಿಡಿ) ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ (ಎನ್.ಎಸ್.ಎಲ್) ತಮ್ಮ ಪ್ರಾಬಲ್ಯಕ್ಕಾಗಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪ್ರಯತ್ನ ಮಾಡುತ್ತಿರುತ್ತವೆ. ಎಬಿವಿಪಿ ಸಂಘಟನೆ ತನ್ನ ಭಾವನಾತ್ಮಕ ಭಾಷಣಗಳಿಂದ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಮರೆಮಾಚಿ ದೇಶಭಕ್ತಿ, ಪಾಕಿಸ್ತಾನ ಎಂಬಂತಹ ವಿಚಾರಗಳನ್ನು ಹೇಳುತ್ತಿರುತ್ತದೆ. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಪ್ರಶ್ನಿಸಲು ಸ್ವತಹ ಜಾರ್ಜ್ ರೆಡ್ಡಿ ಪಿ.ಡಿ.ಎಸ್.ಯು(ಪಿಎಸ್) ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿ, ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದು ಬರುತ್ತಾರೆ.

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ. ಕೊನೆಗೆ ರಾಜಕಾರಣಿಗಳು, ಸ್ಥಳೀಯ ಪಟ್ಟಭದ್ರ ಸಂಘಟನೆಗಳ ಕೈಯಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿಯೇ ಕೊಲೆಯಾಗಿ ಜಾರ್ಜ್ ರೆಡ್ಡಿ ಹುತಾತ್ಮರಾಗುತ್ತಾರೆ.

ಯಾರು ಈ ಜಾರ್ಜ್ ರೆಡ್ಡಿ?

ಕೇರಳದ ಪಾಲಕ್ಕಾಡ್‌ನಲ್ಲಿ ಹುಟ್ಟಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಬಂದು ಭೌತಶಾಸ್ತ್ರದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ವಿದ್ಯಾರ್ಥಿ ಜಾರ್ಜ್ ರೆಡ್ಡಿ. ಬಾಕ್ಸಿಂಗ್‌ಪಟುವಾಗಿದ್ದ ಜಾರ್ಜ್ ರೆಡ್ಡಿ ಭಗತ್‌ಸಿಂಗ್, ಚೆಗುವೆರಾರಂತಹವರ ಹುತಾತ್ಮರ ಸ್ಫೂರ್ತಿಯಿಂದ ಉಸ್ಮಾನಿಯದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಕೊನೆಗಾಣಿಸುವ ಹೋರಾಟಕ್ಕೆ ಧುಮುಕುತ್ತಾರೆ.

ಸಮಾನ ಓದುವ ಅವಕಾಶಗಳ ಸೃಷ್ಟಿಗಾಗಿ ವಿದ್ಯಾರ್ಥಿ ಸಂಘಟನೆಯನ್ನು ಸ್ಥಾಪಿಸಿ, ವಿದ್ಯಾರ್ಥಿಗಳನ್ನು ಜನಸಾಮಾನ್ಯರ ಸಮಸ್ಯೆಗಳಿಗಾಗಿ ದನಿ ಎತ್ತುವಂತೆ ಮಾಡಿದ್ದು ಆತನ ಸಾಧನೆ. ಆ ಕಾಲದಲ್ಲಿ ಎಷ್ಟೋ ಜನ ವಿದ್ಯಾರ್ಥಿ ಯುವಜನರಿಗೆ ಸ್ಪೂರ್ತಿದಾಯಕ. ಈತನನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು ಸಹ ಪ್ರಯತ್ನಿಸಿದ್ದರು. ಆದರೆ ಯಾರ ಜೊತೆಗೆ ರಾಜಿ ಮಾಡಿಕೊಳ್ಳದೆ, ತಾನು ನಂಬಿದ್ದ ಸಿದ್ದಾಂತಕ್ಕಾಗಿ ಹೋರಾಟವನ್ನು ಮುನ್ನಡೆಸಿ, ಚರಿತ್ರೆ ಮರೆತರು ಜನ ಮರೆಯಾದ ನಾಯಕನಾದರು ಜಾರ್ಜ್ ರೆಡ್ಡಿ. ಈಗಲೂ ಸಹ ಆತ ಸ್ಥಾಪಿಸಿದ ಮತ್ತು ಆತನಿಂದ ಪ್ರಭಾವಿತವಾದ ವಿದ್ಯಾರ್ಥಿ ಸಂಘಟನೆಗಳು ಆಂಧ್ರ, ತೆಲಂಗಾಣದಲ್ಲಿ ಉತ್ತಮ ಸಮಾಜಕ್ಕಾಗಿ ದುಡಿಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...