HomeUncategorizedಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ 'ಅಭಿಮಾನಿ'ಯೊಬ್ಬರ ಕಣ್ಣಲ್ಲಿ

ಮಿಲಿಟೆಂಟ್‌ ಸ್ಟುಡೆಂಟ್‌ ಲೀಡರ್‌ ’ಜಾರ್ಜ್ ರೆಡ್ಡಿ’ ಕುರಿತ ಸಿನಿಮಾ ‘ಅಭಿಮಾನಿ’ಯೊಬ್ಬರ ಕಣ್ಣಲ್ಲಿ

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ.

- Advertisement -
- Advertisement -

ಭಾರತ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಭಗತ್‌ಸಿಂಗ್‌ ಲಕ್ಷಾಂತರ ಜನರಿಗೆ ಸ್ಫೂರ್ತಿ. ಅವರನ್ನು ಆದರ್ಶವಾಗಿಟ್ಟುಕೊಂಡು ಹೋರಾಟಕ್ಕಿಳಿದವರು ಸಾವಿರಾರು ಜನ. ತನ್ನ ಸಹಪಾಠಿಗಳಿಗೆ ಅನ್ಯಾಯವನ್ನು ಅಸಮಾನತೆಯನ್ನು ಎದುರಿಸುವ ಧೈರ್ಯಕೊಟ್ಟು, ದಿಟ್ಟ ಹೋರಾಟ ಮುನ್ನಡೆಸಿದ ವಿದ್ಯಾರ್ಥಿ ಯುವಜನ ನಾಯಕ ಜಾರ್ಜ್ ರೆಡ್ಡಿ ಕೂಡ ಅಂಥವರಲ್ಲಿ ಒಬ್ಬರು.

ಇಂತಹ ಹೋರಾಟಗಾರನ ಜೀವನದ ಹಲವು ಘಟನೆಗಳ ಎಳೆಗಳನ್ನು ಇಟ್ಟುಕೊಂಡು ತೆಲುಗಿನಲ್ಲಿ ಜಾರ್ಜ್ ರೆಡ್ಡಿ ಸಿನೆಮಾ ನಿರ್ಮಾಣವಾಗಿದೆ. ಆದರೆ ಸಿನೆಮಾದಲ್ಲಿ ತೋರಿಸಿದ್ದಷ್ಟೇ ಜಾರ್ಜ್ ರೆಡ್ಡಿಯಲ್ಲ ಎಂದು ಸಿನೆಮಾ ನಿರ್ದೇಶಕರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಸಿನೆಮಾ ಕಮರ್ಷಿಯಲ್ ನೋಟದಲ್ಲಿ ಯಶಸ್ವಿಯಾಗಿ ಮಾಡಿಬಂದಿದೆ. ಈ ಸಿನೆಮಾ 60/70ರ ದಶಕದ ಕಾಲಕ್ಕೆ ವೀಕ್ಷಕರನ್ನು ಕರೆದುಕೊಂಡು ಹೋಗುವದರಲ್ಲಿ ಸಂದೇಹವೇ ಇಲ್ಲ.

ಜಾರ್ಜ್ ರೆಡ್ಡಿ ಜೀವನವನ್ನು ತಿಳಿಯಲು ಹೊರಟ ನಿರೂಪಕಿ ಜಾರ್ಜ್ ಜೊತೆ ಒಡನಾಟವಿದ್ದವರನ್ನು ಮಾತನಾಡಿಸುತ್ತ ಸಿನೆಮಾ ತೆರೆದುಕೊಳ್ಳುತ್ತದೆ. ಇನ್ನು ಸಿನೆಮಾದಲ್ಲಿ ಬರುವ ಸಂಭಾಷಣೆಗಳು ಕೂಡ ಸಿನೆಮಾವನ್ನು ಹತ್ತಿರವಾಗಿಸುತ್ತವೆ ಮತ್ತು ಪಾತ್ರಗಳನ್ನ ಮನಸ್ಸಿನಲ್ಲಿ ನಿಲ್ಲಿಸುತ್ತವೆ. ಆದರೆ ಜಾರ್ಜ್ ರೆಡ್ಡಿ ಮಾಡುವ ಫೈಟ್ಸ್ ತೆಲುಗು ಸಿನೆಮಾಗಳ ಫ್ಯಾಕ್ಷನ್ ಫೈಟ್‌ಗಳಂತೆಯೂ ತೋರುತ್ತವೆ. ಹಾಗಾಗಿ ಕೆಲವು ಕಡೆ ಜಾರ್ಜ್ ರೆಡ್ಡಿ ಕೂಡ ಒಬ್ಬ ರೌಡಿಯಂತೆ ಕಂಡರೂ ಸಹ ಅಚ್ಚರಿ ಇಲ್ಲ.

ಇಲ್ಲಿ ಜಾರ್ಜ್ ರೆಡ್ಡಿ (ಸಂದೀಪ್ ಮಾದವ್) ಜೊತೆ ಅವನ ಸ್ನೇಹಿತ ದೌರ್ಜನ್ಯವನ್ನು ಸಹಿಸದೆ ತಿರುಗಿ ಬೀಳುವ ರಾಜನ್ನನ (ಅಭಯ್) ಪಾತ್ರ ಮನಸ್ಸಿನಲ್ಲಿ ಉಳಿಯುತ್ತದೆ. ತೆಲುಗಿನ ಹೊಸ ಪೀಳಿಗೆಗೆ ಜಾರ್ಜ್ ರೆಡ್ಡಿಯನ್ನು ಪರಿಚಯಿಸುವ ಕೆಲಸವನ್ನು ಸಿನೆಮಾ ತಂಡ ಮಾಡಿದೆ. ಈ ಸಿನಿಮಾವನ್ನು ಜೀವನ್ ರೆಡ್ಡಿ ನಿರ್ದೇಶಿಸಿದ್ದು, ಸುರೇಶ್ ಬೊಬ್ಬಿಲಿಯವರ ಸಂಗೀತ, ಜೆ.ಪ್ರತಾಪ್ ಕುಮಾರ್ ಸಂಕಲನ, ಛಾಯಾಗ್ರಹಣ ಸೈರಾಟ್ ಸಿನೆಮಾದ ಯಾಕಂಟಿ ಮತ್ತು ಸುಧಾಕರ್ ರೆಡ್ಡಿ ಮಾಡಿದ್ದಾರೆ. ಈ ಸಿನೆಮಾವನ್ನು ಮಿಕ್ ಮೂವಿಸ್ ಕಂಪನಿ ನಿರ್ಮಾಣ ಮಾಡಿದೆ. ತಾರಾಗಣದಲ್ಲಿ ಸಂದೀಪ್ ಮಾದವ್ (ಜಾರ್ಜ್ ರೆಡ್ಡಿ), ಮುಸ್ಕುನ್ ಕುಬಚಂದಿನಿ(ಮಾಯ), ದೇವಿಕಾ( ಜಾರ್ಜ್ ತಾಯಿ), ಅಭಯ್ ಮುಖ್ಯ ಪಾತ್ರಗಳಲ್ಲಿ ಇದ್ದಾರೆ.

ಸಿನೆಮಾದ ಕಥೆ

ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಕೂಸಾದ ಎಬಿವಿಪಿ (ಎಬಿಸಿಡಿ) ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಎನ್.ಎಸ್.ಯು.ಐ (ಎನ್.ಎಸ್.ಎಲ್) ತಮ್ಮ ಪ್ರಾಬಲ್ಯಕ್ಕಾಗಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪ್ರಯತ್ನ ಮಾಡುತ್ತಿರುತ್ತವೆ. ಎಬಿವಿಪಿ ಸಂಘಟನೆ ತನ್ನ ಭಾವನಾತ್ಮಕ ಭಾಷಣಗಳಿಂದ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಮರೆಮಾಚಿ ದೇಶಭಕ್ತಿ, ಪಾಕಿಸ್ತಾನ ಎಂಬಂತಹ ವಿಚಾರಗಳನ್ನು ಹೇಳುತ್ತಿರುತ್ತದೆ. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳ ನಿಜವಾದ ಸಮಸ್ಯೆಗಳನ್ನು ಪ್ರಶ್ನಿಸಲು ಸ್ವತಹ ಜಾರ್ಜ್ ರೆಡ್ಡಿ ಪಿ.ಡಿ.ಎಸ್.ಯು(ಪಿಎಸ್) ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿ, ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದು ಬರುತ್ತಾರೆ.

ವಿದ್ಯಾರ್ಥಿಗಳು ಕೇವಲ ತನ್ನ ಸಮಸ್ಯೆಗಳಿಗಾಗಿ ಮಾತ್ರವಲ್ಲದೆ ರೈತರು, ದಲಿತ ದಮನಿತರ ಕಷ್ಟಗಳಿಗೆ ಬೀದಿಗಿಳಿಯುವಂತೆ ಜಾರ್ಜ್ ರೆಡ್ಡಿ ಪ್ರೇರೇಪಿಸುತ್ತಾನೆ. ಕೊನೆಗೆ ರಾಜಕಾರಣಿಗಳು, ಸ್ಥಳೀಯ ಪಟ್ಟಭದ್ರ ಸಂಘಟನೆಗಳ ಕೈಯಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿಯೇ ಕೊಲೆಯಾಗಿ ಜಾರ್ಜ್ ರೆಡ್ಡಿ ಹುತಾತ್ಮರಾಗುತ್ತಾರೆ.

ಯಾರು ಈ ಜಾರ್ಜ್ ರೆಡ್ಡಿ?

ಕೇರಳದ ಪಾಲಕ್ಕಾಡ್‌ನಲ್ಲಿ ಹುಟ್ಟಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಬಂದು ಭೌತಶಾಸ್ತ್ರದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ವಿದ್ಯಾರ್ಥಿ ಜಾರ್ಜ್ ರೆಡ್ಡಿ. ಬಾಕ್ಸಿಂಗ್‌ಪಟುವಾಗಿದ್ದ ಜಾರ್ಜ್ ರೆಡ್ಡಿ ಭಗತ್‌ಸಿಂಗ್, ಚೆಗುವೆರಾರಂತಹವರ ಹುತಾತ್ಮರ ಸ್ಫೂರ್ತಿಯಿಂದ ಉಸ್ಮಾನಿಯದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಕೊನೆಗಾಣಿಸುವ ಹೋರಾಟಕ್ಕೆ ಧುಮುಕುತ್ತಾರೆ.

ಸಮಾನ ಓದುವ ಅವಕಾಶಗಳ ಸೃಷ್ಟಿಗಾಗಿ ವಿದ್ಯಾರ್ಥಿ ಸಂಘಟನೆಯನ್ನು ಸ್ಥಾಪಿಸಿ, ವಿದ್ಯಾರ್ಥಿಗಳನ್ನು ಜನಸಾಮಾನ್ಯರ ಸಮಸ್ಯೆಗಳಿಗಾಗಿ ದನಿ ಎತ್ತುವಂತೆ ಮಾಡಿದ್ದು ಆತನ ಸಾಧನೆ. ಆ ಕಾಲದಲ್ಲಿ ಎಷ್ಟೋ ಜನ ವಿದ್ಯಾರ್ಥಿ ಯುವಜನರಿಗೆ ಸ್ಪೂರ್ತಿದಾಯಕ. ಈತನನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು ಸಹ ಪ್ರಯತ್ನಿಸಿದ್ದರು. ಆದರೆ ಯಾರ ಜೊತೆಗೆ ರಾಜಿ ಮಾಡಿಕೊಳ್ಳದೆ, ತಾನು ನಂಬಿದ್ದ ಸಿದ್ದಾಂತಕ್ಕಾಗಿ ಹೋರಾಟವನ್ನು ಮುನ್ನಡೆಸಿ, ಚರಿತ್ರೆ ಮರೆತರು ಜನ ಮರೆಯಾದ ನಾಯಕನಾದರು ಜಾರ್ಜ್ ರೆಡ್ಡಿ. ಈಗಲೂ ಸಹ ಆತ ಸ್ಥಾಪಿಸಿದ ಮತ್ತು ಆತನಿಂದ ಪ್ರಭಾವಿತವಾದ ವಿದ್ಯಾರ್ಥಿ ಸಂಘಟನೆಗಳು ಆಂಧ್ರ, ತೆಲಂಗಾಣದಲ್ಲಿ ಉತ್ತಮ ಸಮಾಜಕ್ಕಾಗಿ ದುಡಿಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...