Homeಮುಖಪುಟಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

ಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

- Advertisement -
- Advertisement -

ಸದನದ ಕಲಾಪಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳದಂತೆ ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರಜನಿ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಭಾನಾಯಕ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮನವಿ ಸಲ್ಲಿಸಿದರು. “ನಿನ್ನೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ಸಂಸತ್ತಿನ ಹಿರಿಯ ಸದಸ್ಯರನ್ನು ಕಳಪೆಯಾಗಿ ತೋರಿಸುವಂತೆ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಸದನದಲ್ಲಿ ರೆಕಾರ್ಡ್ ಮಾಡಿದ ವೀಡಿಯೊವನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡುತ್ತಿದ್ದೇವೆ” ಎಂದು ಹೇಳಿದರು.

ಗುರುವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಪ್ರತ್ಯುತ್ತರ ನೀಡುತ್ತಿದ್ದಾಗ ಉಂಟಾದ ಗದ್ದಲದ ವಿಡಿಯೋವನ್ನು ರಜನಿ ಪೋಸ್ಟ್ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅದಾನಿ ಗ್ರೂಪಿನ ಹಗರಣವನ್ನು ತನಿಖೆ ಮಾಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆದರೆ ಸದನದ ಕಲಾಪಗಳ ದೃಶ್ಯಗಳನ್ನು ಒದಗಿಸುವ ಏಕೈಕ ಮಾಧ್ಯಮವಾಗಿರುವ ರಾಜ್ಯಸಭಾ ಟಿವಿಯು ಪ್ರತಿಪಕ್ಷಗಳ ಪ್ರತಿಭಟನೆಯ ಕೆಲವು ದೃಶ್ಯಗಳನ್ನು ಮಾತ್ರ ತೋರಿಸಿದೆ. ಮೋದಿಯವರನ್ನು ಹೆಚ್ಚು ಕೇಂದ್ರೀಕರಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಸದನದ ಕಲಾಪಗಳನ್ನು ವರದಿ ಮಾಡುವಲ್ಲಿ ರಾಜ್ಯಸಭಾ ಟಿವಿ ಪಕ್ಷಪಾತಿಯಾಗಿದೆ ಎಂದು ಪ್ರತಿಪಕ್ಷಗಳ ಸಂಸದರು ರಜನಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡರು. ಆದಾಗ್ಯೂ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌ ಅವರು ಪಟ್ಟು ಬದಲಿಸದೆ, “ಈ ಅಹಿತಕರ ಚಟುವಟಿಕೆಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿ ರಜನಿ ಅವರನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿಯು ಈ ವಿಷಯವನ್ನು ಪರಿಶೀಲಿಸುತ್ತದೆ ಎಂದು ಧನಕರ್‌ ಅವರು ಸದನಕ್ಕೆ ತಿಳಿಸಿದ್ದಾರೆ.

“ಟ್ರಜರಿ ಪೀಠದ ಒತ್ತಡದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ” ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

“ಮೊದಲು ವಿಚಾರಣೆ ನಡೆಯಬೇಕು. ಸದಸ್ಯರು ತಪ್ಪಿತಸ್ಥರಾಗಿದ್ದರೆ, ನೀವು ಎಚ್ಚರಿಸಬಹುದು, ಇದು ಮೊದಲ ಬಾರಿಗೆ ಆಗಿದೆ. ನೀವು ಕ್ಷಮಿಸಬಹುದು, ನೀವು ಎಚ್ಚರಿಕೆ ನೀಡಬಹುದು. ಆದ್ದರಿಂದ, ಈ ವಿಷಯವನ್ನು ಮತ್ತಷ್ಟು ಮುಂದುವರಿಸಬೇಡಿ ಎಂದು ನಾನು ನಿಮ್ಮಲ್ಲಿ ಕೋರಿತ್ತೇನೆ” ಎಂದು ಮನವಿ ಮಾಡಿದರು.

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮಾತನಾಡಿ, “ಇದೇ ರೀತಿಯ ಘಟನೆಗಳು ಹಲವಾರು ಬಾರಿ ಸಂಭವಿಸಿವೆ” ಎಂದರು. “ಪರ್ವತಗಳೇನೂ ಕೆಳಗುದುರಿ ಬೀಳುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ” ಎಂದರು.

ಆಮ್‌ ಆದ್ಮಿ ಪಕ್ಷದ ಸಂಸದರಾಗಿದ್ದ ಭಗವಂತ್ ಮಾನ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಸತ್ತಿನ ನೇರ ಪ್ರಸಾರವನ್ನು ಮಾಡಿದ್ದಾಗ 2016ರಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆ ಕ್ರಮಗಳನ್ವಯ ರಜನಿ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಧನಕರ್‌ ಸಮರ್ಥಿಸಿಕೊಂಡರು.

ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನೊಳಗೊಂಡ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮಾನ್ ಅವರನ್ನು ಇಡೀ ಅಧಿವೇಶನದಿಂದ ಹೊರಗಿಡಲಾಗಿತ್ತು. (ಮಾನ್ ಈಗ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾರೆ.)

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ರಜನಿ ಪಾಟೀಲ್, “ಯಾವ ತಪ್ಪಿಗಾಗಿ ಈ ಶಿಕ್ಷೆ ನೀಡಲಾಗಿದೆ? ನನ್ನನ್ನು ಅಮಾನತು ಮಾಡಿರುವುದು ಪ್ರಾಯೋಜಿತ ಕಾರ್ಯಕ್ರಮದ ಭಾಗವಾಗಿದೆ. ವಿರೋಧ ಪಕ್ಷದ ಸಂಸದರು ಹಲವಾರು ಬಾರಿ ಘೋಷಣೆಗಳನ್ನು ಕೂಗುತ್ತಾ ಮೋದಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಅಮಾನತು ಮಾಡಿದ್ದಾರೆ” ಎಂದು ದೂರಿದ್ದಾರೆ.

“ಚರ್ಚೆ ನಡೆಯುತ್ತಿರುವ ರೀತಿ, ಯಾರೋ ತಿಳಿಯದೆ ತಪ್ಪು ಮಾಡಿದ್ದಾರೆ ಎಂದು ನನಗನಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರಿಗೆ, ಇಲ್ಲಿ ಇರಲು ಯಾವುದೇ ಹಕ್ಕು ಇಲ್ಲವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...