Homeಮುಖಪುಟಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

ಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

- Advertisement -
- Advertisement -

ಸದನದ ಕಲಾಪಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳದಂತೆ ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರಜನಿ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಭಾನಾಯಕ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮನವಿ ಸಲ್ಲಿಸಿದರು. “ನಿನ್ನೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ಸಂಸತ್ತಿನ ಹಿರಿಯ ಸದಸ್ಯರನ್ನು ಕಳಪೆಯಾಗಿ ತೋರಿಸುವಂತೆ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಸದನದಲ್ಲಿ ರೆಕಾರ್ಡ್ ಮಾಡಿದ ವೀಡಿಯೊವನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡುತ್ತಿದ್ದೇವೆ” ಎಂದು ಹೇಳಿದರು.

ಗುರುವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಪ್ರತ್ಯುತ್ತರ ನೀಡುತ್ತಿದ್ದಾಗ ಉಂಟಾದ ಗದ್ದಲದ ವಿಡಿಯೋವನ್ನು ರಜನಿ ಪೋಸ್ಟ್ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅದಾನಿ ಗ್ರೂಪಿನ ಹಗರಣವನ್ನು ತನಿಖೆ ಮಾಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆದರೆ ಸದನದ ಕಲಾಪಗಳ ದೃಶ್ಯಗಳನ್ನು ಒದಗಿಸುವ ಏಕೈಕ ಮಾಧ್ಯಮವಾಗಿರುವ ರಾಜ್ಯಸಭಾ ಟಿವಿಯು ಪ್ರತಿಪಕ್ಷಗಳ ಪ್ರತಿಭಟನೆಯ ಕೆಲವು ದೃಶ್ಯಗಳನ್ನು ಮಾತ್ರ ತೋರಿಸಿದೆ. ಮೋದಿಯವರನ್ನು ಹೆಚ್ಚು ಕೇಂದ್ರೀಕರಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಸದನದ ಕಲಾಪಗಳನ್ನು ವರದಿ ಮಾಡುವಲ್ಲಿ ರಾಜ್ಯಸಭಾ ಟಿವಿ ಪಕ್ಷಪಾತಿಯಾಗಿದೆ ಎಂದು ಪ್ರತಿಪಕ್ಷಗಳ ಸಂಸದರು ರಜನಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡರು. ಆದಾಗ್ಯೂ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌ ಅವರು ಪಟ್ಟು ಬದಲಿಸದೆ, “ಈ ಅಹಿತಕರ ಚಟುವಟಿಕೆಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿ ರಜನಿ ಅವರನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿಯು ಈ ವಿಷಯವನ್ನು ಪರಿಶೀಲಿಸುತ್ತದೆ ಎಂದು ಧನಕರ್‌ ಅವರು ಸದನಕ್ಕೆ ತಿಳಿಸಿದ್ದಾರೆ.

“ಟ್ರಜರಿ ಪೀಠದ ಒತ್ತಡದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ” ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

“ಮೊದಲು ವಿಚಾರಣೆ ನಡೆಯಬೇಕು. ಸದಸ್ಯರು ತಪ್ಪಿತಸ್ಥರಾಗಿದ್ದರೆ, ನೀವು ಎಚ್ಚರಿಸಬಹುದು, ಇದು ಮೊದಲ ಬಾರಿಗೆ ಆಗಿದೆ. ನೀವು ಕ್ಷಮಿಸಬಹುದು, ನೀವು ಎಚ್ಚರಿಕೆ ನೀಡಬಹುದು. ಆದ್ದರಿಂದ, ಈ ವಿಷಯವನ್ನು ಮತ್ತಷ್ಟು ಮುಂದುವರಿಸಬೇಡಿ ಎಂದು ನಾನು ನಿಮ್ಮಲ್ಲಿ ಕೋರಿತ್ತೇನೆ” ಎಂದು ಮನವಿ ಮಾಡಿದರು.

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮಾತನಾಡಿ, “ಇದೇ ರೀತಿಯ ಘಟನೆಗಳು ಹಲವಾರು ಬಾರಿ ಸಂಭವಿಸಿವೆ” ಎಂದರು. “ಪರ್ವತಗಳೇನೂ ಕೆಳಗುದುರಿ ಬೀಳುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ” ಎಂದರು.

ಆಮ್‌ ಆದ್ಮಿ ಪಕ್ಷದ ಸಂಸದರಾಗಿದ್ದ ಭಗವಂತ್ ಮಾನ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಸತ್ತಿನ ನೇರ ಪ್ರಸಾರವನ್ನು ಮಾಡಿದ್ದಾಗ 2016ರಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆ ಕ್ರಮಗಳನ್ವಯ ರಜನಿ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಧನಕರ್‌ ಸಮರ್ಥಿಸಿಕೊಂಡರು.

ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನೊಳಗೊಂಡ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮಾನ್ ಅವರನ್ನು ಇಡೀ ಅಧಿವೇಶನದಿಂದ ಹೊರಗಿಡಲಾಗಿತ್ತು. (ಮಾನ್ ಈಗ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾರೆ.)

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ರಜನಿ ಪಾಟೀಲ್, “ಯಾವ ತಪ್ಪಿಗಾಗಿ ಈ ಶಿಕ್ಷೆ ನೀಡಲಾಗಿದೆ? ನನ್ನನ್ನು ಅಮಾನತು ಮಾಡಿರುವುದು ಪ್ರಾಯೋಜಿತ ಕಾರ್ಯಕ್ರಮದ ಭಾಗವಾಗಿದೆ. ವಿರೋಧ ಪಕ್ಷದ ಸಂಸದರು ಹಲವಾರು ಬಾರಿ ಘೋಷಣೆಗಳನ್ನು ಕೂಗುತ್ತಾ ಮೋದಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಅಮಾನತು ಮಾಡಿದ್ದಾರೆ” ಎಂದು ದೂರಿದ್ದಾರೆ.

“ಚರ್ಚೆ ನಡೆಯುತ್ತಿರುವ ರೀತಿ, ಯಾರೋ ತಿಳಿಯದೆ ತಪ್ಪು ಮಾಡಿದ್ದಾರೆ ಎಂದು ನನಗನಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರಿಗೆ, ಇಲ್ಲಿ ಇರಲು ಯಾವುದೇ ಹಕ್ಕು ಇಲ್ಲವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...