Homeಮುಖಪುಟಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

ಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

- Advertisement -
- Advertisement -

ಸದನದ ಕಲಾಪಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳದಂತೆ ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರಜನಿ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಭಾನಾಯಕ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮನವಿ ಸಲ್ಲಿಸಿದರು. “ನಿನ್ನೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ಸಂಸತ್ತಿನ ಹಿರಿಯ ಸದಸ್ಯರನ್ನು ಕಳಪೆಯಾಗಿ ತೋರಿಸುವಂತೆ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಸದನದಲ್ಲಿ ರೆಕಾರ್ಡ್ ಮಾಡಿದ ವೀಡಿಯೊವನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡುತ್ತಿದ್ದೇವೆ” ಎಂದು ಹೇಳಿದರು.

ಗುರುವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಪ್ರತ್ಯುತ್ತರ ನೀಡುತ್ತಿದ್ದಾಗ ಉಂಟಾದ ಗದ್ದಲದ ವಿಡಿಯೋವನ್ನು ರಜನಿ ಪೋಸ್ಟ್ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅದಾನಿ ಗ್ರೂಪಿನ ಹಗರಣವನ್ನು ತನಿಖೆ ಮಾಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆದರೆ ಸದನದ ಕಲಾಪಗಳ ದೃಶ್ಯಗಳನ್ನು ಒದಗಿಸುವ ಏಕೈಕ ಮಾಧ್ಯಮವಾಗಿರುವ ರಾಜ್ಯಸಭಾ ಟಿವಿಯು ಪ್ರತಿಪಕ್ಷಗಳ ಪ್ರತಿಭಟನೆಯ ಕೆಲವು ದೃಶ್ಯಗಳನ್ನು ಮಾತ್ರ ತೋರಿಸಿದೆ. ಮೋದಿಯವರನ್ನು ಹೆಚ್ಚು ಕೇಂದ್ರೀಕರಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಸದನದ ಕಲಾಪಗಳನ್ನು ವರದಿ ಮಾಡುವಲ್ಲಿ ರಾಜ್ಯಸಭಾ ಟಿವಿ ಪಕ್ಷಪಾತಿಯಾಗಿದೆ ಎಂದು ಪ್ರತಿಪಕ್ಷಗಳ ಸಂಸದರು ರಜನಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡರು. ಆದಾಗ್ಯೂ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌ ಅವರು ಪಟ್ಟು ಬದಲಿಸದೆ, “ಈ ಅಹಿತಕರ ಚಟುವಟಿಕೆಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿ ರಜನಿ ಅವರನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿಯು ಈ ವಿಷಯವನ್ನು ಪರಿಶೀಲಿಸುತ್ತದೆ ಎಂದು ಧನಕರ್‌ ಅವರು ಸದನಕ್ಕೆ ತಿಳಿಸಿದ್ದಾರೆ.

“ಟ್ರಜರಿ ಪೀಠದ ಒತ್ತಡದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ” ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

“ಮೊದಲು ವಿಚಾರಣೆ ನಡೆಯಬೇಕು. ಸದಸ್ಯರು ತಪ್ಪಿತಸ್ಥರಾಗಿದ್ದರೆ, ನೀವು ಎಚ್ಚರಿಸಬಹುದು, ಇದು ಮೊದಲ ಬಾರಿಗೆ ಆಗಿದೆ. ನೀವು ಕ್ಷಮಿಸಬಹುದು, ನೀವು ಎಚ್ಚರಿಕೆ ನೀಡಬಹುದು. ಆದ್ದರಿಂದ, ಈ ವಿಷಯವನ್ನು ಮತ್ತಷ್ಟು ಮುಂದುವರಿಸಬೇಡಿ ಎಂದು ನಾನು ನಿಮ್ಮಲ್ಲಿ ಕೋರಿತ್ತೇನೆ” ಎಂದು ಮನವಿ ಮಾಡಿದರು.

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮಾತನಾಡಿ, “ಇದೇ ರೀತಿಯ ಘಟನೆಗಳು ಹಲವಾರು ಬಾರಿ ಸಂಭವಿಸಿವೆ” ಎಂದರು. “ಪರ್ವತಗಳೇನೂ ಕೆಳಗುದುರಿ ಬೀಳುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ” ಎಂದರು.

ಆಮ್‌ ಆದ್ಮಿ ಪಕ್ಷದ ಸಂಸದರಾಗಿದ್ದ ಭಗವಂತ್ ಮಾನ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಸತ್ತಿನ ನೇರ ಪ್ರಸಾರವನ್ನು ಮಾಡಿದ್ದಾಗ 2016ರಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆ ಕ್ರಮಗಳನ್ವಯ ರಜನಿ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಧನಕರ್‌ ಸಮರ್ಥಿಸಿಕೊಂಡರು.

ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನೊಳಗೊಂಡ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮಾನ್ ಅವರನ್ನು ಇಡೀ ಅಧಿವೇಶನದಿಂದ ಹೊರಗಿಡಲಾಗಿತ್ತು. (ಮಾನ್ ಈಗ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾರೆ.)

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ರಜನಿ ಪಾಟೀಲ್, “ಯಾವ ತಪ್ಪಿಗಾಗಿ ಈ ಶಿಕ್ಷೆ ನೀಡಲಾಗಿದೆ? ನನ್ನನ್ನು ಅಮಾನತು ಮಾಡಿರುವುದು ಪ್ರಾಯೋಜಿತ ಕಾರ್ಯಕ್ರಮದ ಭಾಗವಾಗಿದೆ. ವಿರೋಧ ಪಕ್ಷದ ಸಂಸದರು ಹಲವಾರು ಬಾರಿ ಘೋಷಣೆಗಳನ್ನು ಕೂಗುತ್ತಾ ಮೋದಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಅಮಾನತು ಮಾಡಿದ್ದಾರೆ” ಎಂದು ದೂರಿದ್ದಾರೆ.

“ಚರ್ಚೆ ನಡೆಯುತ್ತಿರುವ ರೀತಿ, ಯಾರೋ ತಿಳಿಯದೆ ತಪ್ಪು ಮಾಡಿದ್ದಾರೆ ಎಂದು ನನಗನಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರಿಗೆ, ಇಲ್ಲಿ ಇರಲು ಯಾವುದೇ ಹಕ್ಕು ಇಲ್ಲವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...