Homeಮುಖಪುಟಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

ಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

- Advertisement -
- Advertisement -

ಸದನದ ಕಲಾಪಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳದಂತೆ ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರಜನಿ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಭಾನಾಯಕ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮನವಿ ಸಲ್ಲಿಸಿದರು. “ನಿನ್ನೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ಸಂಸತ್ತಿನ ಹಿರಿಯ ಸದಸ್ಯರನ್ನು ಕಳಪೆಯಾಗಿ ತೋರಿಸುವಂತೆ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಸದನದಲ್ಲಿ ರೆಕಾರ್ಡ್ ಮಾಡಿದ ವೀಡಿಯೊವನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡುತ್ತಿದ್ದೇವೆ” ಎಂದು ಹೇಳಿದರು.

ಗುರುವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಪ್ರತ್ಯುತ್ತರ ನೀಡುತ್ತಿದ್ದಾಗ ಉಂಟಾದ ಗದ್ದಲದ ವಿಡಿಯೋವನ್ನು ರಜನಿ ಪೋಸ್ಟ್ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅದಾನಿ ಗ್ರೂಪಿನ ಹಗರಣವನ್ನು ತನಿಖೆ ಮಾಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆದರೆ ಸದನದ ಕಲಾಪಗಳ ದೃಶ್ಯಗಳನ್ನು ಒದಗಿಸುವ ಏಕೈಕ ಮಾಧ್ಯಮವಾಗಿರುವ ರಾಜ್ಯಸಭಾ ಟಿವಿಯು ಪ್ರತಿಪಕ್ಷಗಳ ಪ್ರತಿಭಟನೆಯ ಕೆಲವು ದೃಶ್ಯಗಳನ್ನು ಮಾತ್ರ ತೋರಿಸಿದೆ. ಮೋದಿಯವರನ್ನು ಹೆಚ್ಚು ಕೇಂದ್ರೀಕರಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಸದನದ ಕಲಾಪಗಳನ್ನು ವರದಿ ಮಾಡುವಲ್ಲಿ ರಾಜ್ಯಸಭಾ ಟಿವಿ ಪಕ್ಷಪಾತಿಯಾಗಿದೆ ಎಂದು ಪ್ರತಿಪಕ್ಷಗಳ ಸಂಸದರು ರಜನಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡರು. ಆದಾಗ್ಯೂ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌ ಅವರು ಪಟ್ಟು ಬದಲಿಸದೆ, “ಈ ಅಹಿತಕರ ಚಟುವಟಿಕೆಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿ ರಜನಿ ಅವರನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿಯು ಈ ವಿಷಯವನ್ನು ಪರಿಶೀಲಿಸುತ್ತದೆ ಎಂದು ಧನಕರ್‌ ಅವರು ಸದನಕ್ಕೆ ತಿಳಿಸಿದ್ದಾರೆ.

“ಟ್ರಜರಿ ಪೀಠದ ಒತ್ತಡದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ” ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

“ಮೊದಲು ವಿಚಾರಣೆ ನಡೆಯಬೇಕು. ಸದಸ್ಯರು ತಪ್ಪಿತಸ್ಥರಾಗಿದ್ದರೆ, ನೀವು ಎಚ್ಚರಿಸಬಹುದು, ಇದು ಮೊದಲ ಬಾರಿಗೆ ಆಗಿದೆ. ನೀವು ಕ್ಷಮಿಸಬಹುದು, ನೀವು ಎಚ್ಚರಿಕೆ ನೀಡಬಹುದು. ಆದ್ದರಿಂದ, ಈ ವಿಷಯವನ್ನು ಮತ್ತಷ್ಟು ಮುಂದುವರಿಸಬೇಡಿ ಎಂದು ನಾನು ನಿಮ್ಮಲ್ಲಿ ಕೋರಿತ್ತೇನೆ” ಎಂದು ಮನವಿ ಮಾಡಿದರು.

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮಾತನಾಡಿ, “ಇದೇ ರೀತಿಯ ಘಟನೆಗಳು ಹಲವಾರು ಬಾರಿ ಸಂಭವಿಸಿವೆ” ಎಂದರು. “ಪರ್ವತಗಳೇನೂ ಕೆಳಗುದುರಿ ಬೀಳುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ” ಎಂದರು.

ಆಮ್‌ ಆದ್ಮಿ ಪಕ್ಷದ ಸಂಸದರಾಗಿದ್ದ ಭಗವಂತ್ ಮಾನ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಸತ್ತಿನ ನೇರ ಪ್ರಸಾರವನ್ನು ಮಾಡಿದ್ದಾಗ 2016ರಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆ ಕ್ರಮಗಳನ್ವಯ ರಜನಿ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಧನಕರ್‌ ಸಮರ್ಥಿಸಿಕೊಂಡರು.

ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನೊಳಗೊಂಡ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮಾನ್ ಅವರನ್ನು ಇಡೀ ಅಧಿವೇಶನದಿಂದ ಹೊರಗಿಡಲಾಗಿತ್ತು. (ಮಾನ್ ಈಗ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾರೆ.)

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ರಜನಿ ಪಾಟೀಲ್, “ಯಾವ ತಪ್ಪಿಗಾಗಿ ಈ ಶಿಕ್ಷೆ ನೀಡಲಾಗಿದೆ? ನನ್ನನ್ನು ಅಮಾನತು ಮಾಡಿರುವುದು ಪ್ರಾಯೋಜಿತ ಕಾರ್ಯಕ್ರಮದ ಭಾಗವಾಗಿದೆ. ವಿರೋಧ ಪಕ್ಷದ ಸಂಸದರು ಹಲವಾರು ಬಾರಿ ಘೋಷಣೆಗಳನ್ನು ಕೂಗುತ್ತಾ ಮೋದಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಅಮಾನತು ಮಾಡಿದ್ದಾರೆ” ಎಂದು ದೂರಿದ್ದಾರೆ.

“ಚರ್ಚೆ ನಡೆಯುತ್ತಿರುವ ರೀತಿ, ಯಾರೋ ತಿಳಿಯದೆ ತಪ್ಪು ಮಾಡಿದ್ದಾರೆ ಎಂದು ನನಗನಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರಿಗೆ, ಇಲ್ಲಿ ಇರಲು ಯಾವುದೇ ಹಕ್ಕು ಇಲ್ಲವಾಗಿದೆ” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಾವಣಗೆರೆ ಲೋಕಸಭಾ ಕ್ಷೇತ್ರ: ಚುನಾವಣಾ ಕಣದಲ್ಲಿ ’ಜಿ.ಮಲ್ಲಿಕಾರ್ಜುನಪ್ಪ- ಶಾಮನೂರು ಶಿವಶಂಕರಪ್ಪ’ ಕುಟುಂಬದ ಮಹಿಳಾ ಅಭ್ಯರ್ಥಿಗಳು;...

1991ರವರೆಗೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ನಂತರ ಬಿಜೆಪಿ ಅಲ್ಲಿ ನೆಲೆಯೂರಿ ಹಿಡಿತ ಸಾಧಿಸಿದೆ. 1996ರ ಸಾರ್ವತ್ರಿಕ ಚುನಾವಣೆಯ ನಂತರ ಕೇಸರಿ ಪಕ್ಷವು ಇಲ್ಲಿನ ತನ್ನ ಬಿಗಿ ಹಿಡಿತವನ್ನು ಸಡಿಲಗೊಳಿಸಿಲ್ಲ. ಮಾಜಿ...