Homeಮುಖಪುಟಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

ಸದನದ ಕಲಾಪ ಚಿತ್ರೀಕರಣ; ಕಾಂಗ್ರೆಸ್‌ ಸಂಸದೆ ರಜನಿ ಪಾಟೀಲ್ ಅಮಾನತು

- Advertisement -
- Advertisement -

ಸದನದ ಕಲಾಪಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರನ್ನು, ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳದಂತೆ ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ರಜನಿ ಅವರನ್ನು ಅಮಾನತುಗೊಳಿಸುವಂತೆ ಕೋರಿ ಸಭಾನಾಯಕ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮನವಿ ಸಲ್ಲಿಸಿದರು. “ನಿನ್ನೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ಸಂಸತ್ತಿನ ಹಿರಿಯ ಸದಸ್ಯರನ್ನು ಕಳಪೆಯಾಗಿ ತೋರಿಸುವಂತೆ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಸದನದಲ್ಲಿ ರೆಕಾರ್ಡ್ ಮಾಡಿದ ವೀಡಿಯೊವನ್ನು ನಾವು ಸಾಮಾಜಿಕ ಮಾಧ್ಯಮದಲ್ಲಿ ನೋಡುತ್ತಿದ್ದೇವೆ” ಎಂದು ಹೇಳಿದರು.

ಗುರುವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಪ್ರತ್ಯುತ್ತರ ನೀಡುತ್ತಿದ್ದಾಗ ಉಂಟಾದ ಗದ್ದಲದ ವಿಡಿಯೋವನ್ನು ರಜನಿ ಪೋಸ್ಟ್ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅದಾನಿ ಗ್ರೂಪಿನ ಹಗರಣವನ್ನು ತನಿಖೆ ಮಾಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆದರೆ ಸದನದ ಕಲಾಪಗಳ ದೃಶ್ಯಗಳನ್ನು ಒದಗಿಸುವ ಏಕೈಕ ಮಾಧ್ಯಮವಾಗಿರುವ ರಾಜ್ಯಸಭಾ ಟಿವಿಯು ಪ್ರತಿಪಕ್ಷಗಳ ಪ್ರತಿಭಟನೆಯ ಕೆಲವು ದೃಶ್ಯಗಳನ್ನು ಮಾತ್ರ ತೋರಿಸಿದೆ. ಮೋದಿಯವರನ್ನು ಹೆಚ್ಚು ಕೇಂದ್ರೀಕರಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಸದನದ ಕಲಾಪಗಳನ್ನು ವರದಿ ಮಾಡುವಲ್ಲಿ ರಾಜ್ಯಸಭಾ ಟಿವಿ ಪಕ್ಷಪಾತಿಯಾಗಿದೆ ಎಂದು ಪ್ರತಿಪಕ್ಷಗಳ ಸಂಸದರು ರಜನಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡರು. ಆದಾಗ್ಯೂ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌ ಅವರು ಪಟ್ಟು ಬದಲಿಸದೆ, “ಈ ಅಹಿತಕರ ಚಟುವಟಿಕೆಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿ ರಜನಿ ಅವರನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿಯು ಈ ವಿಷಯವನ್ನು ಪರಿಶೀಲಿಸುತ್ತದೆ ಎಂದು ಧನಕರ್‌ ಅವರು ಸದನಕ್ಕೆ ತಿಳಿಸಿದ್ದಾರೆ.

“ಟ್ರಜರಿ ಪೀಠದ ಒತ್ತಡದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ” ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

“ಮೊದಲು ವಿಚಾರಣೆ ನಡೆಯಬೇಕು. ಸದಸ್ಯರು ತಪ್ಪಿತಸ್ಥರಾಗಿದ್ದರೆ, ನೀವು ಎಚ್ಚರಿಸಬಹುದು, ಇದು ಮೊದಲ ಬಾರಿಗೆ ಆಗಿದೆ. ನೀವು ಕ್ಷಮಿಸಬಹುದು, ನೀವು ಎಚ್ಚರಿಕೆ ನೀಡಬಹುದು. ಆದ್ದರಿಂದ, ಈ ವಿಷಯವನ್ನು ಮತ್ತಷ್ಟು ಮುಂದುವರಿಸಬೇಡಿ ಎಂದು ನಾನು ನಿಮ್ಮಲ್ಲಿ ಕೋರಿತ್ತೇನೆ” ಎಂದು ಮನವಿ ಮಾಡಿದರು.

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮಾತನಾಡಿ, “ಇದೇ ರೀತಿಯ ಘಟನೆಗಳು ಹಲವಾರು ಬಾರಿ ಸಂಭವಿಸಿವೆ” ಎಂದರು. “ಪರ್ವತಗಳೇನೂ ಕೆಳಗುದುರಿ ಬೀಳುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ” ಎಂದರು.

ಆಮ್‌ ಆದ್ಮಿ ಪಕ್ಷದ ಸಂಸದರಾಗಿದ್ದ ಭಗವಂತ್ ಮಾನ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಸತ್ತಿನ ನೇರ ಪ್ರಸಾರವನ್ನು ಮಾಡಿದ್ದಾಗ 2016ರಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆ ಕ್ರಮಗಳನ್ವಯ ರಜನಿ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಧನಕರ್‌ ಸಮರ್ಥಿಸಿಕೊಂಡರು.

ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನೊಳಗೊಂಡ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮಾನ್ ಅವರನ್ನು ಇಡೀ ಅಧಿವೇಶನದಿಂದ ಹೊರಗಿಡಲಾಗಿತ್ತು. (ಮಾನ್ ಈಗ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾರೆ.)

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ರಜನಿ ಪಾಟೀಲ್, “ಯಾವ ತಪ್ಪಿಗಾಗಿ ಈ ಶಿಕ್ಷೆ ನೀಡಲಾಗಿದೆ? ನನ್ನನ್ನು ಅಮಾನತು ಮಾಡಿರುವುದು ಪ್ರಾಯೋಜಿತ ಕಾರ್ಯಕ್ರಮದ ಭಾಗವಾಗಿದೆ. ವಿರೋಧ ಪಕ್ಷದ ಸಂಸದರು ಹಲವಾರು ಬಾರಿ ಘೋಷಣೆಗಳನ್ನು ಕೂಗುತ್ತಾ ಮೋದಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಅಮಾನತು ಮಾಡಿದ್ದಾರೆ” ಎಂದು ದೂರಿದ್ದಾರೆ.

“ಚರ್ಚೆ ನಡೆಯುತ್ತಿರುವ ರೀತಿ, ಯಾರೋ ತಿಳಿಯದೆ ತಪ್ಪು ಮಾಡಿದ್ದಾರೆ ಎಂದು ನನಗನಿಸಿತ್ತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರಿಗೆ, ಇಲ್ಲಿ ಇರಲು ಯಾವುದೇ ಹಕ್ಕು ಇಲ್ಲವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...