Homeಕರ್ನಾಟಕದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

- Advertisement -
- Advertisement -

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ತಮ್ಮ ಭೂಮಿ ಉಳಿಸಿಕೊಳ್ಳುವ ಸಲುವಾಗಿ ಕಳೆದ 1118 ದಿನಗಳಿಂದ ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು, ಸ್ವಾಧೀನ ಕೈಬಿಡುವಂತೆ ಹಿಂದಿನ ಬಿಜೆಪಿ ಸರ್ಕಾರ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಚನ್ನರಾಯಪಟ್ಟಣ, ದೇವನಹಳ್ಳಿ ಪಟ್ಟಣ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಫ್ರೀಂಡಂ ಪಾರ್ಕಿನಲ್ಲಿ ಹಲವು ರೀತಿಯ ಹೋರಾಟ ಮಾಡಿದ್ದರೂ, ಅಧಿಕಾರಿಗಳು ಹಾಗೂ ಸರ್ಕಾರದ ಮನಸ್ಸು ಮಾತ್ರ ಕರಗಿಲ್ಲ.

ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಭೂಸ್ವಾಧೀನ ಕೈಬಿಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಾತು ತಪ್ಪಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆಗೆ ನೇರವಾಗಿ ಎರಡು ಸಭೆಗಳಾಗಿದ್ದು, ರೈತರ ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ಹಲವು ನಾಯಕರ ಜೊತೆಗೆ ಹಲವಾರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಇದ್ಯಾವುದಕ್ಕೂ ಸ್ಪಂಧಿಸದ ಸರ್ಕಾರ ದಿ.16-0402025 ರಂದು ಮೂರು ಹಳ್ಳಿಗಳನ್ನು ಕೈಬಿಟ್ಟು (ಚನ್ನರಾಯಪಟ್ಟಣ, ಮಟ್ಟಬಾರ್ಲು, ತೆಲ್ಲೋಹಳ್ಳಿ) ಅಂತಿಮ ಅಧಿಸೂಚನೆ ಹೊರಡಿಸಿದೆ.

“ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ದೇವನಹಳ್ಳಿ ಶಾಸಕರಾದ ಕೆಎಚ್ ಮುನಿಯಪ್ಪ ಈ ವಿಚಾರದಲ್ಲಿ ಅಸಹಾಯಕರಾಗಿದ್ದಾರೆ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ನಮ್ಮ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಿಂದಿನ ಸಚಿವರಾದ ಮುರುಗೇಶ್ ನಿರಾಣಿ ಕೂಡ ಇದೇ ರೀತಿ ವರ್ತಿಇಸಿದ್ದರು. ರೈತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗೇನೂ ಇಲ್ಲ” ಎಂದು ಚನ್ನರಾಯಪಟ್ಟಣ ರೈತರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರದ ಹೇಡಿತನದ ಕೃತ್ಯ: ಕೆಪಿಆರ್‌ಎಸ್‌ ಕಟು ಟೀಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರ್ಕಾರದ ಹೇಡಿತನದ ಕೃತ್ಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಕರ್ನಾಟಕ ರಾಜ್ಯ ಸಮಿತಿ ಕಟುವಾಗಿ ಟೀಕಿಸಿದೆ.

ಕಳೆದ 1118 ದಿನಗಳಿಂದ; ಅಂದರೆ, ಸುಮಾರು ನಾಲ್ಕು ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ . ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂ ಸ್ವಾಧೀನಕ್ಕೆ ತಮ್ಮ ಅಸಮ್ಮತಿ ಹಾಗೂ ವಿರೋಧವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ ,
ಬಲವಂತದ ಭೂ ಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ – 2013 ರ ಸ್ಪಷ್ಠ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕೆಪಿಆರ್‌ಎಸ್‌, “ಈ ರೈತರು ವಿವಿಧೆಡೆ ನಡೆಸಿದ ಪ್ರತಿಭಟನಾ ಧರಣಿ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾಗಿ ಭೇಟಿ ಕೊಟ್ಟು ತಾನೂ ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನ ವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಈಗ ಉಸ್ತುವಾರಿ ಸಚಿವರಾಗಿರುವ ಕೆಎಚ್ ಮುನಿಯಪ್ಪ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ದವಾಗಿ ವರ್ತಿಸಿ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು” ಆಕ್ರೋಶ ಹೊರಹಾಕಿದೆ.

“ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟ ಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂ ಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ -ನಿರಾಶೆ ಉಂಟು ಮಾಡಿ ಒಡಕು ಉಂಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ” ಎಂದು ಹೇಳಿದೆ.

“ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡಿ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯ ರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷರು, ಸಿಪಿಐಎಂ ಪಾಲಿಟ್ ಬ್ಯೂರೋ ಸದಸ್ಯರು, ಸಂಯುಕ್ತ ಕಿಸಾನ್ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್ ಧವಳೆ, ಅಖಿಲ ಭಾರತ ಕಿಸಾನ್ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್ ,ಭಾರತೀಯ ಕಿಸಾನ್ ಯೂನಿಯನ್ ನ ರಾಕೇಶ್ ಟಿಕಾಯತ್ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲಾ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆಂಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ. ಮೇಲಾಗಿ ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿಸಿ ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚ್ಚರಿಸುತ್ತಾ ಮರಣವನ್ನಪ್ಪಿದ್ದಾರೆ” ಎಂದು ವಿವರಿಸಿದೆ.

“ಇಷ್ಟೆಲ್ಲಾ ಇದ್ದರೂ, ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್ ಎಸ್ಟೇಟ್ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ
ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ಮಾಡೇ ತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂ ಸ್ವಾಧೀನದ ಭೀತಿ ಎದುರಿಸುತ್ತಿರುವ ಎಲ್ಲಾ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸುತ್ತೇವೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...