Homeಕರ್ನಾಟಕದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

- Advertisement -
- Advertisement -

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ತಮ್ಮ ಭೂಮಿ ಉಳಿಸಿಕೊಳ್ಳುವ ಸಲುವಾಗಿ ಕಳೆದ 1118 ದಿನಗಳಿಂದ ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು, ಸ್ವಾಧೀನ ಕೈಬಿಡುವಂತೆ ಹಿಂದಿನ ಬಿಜೆಪಿ ಸರ್ಕಾರ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಚನ್ನರಾಯಪಟ್ಟಣ, ದೇವನಹಳ್ಳಿ ಪಟ್ಟಣ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಫ್ರೀಂಡಂ ಪಾರ್ಕಿನಲ್ಲಿ ಹಲವು ರೀತಿಯ ಹೋರಾಟ ಮಾಡಿದ್ದರೂ, ಅಧಿಕಾರಿಗಳು ಹಾಗೂ ಸರ್ಕಾರದ ಮನಸ್ಸು ಮಾತ್ರ ಕರಗಿಲ್ಲ.

ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಭೂಸ್ವಾಧೀನ ಕೈಬಿಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಾತು ತಪ್ಪಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆಗೆ ನೇರವಾಗಿ ಎರಡು ಸಭೆಗಳಾಗಿದ್ದು, ರೈತರ ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ಹಲವು ನಾಯಕರ ಜೊತೆಗೆ ಹಲವಾರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಇದ್ಯಾವುದಕ್ಕೂ ಸ್ಪಂಧಿಸದ ಸರ್ಕಾರ ದಿ.16-0402025 ರಂದು ಮೂರು ಹಳ್ಳಿಗಳನ್ನು ಕೈಬಿಟ್ಟು (ಚನ್ನರಾಯಪಟ್ಟಣ, ಮಟ್ಟಬಾರ್ಲು, ತೆಲ್ಲೋಹಳ್ಳಿ) ಅಂತಿಮ ಅಧಿಸೂಚನೆ ಹೊರಡಿಸಿದೆ.

“ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ದೇವನಹಳ್ಳಿ ಶಾಸಕರಾದ ಕೆಎಚ್ ಮುನಿಯಪ್ಪ ಈ ವಿಚಾರದಲ್ಲಿ ಅಸಹಾಯಕರಾಗಿದ್ದಾರೆ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ನಮ್ಮ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಿಂದಿನ ಸಚಿವರಾದ ಮುರುಗೇಶ್ ನಿರಾಣಿ ಕೂಡ ಇದೇ ರೀತಿ ವರ್ತಿಇಸಿದ್ದರು. ರೈತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗೇನೂ ಇಲ್ಲ” ಎಂದು ಚನ್ನರಾಯಪಟ್ಟಣ ರೈತರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರದ ಹೇಡಿತನದ ಕೃತ್ಯ: ಕೆಪಿಆರ್‌ಎಸ್‌ ಕಟು ಟೀಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರ್ಕಾರದ ಹೇಡಿತನದ ಕೃತ್ಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಕರ್ನಾಟಕ ರಾಜ್ಯ ಸಮಿತಿ ಕಟುವಾಗಿ ಟೀಕಿಸಿದೆ.

ಕಳೆದ 1118 ದಿನಗಳಿಂದ; ಅಂದರೆ, ಸುಮಾರು ನಾಲ್ಕು ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ . ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂ ಸ್ವಾಧೀನಕ್ಕೆ ತಮ್ಮ ಅಸಮ್ಮತಿ ಹಾಗೂ ವಿರೋಧವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ ,
ಬಲವಂತದ ಭೂ ಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ – 2013 ರ ಸ್ಪಷ್ಠ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕೆಪಿಆರ್‌ಎಸ್‌, “ಈ ರೈತರು ವಿವಿಧೆಡೆ ನಡೆಸಿದ ಪ್ರತಿಭಟನಾ ಧರಣಿ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾಗಿ ಭೇಟಿ ಕೊಟ್ಟು ತಾನೂ ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನ ವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಈಗ ಉಸ್ತುವಾರಿ ಸಚಿವರಾಗಿರುವ ಕೆಎಚ್ ಮುನಿಯಪ್ಪ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ದವಾಗಿ ವರ್ತಿಸಿ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು” ಆಕ್ರೋಶ ಹೊರಹಾಕಿದೆ.

“ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟ ಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂ ಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ -ನಿರಾಶೆ ಉಂಟು ಮಾಡಿ ಒಡಕು ಉಂಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ” ಎಂದು ಹೇಳಿದೆ.

“ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡಿ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯ ರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷರು, ಸಿಪಿಐಎಂ ಪಾಲಿಟ್ ಬ್ಯೂರೋ ಸದಸ್ಯರು, ಸಂಯುಕ್ತ ಕಿಸಾನ್ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್ ಧವಳೆ, ಅಖಿಲ ಭಾರತ ಕಿಸಾನ್ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್ ,ಭಾರತೀಯ ಕಿಸಾನ್ ಯೂನಿಯನ್ ನ ರಾಕೇಶ್ ಟಿಕಾಯತ್ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲಾ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆಂಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ. ಮೇಲಾಗಿ ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿಸಿ ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚ್ಚರಿಸುತ್ತಾ ಮರಣವನ್ನಪ್ಪಿದ್ದಾರೆ” ಎಂದು ವಿವರಿಸಿದೆ.

“ಇಷ್ಟೆಲ್ಲಾ ಇದ್ದರೂ, ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್ ಎಸ್ಟೇಟ್ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ
ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ಮಾಡೇ ತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂ ಸ್ವಾಧೀನದ ಭೀತಿ ಎದುರಿಸುತ್ತಿರುವ ಎಲ್ಲಾ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸುತ್ತೇವೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...