Homeಕರ್ನಾಟಕದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ದೇವನಹಳ್ಳಿ| ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ; ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

- Advertisement -
- Advertisement -

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ತಮ್ಮ ಭೂಮಿ ಉಳಿಸಿಕೊಳ್ಳುವ ಸಲುವಾಗಿ ಕಳೆದ 1118 ದಿನಗಳಿಂದ ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು, ಸ್ವಾಧೀನ ಕೈಬಿಡುವಂತೆ ಹಿಂದಿನ ಬಿಜೆಪಿ ಸರ್ಕಾರ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಚನ್ನರಾಯಪಟ್ಟಣ, ದೇವನಹಳ್ಳಿ ಪಟ್ಟಣ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಫ್ರೀಂಡಂ ಪಾರ್ಕಿನಲ್ಲಿ ಹಲವು ರೀತಿಯ ಹೋರಾಟ ಮಾಡಿದ್ದರೂ, ಅಧಿಕಾರಿಗಳು ಹಾಗೂ ಸರ್ಕಾರದ ಮನಸ್ಸು ಮಾತ್ರ ಕರಗಿಲ್ಲ.

ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಭೂಸ್ವಾಧೀನ ಕೈಬಿಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಾತು ತಪ್ಪಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆಗೆ ನೇರವಾಗಿ ಎರಡು ಸಭೆಗಳಾಗಿದ್ದು, ರೈತರ ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ಹಲವು ನಾಯಕರ ಜೊತೆಗೆ ಹಲವಾರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಇದ್ಯಾವುದಕ್ಕೂ ಸ್ಪಂಧಿಸದ ಸರ್ಕಾರ ದಿ.16-0402025 ರಂದು ಮೂರು ಹಳ್ಳಿಗಳನ್ನು ಕೈಬಿಟ್ಟು (ಚನ್ನರಾಯಪಟ್ಟಣ, ಮಟ್ಟಬಾರ್ಲು, ತೆಲ್ಲೋಹಳ್ಳಿ) ಅಂತಿಮ ಅಧಿಸೂಚನೆ ಹೊರಡಿಸಿದೆ.

“ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ದೇವನಹಳ್ಳಿ ಶಾಸಕರಾದ ಕೆಎಚ್ ಮುನಿಯಪ್ಪ ಈ ವಿಚಾರದಲ್ಲಿ ಅಸಹಾಯಕರಾಗಿದ್ದಾರೆ. ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ನಮ್ಮ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಪಟ್ಟು ಹಿಡಿದಿದ್ದಾರೆ. ಹಿಂದಿನ ಸಚಿವರಾದ ಮುರುಗೇಶ್ ನಿರಾಣಿ ಕೂಡ ಇದೇ ರೀತಿ ವರ್ತಿಇಸಿದ್ದರು. ರೈತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗೇನೂ ಇಲ್ಲ” ಎಂದು ಚನ್ನರಾಯಪಟ್ಟಣ ರೈತರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರದ ಹೇಡಿತನದ ಕೃತ್ಯ: ಕೆಪಿಆರ್‌ಎಸ್‌ ಕಟು ಟೀಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರ್ಕಾರದ ಹೇಡಿತನದ ಕೃತ್ಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ಕರ್ನಾಟಕ ರಾಜ್ಯ ಸಮಿತಿ ಕಟುವಾಗಿ ಟೀಕಿಸಿದೆ.

ಕಳೆದ 1118 ದಿನಗಳಿಂದ; ಅಂದರೆ, ಸುಮಾರು ನಾಲ್ಕು ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ . ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂ ಸ್ವಾಧೀನಕ್ಕೆ ತಮ್ಮ ಅಸಮ್ಮತಿ ಹಾಗೂ ವಿರೋಧವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ ,
ಬಲವಂತದ ಭೂ ಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ – 2013 ರ ಸ್ಪಷ್ಠ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕೆಪಿಆರ್‌ಎಸ್‌, “ಈ ರೈತರು ವಿವಿಧೆಡೆ ನಡೆಸಿದ ಪ್ರತಿಭಟನಾ ಧರಣಿ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾಗಿ ಭೇಟಿ ಕೊಟ್ಟು ತಾನೂ ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನ ವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಈಗ ಉಸ್ತುವಾರಿ ಸಚಿವರಾಗಿರುವ ಕೆಎಚ್ ಮುನಿಯಪ್ಪ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡುವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ದವಾಗಿ ವರ್ತಿಸಿ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು” ಆಕ್ರೋಶ ಹೊರಹಾಕಿದೆ.

“ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟ ಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂ ಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ -ನಿರಾಶೆ ಉಂಟು ಮಾಡಿ ಒಡಕು ಉಂಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ” ಎಂದು ಹೇಳಿದೆ.

“ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡಿ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯ ರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷರು, ಸಿಪಿಐಎಂ ಪಾಲಿಟ್ ಬ್ಯೂರೋ ಸದಸ್ಯರು, ಸಂಯುಕ್ತ ಕಿಸಾನ್ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್ ಧವಳೆ, ಅಖಿಲ ಭಾರತ ಕಿಸಾನ್ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್ ,ಭಾರತೀಯ ಕಿಸಾನ್ ಯೂನಿಯನ್ ನ ರಾಕೇಶ್ ಟಿಕಾಯತ್ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲಾ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆಂಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ. ಮೇಲಾಗಿ ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿಸಿ ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚ್ಚರಿಸುತ್ತಾ ಮರಣವನ್ನಪ್ಪಿದ್ದಾರೆ” ಎಂದು ವಿವರಿಸಿದೆ.

“ಇಷ್ಟೆಲ್ಲಾ ಇದ್ದರೂ, ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್ ಎಸ್ಟೇಟ್ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ
ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ಮಾಡೇ ತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂ ಸ್ವಾಧೀನದ ಭೀತಿ ಎದುರಿಸುತ್ತಿರುವ ಎಲ್ಲಾ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸುತ್ತೇವೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...