Homeಮುಖಪುಟಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ...

ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

- Advertisement -
- Advertisement -

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕರಡು ರಚನೆಗಾಗಿ ರಚಿಸಲಾಗಿದ್ದ ಐವರು ಸದಸ್ಯರ ಸಮಿತಿಯು ಶುಕ್ರವಾರ ತನ್ನ ಅಂತಿಮ ಕರಡು ವರದಿಯನ್ನು ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಕೆ ಮಾಡಿದೆ.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿದೆ.

ಈ ಕುರಿತು ದೆಹಲಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಉತ್ತರಾಖಂಡ ಸರ್ಕಾರವು ಭರವಸೆಯಂತೆ ಯುಸಿಸಿ ಕಾನೂನನ್ನು ತರಲು ಸಿದ್ಧವಾಗಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕರಡು ಪ್ರತಿ ತಯಾರಿಸಲು ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ. 2022ರಲ್ಲಿ ಸರ್ಕಾರ ರಚಿಸಿದ ನಂತರ ನಾವು ನಮ್ಮ ಜನರಿಗೆ ನೀಡಿದ್ದ ನಮ್ಮ ಭರವಸೆ ಇದಾಗಿದೆ. ನಮ್ಮ ಬದ್ಧತೆಯನ್ನು ಈಡೇರಿಸುವಲ್ಲಿ ಇದು ಒಂದು ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಯುಸಿಸಿ ವರದಿಯನ್ನು ಫೆಬ್ರವರಿ 5 ರಿಂದ ರಾಜ್ಯ ವಿಧಾನಸಭೆಯಲ್ಲಿ ಚರ್ಚೆಗಾಗಿ ಮಂಡಿಸಲಾಗುವುದು ಮತ್ತು ಅಂತಿಮವಾಗಿ ಅನುಷ್ಠಾನದ ಮೊದಲು ಅದನ್ನು ವಿವರವಾಗಿ ಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವರದಿ ಕುರಿತು ಚರ್ಚೆ ನಡೆಯಲಿದೆ.

ಅಂತಿಮ ಯುಸಿಸಿ ಕರಡು ಲಿಂಗ ಸಮಾನತೆ ಅಥವಾ ತಾರತಮ್ಯದ ನಿರ್ಮೂಲನೆ, ಆಸ್ತಿ ಹಕ್ಕುಗಳ ಮೇಲಿನ ಏಕರೂಪದ ಕಾನೂನುಗಳಿಂದ ದತ್ತು ನಿಯಮಗಳವರೆಗೆ ಎಲ್ಲವನ್ನೂ ಒಳಗೊಂಡಿದೆ. ಉರ್ದುವಿನ ಒಂದೇ ಒಂದು ಪದವನ್ನು ಕರಡು ಪ್ರತಿಯಲ್ಲಿ ಬಳಕೆ ಮಾಡಲಾಗಿಲ್ಲ. ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು), ತೃತೀಯಲಿಂಗಿಗಳ ಹಕ್ಕುಗಳು, ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿ ಯಾವುದೇ ತಿದ್ದುಪಡಿ ಮಾಡಬಾರದು ಎಂದು ಕರಡು ಶಿಫಾರಸು ಮಾಡಿದೆ ಎಂದು ಯುಸಿಸಿ ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಬುಡಕಟ್ಟು ಜನಸಂಖ್ಯೆಯು ಒಟ್ಟು ಜನಸಂಖ್ಯೆಯ ಸುಮಾರು 2.9 ಪ್ರತಿಶತವನ್ನು ಹೊಂದಿದೆ, ಮೊದಲಿನಿಂದಲೂ UCCಯ ಬಗ್ಗೆ ಈ ಸಮುದಾಯ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ ಬಂದಿದೆ.  ಚಕ್ರತಾ ಮತ್ತು ನಾನಕಮಟ್ಟಾ ಮುಂತಾದ ಸ್ಥಳಗಳಲ್ಲಿ ಈ ಸಮುದಾಯ ವಾಸಿಸುತ್ತಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...