Homeಮುಖಪುಟಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ...

ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

- Advertisement -
- Advertisement -

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕರಡು ರಚನೆಗಾಗಿ ರಚಿಸಲಾಗಿದ್ದ ಐವರು ಸದಸ್ಯರ ಸಮಿತಿಯು ಶುಕ್ರವಾರ ತನ್ನ ಅಂತಿಮ ಕರಡು ವರದಿಯನ್ನು ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಕೆ ಮಾಡಿದೆ.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿದೆ.

ಈ ಕುರಿತು ದೆಹಲಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಉತ್ತರಾಖಂಡ ಸರ್ಕಾರವು ಭರವಸೆಯಂತೆ ಯುಸಿಸಿ ಕಾನೂನನ್ನು ತರಲು ಸಿದ್ಧವಾಗಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕರಡು ಪ್ರತಿ ತಯಾರಿಸಲು ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ. 2022ರಲ್ಲಿ ಸರ್ಕಾರ ರಚಿಸಿದ ನಂತರ ನಾವು ನಮ್ಮ ಜನರಿಗೆ ನೀಡಿದ್ದ ನಮ್ಮ ಭರವಸೆ ಇದಾಗಿದೆ. ನಮ್ಮ ಬದ್ಧತೆಯನ್ನು ಈಡೇರಿಸುವಲ್ಲಿ ಇದು ಒಂದು ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಯುಸಿಸಿ ವರದಿಯನ್ನು ಫೆಬ್ರವರಿ 5 ರಿಂದ ರಾಜ್ಯ ವಿಧಾನಸಭೆಯಲ್ಲಿ ಚರ್ಚೆಗಾಗಿ ಮಂಡಿಸಲಾಗುವುದು ಮತ್ತು ಅಂತಿಮವಾಗಿ ಅನುಷ್ಠಾನದ ಮೊದಲು ಅದನ್ನು ವಿವರವಾಗಿ ಪರಿಶೀಲಿಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವರದಿ ಕುರಿತು ಚರ್ಚೆ ನಡೆಯಲಿದೆ.

ಅಂತಿಮ ಯುಸಿಸಿ ಕರಡು ಲಿಂಗ ಸಮಾನತೆ ಅಥವಾ ತಾರತಮ್ಯದ ನಿರ್ಮೂಲನೆ, ಆಸ್ತಿ ಹಕ್ಕುಗಳ ಮೇಲಿನ ಏಕರೂಪದ ಕಾನೂನುಗಳಿಂದ ದತ್ತು ನಿಯಮಗಳವರೆಗೆ ಎಲ್ಲವನ್ನೂ ಒಳಗೊಂಡಿದೆ. ಉರ್ದುವಿನ ಒಂದೇ ಒಂದು ಪದವನ್ನು ಕರಡು ಪ್ರತಿಯಲ್ಲಿ ಬಳಕೆ ಮಾಡಲಾಗಿಲ್ಲ. ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು), ತೃತೀಯಲಿಂಗಿಗಳ ಹಕ್ಕುಗಳು, ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿ ಯಾವುದೇ ತಿದ್ದುಪಡಿ ಮಾಡಬಾರದು ಎಂದು ಕರಡು ಶಿಫಾರಸು ಮಾಡಿದೆ ಎಂದು ಯುಸಿಸಿ ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಬುಡಕಟ್ಟು ಜನಸಂಖ್ಯೆಯು ಒಟ್ಟು ಜನಸಂಖ್ಯೆಯ ಸುಮಾರು 2.9 ಪ್ರತಿಶತವನ್ನು ಹೊಂದಿದೆ, ಮೊದಲಿನಿಂದಲೂ UCCಯ ಬಗ್ಗೆ ಈ ಸಮುದಾಯ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ ಬಂದಿದೆ.  ಚಕ್ರತಾ ಮತ್ತು ನಾನಕಮಟ್ಟಾ ಮುಂತಾದ ಸ್ಥಳಗಳಲ್ಲಿ ಈ ಸಮುದಾಯ ವಾಸಿಸುತ್ತಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...