Homeಕರ್ನಾಟಕ​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ 'ಹೋರಾಟ ಸಮಿತಿ'

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

- Advertisement -
- Advertisement -

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ ಮತ್ತು ಒಗ್ಗಟ್ಟಿನ ಫಲವಾಗಿ, ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಹೋರಾಟಕ್ಕೆ ಅಂತಿಮ ಜಯ ಲಭಿಸಿದೆ.

​ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನೇ ಕೈಬಿಡುವವುದಾಗಿ ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಘೋಷಣೆ ಮಾಡಿದರು. ಆದರೆ, ಅದರ ನಂತರವೂ ಕೆಲವು ನಕಾರಾತ್ಮಕ ಬೆಳವಣಿಗೆಗಳು ನಡೆದು ರೈತರು ಆತಂಕಗೊಂಡಿದ್ದರು. ಮುಖ್ಯಮಂತ್ರಿಗಳ ಘೋಷಣೆಗೆ ವಿರುದ್ಧವಾಗಿ, 13 ಹಳ್ಳಿಗಳ ಪೈಕಿ ಎರಡು ಹಳ್ಳಿಗಳ ಭೂಮಿಗೆ ಬೆಲೆ ನಿಗದಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು. ಅವರ ಲೆಕ್ಕಾಚಾರ ಫಲ ಕೊಡದಿದ್ದಾಗ, ಶಾಶ್ವತ ವಿಶೇಷ ಕೃಷಿ ವಲಯ ಘೋಷಣೆಯ ವದಂತಿಯನ್ನೂ ತೇಲಿಬಿಡಲಾಗಿತ್ತು.

​ಈ ಎಲ್ಲ ಬೆಳವಣಿಗೆಗಳ ನಡುವೆಯೇ, ನವೆಂಬರ್ 26 ರ ಬೃಹತ್ ‘ಬೆಂಗಳೂರು ಚಲೋ’ ಸಂದರ್ಭದಲ್ಲಿ, ಸಂಯುಕ್ತ ಹೋರಾಟದ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ನಡೆದ ಮಾತುಕತೆಯಂತೆ, ಡಿ. 4 ರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿನೋಟಿಫಿಕೇಶನ್‌ಗೆ (ಭೂಸ್ವಾಧೀನ ಕೈಬಿಡಲು) ಸಮ್ಮತಿ ಸೂಚಿಸಿದೆ.

ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಈ ಸುದೀರ್ಘ ಹೋರಾಟದ ದಾರಿ ಸುಲಭವಾಗಿರಲಿಲ್ಲ. ಹೆಜ್ಜೆ ಹೆಜ್ಜೆಗೂ ಎದುರಾದ ತಿರುವುಗಳು, ಸರ್ಕಾರಗಳ ನಿರ್ಲಕ್ಷ್ಯ, ಕುತಂತ್ರಗಳು, ವಿರೋಧಿಗಳ ಬೆದರಿಕೆಗಳನ್ನೆಲ್ಲಾ ಮೀರಿ ಕೊನೆಗೂ ರೈತರು ಗೆದ್ದಿದ್ದಾರೆ.

ರೈತರ ಜೊತೆ ನಿಂತ ಜನಸಮುದಾಯಗಳಿಗೆ ಧನ್ಯವಾದ ತಿಳಿಸಿದ ಹೋರಾಟ ಸಮಿತಿ

​ರೈತರ ಹೋರಾಟದ ಕೊನೆಯ ದಿನಗಳಲ್ಲಿ ಇಡೀ ರಾಜ್ಯದ ಜನತೆ ದೇವನಹಳ್ಳಿ ರೈತರ ಜೊತೆಗೆ ನಿಂತರು. ದೇವನಹಳ್ಳಿ ಚಲೋ ನಂತರ, ಎಲ್ಲ ರೈತ, ಕಾರ್ಮಿಕ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಾಹಿತಿಗಳು, ಕಲಾವಿದರು, ಮಠಾಧೀಶರು, ಪ್ರಜ್ಞಾವಂತ ನಾಗರಿಕರು ಒಟ್ಟಾಗಿ ಬಂದು, ರೈತರ ಉಳಿವಿಗಾಗಿ ಜೊತೆ ನಿಂತಿದ್ದನ್ನು ಇಲ್ಲಿ ಸ್ಮರಿಸುತ್ತೇವೆ ಎಂದು ರೈತರು ಅಭಿಪ್ರಾಯಪಟ್ಟರು.

​ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್‌, “ಭೂಸ್ವಾಧೀನ ಕೈಬಿಟ್ಟಿರುವ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು. ಈ ರೈತಪರ ನಿಲುವನ್ನು ಸಮಿತಿಯು ಸ್ವಾಗತಿಸುತ್ತದೆ. ಈ ಗೆಲುವಿನ ಹಿಂದೆ ಒಟ್ಟಾಗಿ ಹಗಲಿರುಳೆನ್ನದೆ ದುಡಿದ ರೈತರ ಶ್ರಮವಿದೆ. ಜೊತೆಗೆ ವಿವಿಧ ಜನಪರ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ನಟರು ಸೇರಿದಂತೆ ಎಲ್ಲ ಜನಸಮುದಾಯಗಳ ಬೆಂಬಲ ದೊರೆತದ್ದು ಮತ್ತಷ್ಟು ಗೆಲುವಾಗಲು ಕಾರಣವಾಗಿದೆ. ಆದ್ದರಿಂದ ಅವರೆಲ್ಲರಿಗೂ ನಮ್ಮ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಇಲ್ಲಿ ಮಾತ್ರವಲ್ಲ, ತಮ್ಮ ಭೂಮಿಯನ್ನು ಪ್ರೀತಿಸುವ, ಭೂತಾಯಿಯನ್ನು ನಂಬಿ ಬದುಕಲು ಬಯಸುವ ಎಲ್ಲರಿಗೂ ಭೂಮಿ ಸಿಗಬೇಕು. ಈ ಎಲ್ಲ ಜನಸಮುದಾಯಗಳ ಜೊತೆ ನಾವಿರುತ್ತೇವೆ” ಎಂದರು.

​ಮುಖಂಡರಾದ ಮಾರೇಗೌಡ ಮಾತನಾಡಿ, “ನಮ್ಮ ಭೂಮಿ ಉಳಿದಿರುವ ಈ ಸಂತೋಷವನ್ನು, ನಮಗೆ ಬೆಂಬಲಿಸಿದ ಎಲ್ಲರಿಗೂ, ಜೊತೆಗೆ ನಿಂತ ಸಂಘಟನೆಗಳು, ಹೋರಾಟದ ಸಹಚರರು ಹಾಗೂ ನಾಡಿನ ಜನರೊಂದಿಗೆ ಹಂಚಿಕೊಳ್ಳಲು ಮತ್ತು ಅವರನ್ನು ಅಭಿನಂದಿಸಲು ನಾವು ಬಯಸುತ್ತೇವೆ. ಇದರ ಜೊತೆಗೆ ಈ ರೈತಪರ ನಿರ್ಣಯಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕಾರಣರಾದ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು.

​ಪತ್ರಿಕಾಗೋಷ್ಠಿಯಲ್ಲಿ, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ, ವೆಂಕಟರಮಣಪ್ಪ, ಪಿಳ್ಳಣ್ಣ, ಮುನಿಕೃಷ್ಣಪ್ಪ, ನಂದೀಶ್, ಕೃಷ್ಣಪ್ಪ, ಮರಿಯಣ್ಣ, ಮೋಹನ್, ವೆಂಕಟೇಶ್, ಪಿಳ್ಳರಾಜು, ಗೋಪಿನಾಥ್, ಲಗುಮಣ್ಣ, ಮಂಜುನಾಥ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...