Homeಮುಖಪುಟಮಹಾತ್ಮ ಗಾಂಧಿಯವರನ್ನು ಗೌರವಿಸುತ್ತೇನೆ: ನನ್ನ ಹೇಳಿಕೆಯನ್ನು ವಿರೂಪಗೊಳಿಸಲಾಗಿದೆ: ಪ್ರಗ್ಯಾ ಠಾಕೂರ್‌

ಮಹಾತ್ಮ ಗಾಂಧಿಯವರನ್ನು ಗೌರವಿಸುತ್ತೇನೆ: ನನ್ನ ಹೇಳಿಕೆಯನ್ನು ವಿರೂಪಗೊಳಿಸಲಾಗಿದೆ: ಪ್ರಗ್ಯಾ ಠಾಕೂರ್‌

- Advertisement -
- Advertisement -

ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು “ದೇಶಭಕ್ತ” ಎಂದು ಕರೆದಿದ್ದಕ್ಕಾಗಿ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಶುಕ್ರವಾರ ಲೋಕಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ತನ್ನ ಹೇಳಿಕೆಗೆ ಉತ್ತರಿಸಿದ ಅವರು, “ರಾಷ್ಟ್ರಕ್ಕೆ ಮಹಾತ್ಮ ಗಾಂಧಿಯವರ ಕೊಡುಗೆಯನ್ನು ಗೌರವಿಸುತ್ತೇನೆ” ಎಂದಿದ್ದಾರೆ.

ನನ್ನ ಹೇಳಿಕೆಯನ್ನು ವಿರೂಪಗೊಳಿಸಲಾಗಿದೆ ಮತ್ತು ನ್ಯಾಯಾಲಯವು ಖುಲಾಸೆಗೊಳಿಸಿದ್ದರೂ ನನ್ನನ್ನು ಭಯೋತ್ಪಾದಕಿ ಎಂದು ಕರೆಯಲಾಗಿದೆ ಎಂದು ಪ್ರಗ್ಯಾ ಠಾಕೂರ್ ಆರೋಪಿಸಿದ್ದಾರೆ.

“ಸದನದ ಸದಸ್ಯರೊಬ್ಬರು ನನ್ನನ್ನು‘ಭಯೋತ್ಪಾದಕಿ’ಎಂದು ಉಲ್ಲೇಖಿಸಿದ್ದಾರೆ. ಇದು ನನ್ನ ಘನತೆಯ ಮೇಲಿನ ಆಕ್ರಮಣವಾಗಿದೆ. ನನ್ನ ವಿರುದ್ಧ ಯಾವುದೇ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ ಎಂದೂ ಸಹ ಅವರು ಹೇಳಿದ್ದಾರೆ.

ಸಂಸತ್ತಿನಲ್ಲಿ ಗಾಂಧಿ ಹಂತಕ ನಾಥೂರಾಂ ಗೊಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಿಕ್ಕಾಗಿ ಅವರನ್ನು ಉಳಿದ ಚಳಿಗಾಲದ ಅಧಿವೇಶನಕ್ಕಾಗಿ ಪಕ್ಷದ ಸಂಸದರ ನಿಯಮಿತ ಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದರು.

ಅಷ್ಟು ಮಾತ್ರವಲ್ಲದೇ ಪ್ರಜ್ಞಾ ಠಾಕೂರ್ ಅವರನ್ನು ಇತ್ತೀಚೆಗೆ ಸೇರಿಸಿಕೊಂಡಿದ್ದ ರಕ್ಷಣಾ ಸಂಸದೀಯ ಸಮಿತಿಯಿಂದಲೂ ಸಹ ಹೊರಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ ಬಗ್ಗೆ ಹೇಳಿಕೆ: ಸಂಸತ್ತಿನ ರಕ್ಷಣಾ ಸಮಿತಿಯಿಂದ ಪ್ರಗ್ಯಾ ಠಾಕೂರ್‌ ಹೊರಕ್ಕೆ…

ಆ ನಂತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಗ್ಯಾರನ್ನು ಭಯೋತ್ಪಾದಕಿ ಎಂದು ಕರೆದಿದ್ದರು.

ಇದನ್ನೂ ಓದಿ: ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಯಾಕೆ ಗೋಡ್ಸೆ ಗೆ ಮರ್ಯಾದಿಕೊಟ್ಟು “ಗೋಡ್ಸೆ ಅವರನ್ನು” ಅಂತ ಬರ್ದಿರೋದು.. ?

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...