Homeಅಂಕಣಗಳುಥೂತ್ತೇರಿ | ಯಾಹೂಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು - ಚಂದ್ರೇಗೌಡರ ಕಟ್ಟೆಪುರಾಣ

ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಇದು ಗಾಳಿ ಬೀಸುವ ಕಾಲ, ಬರ್ರೊ ಎಂದು ಬೀಸುವ ಗಾಳಿಯೂ ಕರೋನ ಸೋಂಕನ್ನು ಹೊತ್ತು ತರುತ್ತದೆಂದು ವಾಟಿಸ್ಸೆ ಹೇಳಿದಾಗಿನಿಂದ, ಹೆದರಿದ ಜುಮ್ಮಿ ಮನೆ ಬುಟ್ಟು ಈಚೆ ಬಂದಿರಲಿಲ್ಲ. ಆಗ ಆಗಮಿಸಿದ ಉಗ್ರಿ.

“ಸುಮಲತನಿಗೂ ಕರೋನ ಬಂದದಂತೆ ಕಣೆ” ಎಂದ.

“ಅಯ್ಯೊ ಶಿವನೇ ಅವುಳಿಗ್ಯಾಕೆ ಬತ್ತೂ.”

“ಪಾಪ ಅವಳು ಮನೆವಳಗಿಲ್ದೆಲೆ ಜನಗಳ ಜ್ವತೆ ಮಾತಾಡ್ಯವುಳೆ ಅದ್ಕೆ ಬಂದದೆ.”

“ನೀನು ಎಲ್ಲಿಂದ ಬಂದ್ಲ.”

“ಮನಿಂದ ಬಂದೆ.”

“ಅಂಗಾದ್ರೆ ವಳಿಕೆ ಬಾ, ಎಲ್ಲೆಲ್ಲೊ ನಾಯಿ ತಿರುಗಿದಂಗೆ ತಿರುಗಿದ್ರೆ ಇಲ್ಯಲ್ಲ ಬರದು ಬ್ಯಾಡ.”

“ಆ ಮಾತ ವಾಟಿಸ್ಸೆಗೇಳು.”

“ಯಾವ ಮಾತನಪ್ಪ” ಎನ್ನುತ್ತ ವಾಟಿಸ್ಸೆ ಬಂದ.

“ಇನ್ನ ಮುಂದೆ ಜುಮ್ಮಿ ಮನಿಗೆ ಬರಬೇಕಾದ್ರೆ, ನಿನ್ನ ಮನಿಂದ ಇಲ್ಲಿಗೆ ನೇರವಾಗಿ ಬರಬೇಕಂತೆ. ಅಲ್ಲಿ ಇಲ್ಲಿ ತಿರುಗಿದೊರಿಗೆ ನೊ ಎಂಟ್ರಿ.”

“ಲೇ ಉಗ್ರಿ, ನಾವು ಎಲ್ಯಾರ ತಿರುಗ್ಲಿ. ಆದ್ರೆ ಪೇಸ್‍ನ ಬಟ್ಟೆ ಮಕಾಡದಿಂದ ಕವರ್ ಮಾಡಿರಬೇಕು. ಯಾರತ್ರ ಮಾತಾಡಿದ್ರು ಟೆನ್ ಆರ್ ಪೈ ಪಿಟ್ ದೂರ ಮೆಂಟೇನ್ ಮಾಡಬೇಕು. ಕೈ ಕುಲುಕಬಾರ್ದು. ಎಷ್ಟೇ ಆತ್ಮೀಯರಾದ್ರು ತಬ್ಬಿಕಬಾರ್ದು, ನಿಸರ್ಗನೇ ತಂದಿರೊ ಅಸ್ಪೃಶ್ಯತೆನ ಚಾಚೂ ತಪ್ಪದೆ ಫಾಲೋ ಮಾಡಿದ್ರೆ ಎಲ್ಯಾರ ತಿರುಗಬಹುದು” ಎಂದ ವಾಟಿಸ್ಸೆ.

“ನಿನ್ನಂಗೆ ಮಾತಾಡಿ ಕೃಷ್ಣೇಗೌಡರ ಕತೆ ಏನಾಗ್ಯದೆ ಗೊತ್ತೆ.”

“ಏನಾಗ್ಯದೊ ವಾಟ್ಯಾಪನ್.”

“ವಸ ಇನ್ನೋವಾ ತಗಂಡಿದ್ನಲ್ಲಾ. ಅದ ಯಲ್ಲಾರಿಗೂ ತೋರಿಸಿಗಂಡು ಮಾತಾಡಿಸಿಗಂಡು ತಿರುಗುತಿದ್ದ. ಮನ್ನೆ ದಿನ ಮಂಡ್ಯಾಕ್ಕೂ ಹೋಗಿ ಬಂದನಂತೆ. ಅಷ್ಟೆ. ಅವುನ ಸಮೇತ ಮನಿ ಮಕ್ಕಳಿಗ್ಯಲ್ಲ ಕರೊನ ಹಟಗಾಯಿಸಿಕೊಂಡದೆ.”

“ಛೇ ಪಾಪ ಅಂಗಾಗಬಾರದಿತ್ತು.”

“ನೀನಂಗಂತಿ ಕೇಳಿದೊರ್ಯಲ್ಲ ನಗ್ತರಲ್ಲ ಯಾಕೆ.”

“ಕ್ಯಟ್ಟ ಮನುಸರಿಗೆ ಕರೋನ ಬಂದ್ರೆ ಜನಗಳು ಕ್ಯಟ್ಟ ಕುಶಿಯಿಂದ ನಗ್ತರೆ ಕಣೊ. ಆದ್ರೆ ಇವತ್ತು ಅವುನಿಗೆ ಬಂದಿದ್ದು ನಾಳೆ ನಮಿಗೂ ಬಂದೇ ಬತ್ತದೆ ಅದ್ಕೆ ಆಡಿಕಬಾರ್ದು.”

“ನಿಜ ಕಂಡ್ಳ ನೀನೇಳಿದ್ದು. ನೋಡು ಮದ್ಲು ಮಂಡೇವುಕೆ ಬತ್ತು. ಆಮ್ಯಾಲೆ ನಾಗಮಂಗಲಕ್ಕೆ ಬತ್ತು. ಈಗ ಬಿಂಡಗನೂಲೆ ಹೆಂಗಸಿಗೆ ಬಂದದೆ. ಅಂಗೆ ಇಲ್ಲಿಗೂ ಬರಬಹುದು” ಎಂದಳು ಜುಮ್ಮಿ.

“ಬಂದೆ ಬತ್ತದೆ ಕಣಕ್ಕ. ಯಾಕೆ ಅಂದ್ರೇ ಬೆಂಗಳೂರಲ್ಲಿದ್ರಲ್ಲ ನಮ್ಮ ಜನ ಅವುರ್ಯಲ್ಲ ಮನೆ ಖಾಲಿ ಮಾಡಿಕಂಡು ಊರು ಕಡಿಕೆ ವಂಟವುರೆ. ಅವುರೇನು ಸುಮ್ಮಸುಮ್ಮನೆ ಬಂದರೇ, ಕರೋನ ಹಿಡಕಂಡೇ ಬತ್ತರೆ.”

“ಅಂಗಾದ್ರೆ ಗತಿಯೇನ್ಲ.”

“ಗತಿಯೇನು ಇಲ್ಲ ಕಣಕ್ಕ. ನಿನ್ನ ವಲ್ದತ್ರ ಒಂದು ಗುಡ್ಳಾಯ್ಕಂಡಿರು.”

“ಆಗ ಪ್ಳೇಗು ಕಾಲರ ಬಂದಾಗ ಅಂಗೇ ಮಾಡಿದ್ರಂತೆ.”

“ಈಗ್ಲು ಅಂಗೆ ಮಾಡನ ತಗೊ.”

“ಊರು ಬುಟ್ಟು ಹ್ವರಗೋಗಿ ಗುಡ್ಳಾಯ್ಕಂಡ್ರೆ ಪ್ಲೇಗು ಬತ್ತಿರಲಿಲ್ಲ. ಕರೋನ ಅಂಗಲ್ಲ ಯಾರಿಂದ ಬತ್ತದೆ ಅಂತ ಹೇಳಕ್ಕಾಗದಿಲ್ಲ” ಎಂದ ವಾಟಿಸ್ಸೆ.

“ಪಾಪ ಕೃಷ್ಣೇಗೌಡನಿಗೆ ಬಂದಿರದು ಅಂಗೆ ಅಲವೆ. ಯಾರಿಂದ ಬತ್ತು ಅಂತ್ಲೆ ಗೊತ್ತಿಲ್ಲ” ಎಂದ ಉಗ್ರಿ.

“ಥೇಟ್ ಡಿ.ಕೆ.ಶಿವಕುಮಾರನಂಗವುನೆ ಕಣೊ ಅವುನು. ನೋಡಿದ್ರೆ ಅವಳಿಜವಳಿ ಅನ್ನಬೇಕು.”

“ಅಂತೂ ಡಿ.ಕೆ.ಶಿವಕುಮಾರ್ ಕಡಿಗೂ ಅಧ್ಯಕ್ಷಾದ ಬುಡತ್ತಗೆ.”

“ಅವುನು ವಳ್ಯೊನೇನ್ಲ” ಎಂದಳು.

“ವಳ್ಳೆಯವನು ಅಂದ್ರೆ ಯಾವ ತರನಕ್ಕ. ನಿನ್ನ ಗಂಡನಂಗಿರಬೇಕೊ, ನನ್ನಂಗಿರಬೇಕೊ ಇಲ್ಲ ಈ ಉಗ್ರಿ ತರ ಇರಬೇಕೊ ಯಾವ ತರ ಅಂತ ಹೇಳು.”

“ಬಡವುರಾಧಾರಿನೆ ಅಂತ ಕೇಳಿದೆ ಕಂಡ್ಳ.”

“ಬಡವುರಾಧಾರಿ ಅನ್ನದ್ರಲ್ಲಿ ಯರಡು ಮಾತಿಲ್ಲ ಕಣಕ್ಕ. ದಿವ್ಸ ಮನೆ ಹತ್ರಕ್ಕೆ ನೂರಾರು ಜನ ಬತ್ತರೆ. ಯಾಕೆ ಅಂದ್ರೆ ಯಾರೊ ನಿನ್ನಂಥವುಳಿಗೆ ಹೆರಿಗೆಯಾಗಬೇಕಿರುತ್ತೆ ದುಡ್ಡಿರದಿಲ್ಲ ಡಿ.ಕೆ.ಶಿ ಹುಡಿಕ್ಕಂಡು ಬತ್ತಳೆ.”

“ನನ್ನಂಥೊಳು ಅಂತ ಯಾಕಂತಿಲ ಮುಂಡೆ ಮಗನೆ.”

“ಪರೆಗ್‍ಜಾಂಪಲ್ಲು ಕಣಕ್ಕ ಸಿಟ್ಟಾಗಬ್ಯಾಡ. ಇನ್ನ ಯಂತ್ಯಂಥ ಜನ ಬತ್ತರೆ ಗೊತ್ತ. ಕ್ಯಾನ್ಸರ್ ಆದೊರು, ಆರಟಾಪರೇಶನ್ ಜನ, ತಿಥಿ ಮಾಡೋರು, ನಾಮಕರಣ ಮಾಡೋರು, ತಿರುಪ್ತಿಗೋಗರು, ಅಯ್ಯಪ್ಪ ಸ್ವಾಮಿ ಹುಡಿಕ್ಕಂಡೋಗವು ಹಿಂಗೆ ಈ ಸಮಾಜದ ಸಕಲಿಸ್ಟು ರೋಗನು ಡಿ.ಕೆ.ಶಿ ಮನೆತಕ್ಕೆ ಬತ್ತದೆ.”

“ಅವಿರುಗ್ಯಲ್ಲ ದುಡ್ಡು ಕೊಟ್ಟನೆ.”

“ಯಾರ್ನು ಬರಿಕೈಲಿ ಕಳಸದಿಲ್ಲ ಕಣಕ್ಕ. ನಾನೇ ನಿಂತುಗಂಡು ನೋಡಿದಂಗೆ ಲಕ್ಷಾಂತೃಪಾಯಿ ದಾನ ಮಾಡ್ತನೆ.”

“ಬೇಕಾದಷ್ಟು ಸಂಪಾದ್ನೆ ಮಾಡ್ಯವುನೆ ಕೊಡ್ತನೆ.”

“ಮಿಸ್ಟರ್ ಉಗ್ರಿ, ಸಂಪಾದ್ನೆ ಮಾಡಿದೊರ್ಯಲ್ಲ ದಾನ ಮಾಡಿದ್ರೆ ನಮ್ಮಂಥೊರು ಹಿಂಗಿರತಿರಲಿಲ್ಲ ಕಣೊ. ಡಿ.ಕೆ.ಶಿಗಿಂತ ಅವುನ ತಮ್ಮನಂತೂ ದಾನಸೂರ ಕರ್ಣ ಕಣೊ.”

“ಕರ್ಣ ಏನು ದುಡದಿದ್ನೆ ದುರ್ಯೋಧನ ಮಾಡಿ ಮಡಗಿದ್ದ ಅವುನು ಕೊಟ್ಟ ಅಂಗೆ ಇವುನುವೆ.”

“ನೋಡೊ ಉಗ್ರಿ, ಸಣ್ಣಮಾತ ಯಲ್ಲಾರು ವಿಷಯದಲ್ಲೂ ಮಾತಾಡಕ್ಕೆ ಬರದಿಲ್ಲ. ಈ ಡಿ.ಕೆ. ಬ್ರದರ್ಸೆ ಡಿಪರೆಂಟು ಕಣೊ, ಏನಪ್ಪ ಅಂದ್ರೆ ಇವುರು ಆಸ್ತಿ ಮಾಡಿಕಂಡು ಪವರಿಗೆ ಬತ್ತಾ ಅವುರೆ, ಆದ್ರಿಂದ ಆಸ್ತಿ ಮಾಡೊ ಅಗತ್ಯ ಇಲ್ಲ. ಅದೇ ಎಡೂರಪ್ಪ ಮುಖ್ಯಮಂತ್ರಿಯಾದೇಟಿಗೆ ಬರೀ ಆಸ್ತಿ ಮಾಡದ್ನೆ ಆಡಳತ ಅನ್ನಕಂಡಿದ್ದ. ಡಿ.ಕೆ.ಶಿ ಆಸ್ತಿ ಅದರಿಂದ್ಲೆ ತೊಂದ್ರೆ ಅನುಭವಿಸಿದೋನು. ನಮ್ಮ ಜನಾಂಗದಲ್ಲಿ ಕುಮಾರಣ್ಣನಿಗಿಂತ ವಳ್ಳೆ ಪರಸನ್ನು.”

“ಅದ್ಯಂಗೇಳತಿಯೋ.”

“ಯಂಗೇ ಅಂದ್ರೆ ಡಿ.ಕೆ.ಶಿ ಕಾಂಗ್ರೆಸ್ಸಿಂದ ಬಂದವುನು. ಅವುನು ಕಾಂಗ್ರೆಸ್ಸಿಗ. ಆ ಪಾರ್ಟಿ ಸಿದ್ಧಾಂತ ಮಾತಾಡ್ತನೆ. ಅದೇ ಕುಮಾರಣ್ಣ ಯಾವ ಪಾರ್ಟಿ ಅಂತ್ಲೂ ಹೇಳಕ್ಕ ಬರದಿಲ್ಲ. ಒಟ್ಟಿನಲ್ಲಿ ನಂಬಿಕೆಗೆ ಯೋಗ್ಯನಲ್ಲ ಅಂತ ಅವನಿಂದ ದೂರ ಹೋದೊರು ಹೇಳ್ತ ಅವುರೆ. ಆದ್ರೆ ಡಿ.ಕೆ.ಶಿ ಅಂಗಲ್ಲ ಏನಪ್ಪ ಅಂದ್ರೆ ಒಂದಿಷ್ಟು ರೌಡಿ ಇಮೇಜದೆ.”

“ಸದ್ದಿಕೆ ಅದುಬೇಕು ಕಣೊ. ಈ ಬಿಜೆಪಿಗಳ ಹೆದರಸಬೇಕಾದ್ರೆ ರೌಡಿ ಗಂಟ್ಳೇಬೇಕು ಅದ್ಕೆ ಹೆದರದವುರು.”

“ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು.”

“ಅವುನ್ನೊಂದು ಸತಿ ತೋರುಸ್ಲ.”

“ಹೋಗನಿರಕ್ಕ ಮನೆತಕ್ಕೆ ಹೋಗನ. ಯಸ್ಸೆಂ ಕೃಷ್ಣನ ಕಡಿಯೋರು ಅಂದ್ರೆ ಊಟ ಮಾಡ್ಸಿ ಕಳುಸ್ತನೆ.”

“ !?

  • ಬಿ.ಚಂದ್ರೇಗೌಡ

ಇದನ್ನು ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...