Homeಅಂಕಣಗಳುಥೂತ್ತೇರಿ | ಯಾಹೂಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು - ಚಂದ್ರೇಗೌಡರ ಕಟ್ಟೆಪುರಾಣ

ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಇದು ಗಾಳಿ ಬೀಸುವ ಕಾಲ, ಬರ್ರೊ ಎಂದು ಬೀಸುವ ಗಾಳಿಯೂ ಕರೋನ ಸೋಂಕನ್ನು ಹೊತ್ತು ತರುತ್ತದೆಂದು ವಾಟಿಸ್ಸೆ ಹೇಳಿದಾಗಿನಿಂದ, ಹೆದರಿದ ಜುಮ್ಮಿ ಮನೆ ಬುಟ್ಟು ಈಚೆ ಬಂದಿರಲಿಲ್ಲ. ಆಗ ಆಗಮಿಸಿದ ಉಗ್ರಿ.

“ಸುಮಲತನಿಗೂ ಕರೋನ ಬಂದದಂತೆ ಕಣೆ” ಎಂದ.

“ಅಯ್ಯೊ ಶಿವನೇ ಅವುಳಿಗ್ಯಾಕೆ ಬತ್ತೂ.”

“ಪಾಪ ಅವಳು ಮನೆವಳಗಿಲ್ದೆಲೆ ಜನಗಳ ಜ್ವತೆ ಮಾತಾಡ್ಯವುಳೆ ಅದ್ಕೆ ಬಂದದೆ.”

“ನೀನು ಎಲ್ಲಿಂದ ಬಂದ್ಲ.”

“ಮನಿಂದ ಬಂದೆ.”

“ಅಂಗಾದ್ರೆ ವಳಿಕೆ ಬಾ, ಎಲ್ಲೆಲ್ಲೊ ನಾಯಿ ತಿರುಗಿದಂಗೆ ತಿರುಗಿದ್ರೆ ಇಲ್ಯಲ್ಲ ಬರದು ಬ್ಯಾಡ.”

“ಆ ಮಾತ ವಾಟಿಸ್ಸೆಗೇಳು.”

“ಯಾವ ಮಾತನಪ್ಪ” ಎನ್ನುತ್ತ ವಾಟಿಸ್ಸೆ ಬಂದ.

“ಇನ್ನ ಮುಂದೆ ಜುಮ್ಮಿ ಮನಿಗೆ ಬರಬೇಕಾದ್ರೆ, ನಿನ್ನ ಮನಿಂದ ಇಲ್ಲಿಗೆ ನೇರವಾಗಿ ಬರಬೇಕಂತೆ. ಅಲ್ಲಿ ಇಲ್ಲಿ ತಿರುಗಿದೊರಿಗೆ ನೊ ಎಂಟ್ರಿ.”

“ಲೇ ಉಗ್ರಿ, ನಾವು ಎಲ್ಯಾರ ತಿರುಗ್ಲಿ. ಆದ್ರೆ ಪೇಸ್‍ನ ಬಟ್ಟೆ ಮಕಾಡದಿಂದ ಕವರ್ ಮಾಡಿರಬೇಕು. ಯಾರತ್ರ ಮಾತಾಡಿದ್ರು ಟೆನ್ ಆರ್ ಪೈ ಪಿಟ್ ದೂರ ಮೆಂಟೇನ್ ಮಾಡಬೇಕು. ಕೈ ಕುಲುಕಬಾರ್ದು. ಎಷ್ಟೇ ಆತ್ಮೀಯರಾದ್ರು ತಬ್ಬಿಕಬಾರ್ದು, ನಿಸರ್ಗನೇ ತಂದಿರೊ ಅಸ್ಪೃಶ್ಯತೆನ ಚಾಚೂ ತಪ್ಪದೆ ಫಾಲೋ ಮಾಡಿದ್ರೆ ಎಲ್ಯಾರ ತಿರುಗಬಹುದು” ಎಂದ ವಾಟಿಸ್ಸೆ.

“ನಿನ್ನಂಗೆ ಮಾತಾಡಿ ಕೃಷ್ಣೇಗೌಡರ ಕತೆ ಏನಾಗ್ಯದೆ ಗೊತ್ತೆ.”

“ಏನಾಗ್ಯದೊ ವಾಟ್ಯಾಪನ್.”

“ವಸ ಇನ್ನೋವಾ ತಗಂಡಿದ್ನಲ್ಲಾ. ಅದ ಯಲ್ಲಾರಿಗೂ ತೋರಿಸಿಗಂಡು ಮಾತಾಡಿಸಿಗಂಡು ತಿರುಗುತಿದ್ದ. ಮನ್ನೆ ದಿನ ಮಂಡ್ಯಾಕ್ಕೂ ಹೋಗಿ ಬಂದನಂತೆ. ಅಷ್ಟೆ. ಅವುನ ಸಮೇತ ಮನಿ ಮಕ್ಕಳಿಗ್ಯಲ್ಲ ಕರೊನ ಹಟಗಾಯಿಸಿಕೊಂಡದೆ.”

“ಛೇ ಪಾಪ ಅಂಗಾಗಬಾರದಿತ್ತು.”

“ನೀನಂಗಂತಿ ಕೇಳಿದೊರ್ಯಲ್ಲ ನಗ್ತರಲ್ಲ ಯಾಕೆ.”

“ಕ್ಯಟ್ಟ ಮನುಸರಿಗೆ ಕರೋನ ಬಂದ್ರೆ ಜನಗಳು ಕ್ಯಟ್ಟ ಕುಶಿಯಿಂದ ನಗ್ತರೆ ಕಣೊ. ಆದ್ರೆ ಇವತ್ತು ಅವುನಿಗೆ ಬಂದಿದ್ದು ನಾಳೆ ನಮಿಗೂ ಬಂದೇ ಬತ್ತದೆ ಅದ್ಕೆ ಆಡಿಕಬಾರ್ದು.”

“ನಿಜ ಕಂಡ್ಳ ನೀನೇಳಿದ್ದು. ನೋಡು ಮದ್ಲು ಮಂಡೇವುಕೆ ಬತ್ತು. ಆಮ್ಯಾಲೆ ನಾಗಮಂಗಲಕ್ಕೆ ಬತ್ತು. ಈಗ ಬಿಂಡಗನೂಲೆ ಹೆಂಗಸಿಗೆ ಬಂದದೆ. ಅಂಗೆ ಇಲ್ಲಿಗೂ ಬರಬಹುದು” ಎಂದಳು ಜುಮ್ಮಿ.

“ಬಂದೆ ಬತ್ತದೆ ಕಣಕ್ಕ. ಯಾಕೆ ಅಂದ್ರೇ ಬೆಂಗಳೂರಲ್ಲಿದ್ರಲ್ಲ ನಮ್ಮ ಜನ ಅವುರ್ಯಲ್ಲ ಮನೆ ಖಾಲಿ ಮಾಡಿಕಂಡು ಊರು ಕಡಿಕೆ ವಂಟವುರೆ. ಅವುರೇನು ಸುಮ್ಮಸುಮ್ಮನೆ ಬಂದರೇ, ಕರೋನ ಹಿಡಕಂಡೇ ಬತ್ತರೆ.”

“ಅಂಗಾದ್ರೆ ಗತಿಯೇನ್ಲ.”

“ಗತಿಯೇನು ಇಲ್ಲ ಕಣಕ್ಕ. ನಿನ್ನ ವಲ್ದತ್ರ ಒಂದು ಗುಡ್ಳಾಯ್ಕಂಡಿರು.”

“ಆಗ ಪ್ಳೇಗು ಕಾಲರ ಬಂದಾಗ ಅಂಗೇ ಮಾಡಿದ್ರಂತೆ.”

“ಈಗ್ಲು ಅಂಗೆ ಮಾಡನ ತಗೊ.”

“ಊರು ಬುಟ್ಟು ಹ್ವರಗೋಗಿ ಗುಡ್ಳಾಯ್ಕಂಡ್ರೆ ಪ್ಲೇಗು ಬತ್ತಿರಲಿಲ್ಲ. ಕರೋನ ಅಂಗಲ್ಲ ಯಾರಿಂದ ಬತ್ತದೆ ಅಂತ ಹೇಳಕ್ಕಾಗದಿಲ್ಲ” ಎಂದ ವಾಟಿಸ್ಸೆ.

“ಪಾಪ ಕೃಷ್ಣೇಗೌಡನಿಗೆ ಬಂದಿರದು ಅಂಗೆ ಅಲವೆ. ಯಾರಿಂದ ಬತ್ತು ಅಂತ್ಲೆ ಗೊತ್ತಿಲ್ಲ” ಎಂದ ಉಗ್ರಿ.

“ಥೇಟ್ ಡಿ.ಕೆ.ಶಿವಕುಮಾರನಂಗವುನೆ ಕಣೊ ಅವುನು. ನೋಡಿದ್ರೆ ಅವಳಿಜವಳಿ ಅನ್ನಬೇಕು.”

“ಅಂತೂ ಡಿ.ಕೆ.ಶಿವಕುಮಾರ್ ಕಡಿಗೂ ಅಧ್ಯಕ್ಷಾದ ಬುಡತ್ತಗೆ.”

“ಅವುನು ವಳ್ಯೊನೇನ್ಲ” ಎಂದಳು.

“ವಳ್ಳೆಯವನು ಅಂದ್ರೆ ಯಾವ ತರನಕ್ಕ. ನಿನ್ನ ಗಂಡನಂಗಿರಬೇಕೊ, ನನ್ನಂಗಿರಬೇಕೊ ಇಲ್ಲ ಈ ಉಗ್ರಿ ತರ ಇರಬೇಕೊ ಯಾವ ತರ ಅಂತ ಹೇಳು.”

“ಬಡವುರಾಧಾರಿನೆ ಅಂತ ಕೇಳಿದೆ ಕಂಡ್ಳ.”

“ಬಡವುರಾಧಾರಿ ಅನ್ನದ್ರಲ್ಲಿ ಯರಡು ಮಾತಿಲ್ಲ ಕಣಕ್ಕ. ದಿವ್ಸ ಮನೆ ಹತ್ರಕ್ಕೆ ನೂರಾರು ಜನ ಬತ್ತರೆ. ಯಾಕೆ ಅಂದ್ರೆ ಯಾರೊ ನಿನ್ನಂಥವುಳಿಗೆ ಹೆರಿಗೆಯಾಗಬೇಕಿರುತ್ತೆ ದುಡ್ಡಿರದಿಲ್ಲ ಡಿ.ಕೆ.ಶಿ ಹುಡಿಕ್ಕಂಡು ಬತ್ತಳೆ.”

“ನನ್ನಂಥೊಳು ಅಂತ ಯಾಕಂತಿಲ ಮುಂಡೆ ಮಗನೆ.”

“ಪರೆಗ್‍ಜಾಂಪಲ್ಲು ಕಣಕ್ಕ ಸಿಟ್ಟಾಗಬ್ಯಾಡ. ಇನ್ನ ಯಂತ್ಯಂಥ ಜನ ಬತ್ತರೆ ಗೊತ್ತ. ಕ್ಯಾನ್ಸರ್ ಆದೊರು, ಆರಟಾಪರೇಶನ್ ಜನ, ತಿಥಿ ಮಾಡೋರು, ನಾಮಕರಣ ಮಾಡೋರು, ತಿರುಪ್ತಿಗೋಗರು, ಅಯ್ಯಪ್ಪ ಸ್ವಾಮಿ ಹುಡಿಕ್ಕಂಡೋಗವು ಹಿಂಗೆ ಈ ಸಮಾಜದ ಸಕಲಿಸ್ಟು ರೋಗನು ಡಿ.ಕೆ.ಶಿ ಮನೆತಕ್ಕೆ ಬತ್ತದೆ.”

“ಅವಿರುಗ್ಯಲ್ಲ ದುಡ್ಡು ಕೊಟ್ಟನೆ.”

“ಯಾರ್ನು ಬರಿಕೈಲಿ ಕಳಸದಿಲ್ಲ ಕಣಕ್ಕ. ನಾನೇ ನಿಂತುಗಂಡು ನೋಡಿದಂಗೆ ಲಕ್ಷಾಂತೃಪಾಯಿ ದಾನ ಮಾಡ್ತನೆ.”

“ಬೇಕಾದಷ್ಟು ಸಂಪಾದ್ನೆ ಮಾಡ್ಯವುನೆ ಕೊಡ್ತನೆ.”

“ಮಿಸ್ಟರ್ ಉಗ್ರಿ, ಸಂಪಾದ್ನೆ ಮಾಡಿದೊರ್ಯಲ್ಲ ದಾನ ಮಾಡಿದ್ರೆ ನಮ್ಮಂಥೊರು ಹಿಂಗಿರತಿರಲಿಲ್ಲ ಕಣೊ. ಡಿ.ಕೆ.ಶಿಗಿಂತ ಅವುನ ತಮ್ಮನಂತೂ ದಾನಸೂರ ಕರ್ಣ ಕಣೊ.”

“ಕರ್ಣ ಏನು ದುಡದಿದ್ನೆ ದುರ್ಯೋಧನ ಮಾಡಿ ಮಡಗಿದ್ದ ಅವುನು ಕೊಟ್ಟ ಅಂಗೆ ಇವುನುವೆ.”

“ನೋಡೊ ಉಗ್ರಿ, ಸಣ್ಣಮಾತ ಯಲ್ಲಾರು ವಿಷಯದಲ್ಲೂ ಮಾತಾಡಕ್ಕೆ ಬರದಿಲ್ಲ. ಈ ಡಿ.ಕೆ. ಬ್ರದರ್ಸೆ ಡಿಪರೆಂಟು ಕಣೊ, ಏನಪ್ಪ ಅಂದ್ರೆ ಇವುರು ಆಸ್ತಿ ಮಾಡಿಕಂಡು ಪವರಿಗೆ ಬತ್ತಾ ಅವುರೆ, ಆದ್ರಿಂದ ಆಸ್ತಿ ಮಾಡೊ ಅಗತ್ಯ ಇಲ್ಲ. ಅದೇ ಎಡೂರಪ್ಪ ಮುಖ್ಯಮಂತ್ರಿಯಾದೇಟಿಗೆ ಬರೀ ಆಸ್ತಿ ಮಾಡದ್ನೆ ಆಡಳತ ಅನ್ನಕಂಡಿದ್ದ. ಡಿ.ಕೆ.ಶಿ ಆಸ್ತಿ ಅದರಿಂದ್ಲೆ ತೊಂದ್ರೆ ಅನುಭವಿಸಿದೋನು. ನಮ್ಮ ಜನಾಂಗದಲ್ಲಿ ಕುಮಾರಣ್ಣನಿಗಿಂತ ವಳ್ಳೆ ಪರಸನ್ನು.”

“ಅದ್ಯಂಗೇಳತಿಯೋ.”

“ಯಂಗೇ ಅಂದ್ರೆ ಡಿ.ಕೆ.ಶಿ ಕಾಂಗ್ರೆಸ್ಸಿಂದ ಬಂದವುನು. ಅವುನು ಕಾಂಗ್ರೆಸ್ಸಿಗ. ಆ ಪಾರ್ಟಿ ಸಿದ್ಧಾಂತ ಮಾತಾಡ್ತನೆ. ಅದೇ ಕುಮಾರಣ್ಣ ಯಾವ ಪಾರ್ಟಿ ಅಂತ್ಲೂ ಹೇಳಕ್ಕ ಬರದಿಲ್ಲ. ಒಟ್ಟಿನಲ್ಲಿ ನಂಬಿಕೆಗೆ ಯೋಗ್ಯನಲ್ಲ ಅಂತ ಅವನಿಂದ ದೂರ ಹೋದೊರು ಹೇಳ್ತ ಅವುರೆ. ಆದ್ರೆ ಡಿ.ಕೆ.ಶಿ ಅಂಗಲ್ಲ ಏನಪ್ಪ ಅಂದ್ರೆ ಒಂದಿಷ್ಟು ರೌಡಿ ಇಮೇಜದೆ.”

“ಸದ್ದಿಕೆ ಅದುಬೇಕು ಕಣೊ. ಈ ಬಿಜೆಪಿಗಳ ಹೆದರಸಬೇಕಾದ್ರೆ ರೌಡಿ ಗಂಟ್ಳೇಬೇಕು ಅದ್ಕೆ ಹೆದರದವುರು.”

“ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು.”

“ಅವುನ್ನೊಂದು ಸತಿ ತೋರುಸ್ಲ.”

“ಹೋಗನಿರಕ್ಕ ಮನೆತಕ್ಕೆ ಹೋಗನ. ಯಸ್ಸೆಂ ಕೃಷ್ಣನ ಕಡಿಯೋರು ಅಂದ್ರೆ ಊಟ ಮಾಡ್ಸಿ ಕಳುಸ್ತನೆ.”

“ !?

  • ಬಿ.ಚಂದ್ರೇಗೌಡ

ಇದನ್ನು ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...