Homeಅಂಕಣಗಳುಥೂತ್ತೇರಿ | ಯಾಹೂಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು - ಚಂದ್ರೇಗೌಡರ ಕಟ್ಟೆಪುರಾಣ

ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಇದು ಗಾಳಿ ಬೀಸುವ ಕಾಲ, ಬರ್ರೊ ಎಂದು ಬೀಸುವ ಗಾಳಿಯೂ ಕರೋನ ಸೋಂಕನ್ನು ಹೊತ್ತು ತರುತ್ತದೆಂದು ವಾಟಿಸ್ಸೆ ಹೇಳಿದಾಗಿನಿಂದ, ಹೆದರಿದ ಜುಮ್ಮಿ ಮನೆ ಬುಟ್ಟು ಈಚೆ ಬಂದಿರಲಿಲ್ಲ. ಆಗ ಆಗಮಿಸಿದ ಉಗ್ರಿ.

“ಸುಮಲತನಿಗೂ ಕರೋನ ಬಂದದಂತೆ ಕಣೆ” ಎಂದ.

“ಅಯ್ಯೊ ಶಿವನೇ ಅವುಳಿಗ್ಯಾಕೆ ಬತ್ತೂ.”

“ಪಾಪ ಅವಳು ಮನೆವಳಗಿಲ್ದೆಲೆ ಜನಗಳ ಜ್ವತೆ ಮಾತಾಡ್ಯವುಳೆ ಅದ್ಕೆ ಬಂದದೆ.”

“ನೀನು ಎಲ್ಲಿಂದ ಬಂದ್ಲ.”

“ಮನಿಂದ ಬಂದೆ.”

“ಅಂಗಾದ್ರೆ ವಳಿಕೆ ಬಾ, ಎಲ್ಲೆಲ್ಲೊ ನಾಯಿ ತಿರುಗಿದಂಗೆ ತಿರುಗಿದ್ರೆ ಇಲ್ಯಲ್ಲ ಬರದು ಬ್ಯಾಡ.”

“ಆ ಮಾತ ವಾಟಿಸ್ಸೆಗೇಳು.”

“ಯಾವ ಮಾತನಪ್ಪ” ಎನ್ನುತ್ತ ವಾಟಿಸ್ಸೆ ಬಂದ.

“ಇನ್ನ ಮುಂದೆ ಜುಮ್ಮಿ ಮನಿಗೆ ಬರಬೇಕಾದ್ರೆ, ನಿನ್ನ ಮನಿಂದ ಇಲ್ಲಿಗೆ ನೇರವಾಗಿ ಬರಬೇಕಂತೆ. ಅಲ್ಲಿ ಇಲ್ಲಿ ತಿರುಗಿದೊರಿಗೆ ನೊ ಎಂಟ್ರಿ.”

“ಲೇ ಉಗ್ರಿ, ನಾವು ಎಲ್ಯಾರ ತಿರುಗ್ಲಿ. ಆದ್ರೆ ಪೇಸ್‍ನ ಬಟ್ಟೆ ಮಕಾಡದಿಂದ ಕವರ್ ಮಾಡಿರಬೇಕು. ಯಾರತ್ರ ಮಾತಾಡಿದ್ರು ಟೆನ್ ಆರ್ ಪೈ ಪಿಟ್ ದೂರ ಮೆಂಟೇನ್ ಮಾಡಬೇಕು. ಕೈ ಕುಲುಕಬಾರ್ದು. ಎಷ್ಟೇ ಆತ್ಮೀಯರಾದ್ರು ತಬ್ಬಿಕಬಾರ್ದು, ನಿಸರ್ಗನೇ ತಂದಿರೊ ಅಸ್ಪೃಶ್ಯತೆನ ಚಾಚೂ ತಪ್ಪದೆ ಫಾಲೋ ಮಾಡಿದ್ರೆ ಎಲ್ಯಾರ ತಿರುಗಬಹುದು” ಎಂದ ವಾಟಿಸ್ಸೆ.

“ನಿನ್ನಂಗೆ ಮಾತಾಡಿ ಕೃಷ್ಣೇಗೌಡರ ಕತೆ ಏನಾಗ್ಯದೆ ಗೊತ್ತೆ.”

“ಏನಾಗ್ಯದೊ ವಾಟ್ಯಾಪನ್.”

“ವಸ ಇನ್ನೋವಾ ತಗಂಡಿದ್ನಲ್ಲಾ. ಅದ ಯಲ್ಲಾರಿಗೂ ತೋರಿಸಿಗಂಡು ಮಾತಾಡಿಸಿಗಂಡು ತಿರುಗುತಿದ್ದ. ಮನ್ನೆ ದಿನ ಮಂಡ್ಯಾಕ್ಕೂ ಹೋಗಿ ಬಂದನಂತೆ. ಅಷ್ಟೆ. ಅವುನ ಸಮೇತ ಮನಿ ಮಕ್ಕಳಿಗ್ಯಲ್ಲ ಕರೊನ ಹಟಗಾಯಿಸಿಕೊಂಡದೆ.”

“ಛೇ ಪಾಪ ಅಂಗಾಗಬಾರದಿತ್ತು.”

“ನೀನಂಗಂತಿ ಕೇಳಿದೊರ್ಯಲ್ಲ ನಗ್ತರಲ್ಲ ಯಾಕೆ.”

“ಕ್ಯಟ್ಟ ಮನುಸರಿಗೆ ಕರೋನ ಬಂದ್ರೆ ಜನಗಳು ಕ್ಯಟ್ಟ ಕುಶಿಯಿಂದ ನಗ್ತರೆ ಕಣೊ. ಆದ್ರೆ ಇವತ್ತು ಅವುನಿಗೆ ಬಂದಿದ್ದು ನಾಳೆ ನಮಿಗೂ ಬಂದೇ ಬತ್ತದೆ ಅದ್ಕೆ ಆಡಿಕಬಾರ್ದು.”

“ನಿಜ ಕಂಡ್ಳ ನೀನೇಳಿದ್ದು. ನೋಡು ಮದ್ಲು ಮಂಡೇವುಕೆ ಬತ್ತು. ಆಮ್ಯಾಲೆ ನಾಗಮಂಗಲಕ್ಕೆ ಬತ್ತು. ಈಗ ಬಿಂಡಗನೂಲೆ ಹೆಂಗಸಿಗೆ ಬಂದದೆ. ಅಂಗೆ ಇಲ್ಲಿಗೂ ಬರಬಹುದು” ಎಂದಳು ಜುಮ್ಮಿ.

“ಬಂದೆ ಬತ್ತದೆ ಕಣಕ್ಕ. ಯಾಕೆ ಅಂದ್ರೇ ಬೆಂಗಳೂರಲ್ಲಿದ್ರಲ್ಲ ನಮ್ಮ ಜನ ಅವುರ್ಯಲ್ಲ ಮನೆ ಖಾಲಿ ಮಾಡಿಕಂಡು ಊರು ಕಡಿಕೆ ವಂಟವುರೆ. ಅವುರೇನು ಸುಮ್ಮಸುಮ್ಮನೆ ಬಂದರೇ, ಕರೋನ ಹಿಡಕಂಡೇ ಬತ್ತರೆ.”

“ಅಂಗಾದ್ರೆ ಗತಿಯೇನ್ಲ.”

“ಗತಿಯೇನು ಇಲ್ಲ ಕಣಕ್ಕ. ನಿನ್ನ ವಲ್ದತ್ರ ಒಂದು ಗುಡ್ಳಾಯ್ಕಂಡಿರು.”

“ಆಗ ಪ್ಳೇಗು ಕಾಲರ ಬಂದಾಗ ಅಂಗೇ ಮಾಡಿದ್ರಂತೆ.”

“ಈಗ್ಲು ಅಂಗೆ ಮಾಡನ ತಗೊ.”

“ಊರು ಬುಟ್ಟು ಹ್ವರಗೋಗಿ ಗುಡ್ಳಾಯ್ಕಂಡ್ರೆ ಪ್ಲೇಗು ಬತ್ತಿರಲಿಲ್ಲ. ಕರೋನ ಅಂಗಲ್ಲ ಯಾರಿಂದ ಬತ್ತದೆ ಅಂತ ಹೇಳಕ್ಕಾಗದಿಲ್ಲ” ಎಂದ ವಾಟಿಸ್ಸೆ.

“ಪಾಪ ಕೃಷ್ಣೇಗೌಡನಿಗೆ ಬಂದಿರದು ಅಂಗೆ ಅಲವೆ. ಯಾರಿಂದ ಬತ್ತು ಅಂತ್ಲೆ ಗೊತ್ತಿಲ್ಲ” ಎಂದ ಉಗ್ರಿ.

“ಥೇಟ್ ಡಿ.ಕೆ.ಶಿವಕುಮಾರನಂಗವುನೆ ಕಣೊ ಅವುನು. ನೋಡಿದ್ರೆ ಅವಳಿಜವಳಿ ಅನ್ನಬೇಕು.”

“ಅಂತೂ ಡಿ.ಕೆ.ಶಿವಕುಮಾರ್ ಕಡಿಗೂ ಅಧ್ಯಕ್ಷಾದ ಬುಡತ್ತಗೆ.”

“ಅವುನು ವಳ್ಯೊನೇನ್ಲ” ಎಂದಳು.

“ವಳ್ಳೆಯವನು ಅಂದ್ರೆ ಯಾವ ತರನಕ್ಕ. ನಿನ್ನ ಗಂಡನಂಗಿರಬೇಕೊ, ನನ್ನಂಗಿರಬೇಕೊ ಇಲ್ಲ ಈ ಉಗ್ರಿ ತರ ಇರಬೇಕೊ ಯಾವ ತರ ಅಂತ ಹೇಳು.”

“ಬಡವುರಾಧಾರಿನೆ ಅಂತ ಕೇಳಿದೆ ಕಂಡ್ಳ.”

“ಬಡವುರಾಧಾರಿ ಅನ್ನದ್ರಲ್ಲಿ ಯರಡು ಮಾತಿಲ್ಲ ಕಣಕ್ಕ. ದಿವ್ಸ ಮನೆ ಹತ್ರಕ್ಕೆ ನೂರಾರು ಜನ ಬತ್ತರೆ. ಯಾಕೆ ಅಂದ್ರೆ ಯಾರೊ ನಿನ್ನಂಥವುಳಿಗೆ ಹೆರಿಗೆಯಾಗಬೇಕಿರುತ್ತೆ ದುಡ್ಡಿರದಿಲ್ಲ ಡಿ.ಕೆ.ಶಿ ಹುಡಿಕ್ಕಂಡು ಬತ್ತಳೆ.”

“ನನ್ನಂಥೊಳು ಅಂತ ಯಾಕಂತಿಲ ಮುಂಡೆ ಮಗನೆ.”

“ಪರೆಗ್‍ಜಾಂಪಲ್ಲು ಕಣಕ್ಕ ಸಿಟ್ಟಾಗಬ್ಯಾಡ. ಇನ್ನ ಯಂತ್ಯಂಥ ಜನ ಬತ್ತರೆ ಗೊತ್ತ. ಕ್ಯಾನ್ಸರ್ ಆದೊರು, ಆರಟಾಪರೇಶನ್ ಜನ, ತಿಥಿ ಮಾಡೋರು, ನಾಮಕರಣ ಮಾಡೋರು, ತಿರುಪ್ತಿಗೋಗರು, ಅಯ್ಯಪ್ಪ ಸ್ವಾಮಿ ಹುಡಿಕ್ಕಂಡೋಗವು ಹಿಂಗೆ ಈ ಸಮಾಜದ ಸಕಲಿಸ್ಟು ರೋಗನು ಡಿ.ಕೆ.ಶಿ ಮನೆತಕ್ಕೆ ಬತ್ತದೆ.”

“ಅವಿರುಗ್ಯಲ್ಲ ದುಡ್ಡು ಕೊಟ್ಟನೆ.”

“ಯಾರ್ನು ಬರಿಕೈಲಿ ಕಳಸದಿಲ್ಲ ಕಣಕ್ಕ. ನಾನೇ ನಿಂತುಗಂಡು ನೋಡಿದಂಗೆ ಲಕ್ಷಾಂತೃಪಾಯಿ ದಾನ ಮಾಡ್ತನೆ.”

“ಬೇಕಾದಷ್ಟು ಸಂಪಾದ್ನೆ ಮಾಡ್ಯವುನೆ ಕೊಡ್ತನೆ.”

“ಮಿಸ್ಟರ್ ಉಗ್ರಿ, ಸಂಪಾದ್ನೆ ಮಾಡಿದೊರ್ಯಲ್ಲ ದಾನ ಮಾಡಿದ್ರೆ ನಮ್ಮಂಥೊರು ಹಿಂಗಿರತಿರಲಿಲ್ಲ ಕಣೊ. ಡಿ.ಕೆ.ಶಿಗಿಂತ ಅವುನ ತಮ್ಮನಂತೂ ದಾನಸೂರ ಕರ್ಣ ಕಣೊ.”

“ಕರ್ಣ ಏನು ದುಡದಿದ್ನೆ ದುರ್ಯೋಧನ ಮಾಡಿ ಮಡಗಿದ್ದ ಅವುನು ಕೊಟ್ಟ ಅಂಗೆ ಇವುನುವೆ.”

“ನೋಡೊ ಉಗ್ರಿ, ಸಣ್ಣಮಾತ ಯಲ್ಲಾರು ವಿಷಯದಲ್ಲೂ ಮಾತಾಡಕ್ಕೆ ಬರದಿಲ್ಲ. ಈ ಡಿ.ಕೆ. ಬ್ರದರ್ಸೆ ಡಿಪರೆಂಟು ಕಣೊ, ಏನಪ್ಪ ಅಂದ್ರೆ ಇವುರು ಆಸ್ತಿ ಮಾಡಿಕಂಡು ಪವರಿಗೆ ಬತ್ತಾ ಅವುರೆ, ಆದ್ರಿಂದ ಆಸ್ತಿ ಮಾಡೊ ಅಗತ್ಯ ಇಲ್ಲ. ಅದೇ ಎಡೂರಪ್ಪ ಮುಖ್ಯಮಂತ್ರಿಯಾದೇಟಿಗೆ ಬರೀ ಆಸ್ತಿ ಮಾಡದ್ನೆ ಆಡಳತ ಅನ್ನಕಂಡಿದ್ದ. ಡಿ.ಕೆ.ಶಿ ಆಸ್ತಿ ಅದರಿಂದ್ಲೆ ತೊಂದ್ರೆ ಅನುಭವಿಸಿದೋನು. ನಮ್ಮ ಜನಾಂಗದಲ್ಲಿ ಕುಮಾರಣ್ಣನಿಗಿಂತ ವಳ್ಳೆ ಪರಸನ್ನು.”

“ಅದ್ಯಂಗೇಳತಿಯೋ.”

“ಯಂಗೇ ಅಂದ್ರೆ ಡಿ.ಕೆ.ಶಿ ಕಾಂಗ್ರೆಸ್ಸಿಂದ ಬಂದವುನು. ಅವುನು ಕಾಂಗ್ರೆಸ್ಸಿಗ. ಆ ಪಾರ್ಟಿ ಸಿದ್ಧಾಂತ ಮಾತಾಡ್ತನೆ. ಅದೇ ಕುಮಾರಣ್ಣ ಯಾವ ಪಾರ್ಟಿ ಅಂತ್ಲೂ ಹೇಳಕ್ಕ ಬರದಿಲ್ಲ. ಒಟ್ಟಿನಲ್ಲಿ ನಂಬಿಕೆಗೆ ಯೋಗ್ಯನಲ್ಲ ಅಂತ ಅವನಿಂದ ದೂರ ಹೋದೊರು ಹೇಳ್ತ ಅವುರೆ. ಆದ್ರೆ ಡಿ.ಕೆ.ಶಿ ಅಂಗಲ್ಲ ಏನಪ್ಪ ಅಂದ್ರೆ ಒಂದಿಷ್ಟು ರೌಡಿ ಇಮೇಜದೆ.”

“ಸದ್ದಿಕೆ ಅದುಬೇಕು ಕಣೊ. ಈ ಬಿಜೆಪಿಗಳ ಹೆದರಸಬೇಕಾದ್ರೆ ರೌಡಿ ಗಂಟ್ಳೇಬೇಕು ಅದ್ಕೆ ಹೆದರದವುರು.”

“ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು.”

“ಅವುನ್ನೊಂದು ಸತಿ ತೋರುಸ್ಲ.”

“ಹೋಗನಿರಕ್ಕ ಮನೆತಕ್ಕೆ ಹೋಗನ. ಯಸ್ಸೆಂ ಕೃಷ್ಣನ ಕಡಿಯೋರು ಅಂದ್ರೆ ಊಟ ಮಾಡ್ಸಿ ಕಳುಸ್ತನೆ.”

“ !?

  • ಬಿ.ಚಂದ್ರೇಗೌಡ

ಇದನ್ನು ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...