Homeಅಂಕಣಗಳುಥೂತ್ತೇರಿ | ಯಾಹೂಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು - ಚಂದ್ರೇಗೌಡರ ಕಟ್ಟೆಪುರಾಣ

ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಇದು ಗಾಳಿ ಬೀಸುವ ಕಾಲ, ಬರ್ರೊ ಎಂದು ಬೀಸುವ ಗಾಳಿಯೂ ಕರೋನ ಸೋಂಕನ್ನು ಹೊತ್ತು ತರುತ್ತದೆಂದು ವಾಟಿಸ್ಸೆ ಹೇಳಿದಾಗಿನಿಂದ, ಹೆದರಿದ ಜುಮ್ಮಿ ಮನೆ ಬುಟ್ಟು ಈಚೆ ಬಂದಿರಲಿಲ್ಲ. ಆಗ ಆಗಮಿಸಿದ ಉಗ್ರಿ.

“ಸುಮಲತನಿಗೂ ಕರೋನ ಬಂದದಂತೆ ಕಣೆ” ಎಂದ.

“ಅಯ್ಯೊ ಶಿವನೇ ಅವುಳಿಗ್ಯಾಕೆ ಬತ್ತೂ.”

“ಪಾಪ ಅವಳು ಮನೆವಳಗಿಲ್ದೆಲೆ ಜನಗಳ ಜ್ವತೆ ಮಾತಾಡ್ಯವುಳೆ ಅದ್ಕೆ ಬಂದದೆ.”

“ನೀನು ಎಲ್ಲಿಂದ ಬಂದ್ಲ.”

“ಮನಿಂದ ಬಂದೆ.”

“ಅಂಗಾದ್ರೆ ವಳಿಕೆ ಬಾ, ಎಲ್ಲೆಲ್ಲೊ ನಾಯಿ ತಿರುಗಿದಂಗೆ ತಿರುಗಿದ್ರೆ ಇಲ್ಯಲ್ಲ ಬರದು ಬ್ಯಾಡ.”

“ಆ ಮಾತ ವಾಟಿಸ್ಸೆಗೇಳು.”

“ಯಾವ ಮಾತನಪ್ಪ” ಎನ್ನುತ್ತ ವಾಟಿಸ್ಸೆ ಬಂದ.

“ಇನ್ನ ಮುಂದೆ ಜುಮ್ಮಿ ಮನಿಗೆ ಬರಬೇಕಾದ್ರೆ, ನಿನ್ನ ಮನಿಂದ ಇಲ್ಲಿಗೆ ನೇರವಾಗಿ ಬರಬೇಕಂತೆ. ಅಲ್ಲಿ ಇಲ್ಲಿ ತಿರುಗಿದೊರಿಗೆ ನೊ ಎಂಟ್ರಿ.”

“ಲೇ ಉಗ್ರಿ, ನಾವು ಎಲ್ಯಾರ ತಿರುಗ್ಲಿ. ಆದ್ರೆ ಪೇಸ್‍ನ ಬಟ್ಟೆ ಮಕಾಡದಿಂದ ಕವರ್ ಮಾಡಿರಬೇಕು. ಯಾರತ್ರ ಮಾತಾಡಿದ್ರು ಟೆನ್ ಆರ್ ಪೈ ಪಿಟ್ ದೂರ ಮೆಂಟೇನ್ ಮಾಡಬೇಕು. ಕೈ ಕುಲುಕಬಾರ್ದು. ಎಷ್ಟೇ ಆತ್ಮೀಯರಾದ್ರು ತಬ್ಬಿಕಬಾರ್ದು, ನಿಸರ್ಗನೇ ತಂದಿರೊ ಅಸ್ಪೃಶ್ಯತೆನ ಚಾಚೂ ತಪ್ಪದೆ ಫಾಲೋ ಮಾಡಿದ್ರೆ ಎಲ್ಯಾರ ತಿರುಗಬಹುದು” ಎಂದ ವಾಟಿಸ್ಸೆ.

“ನಿನ್ನಂಗೆ ಮಾತಾಡಿ ಕೃಷ್ಣೇಗೌಡರ ಕತೆ ಏನಾಗ್ಯದೆ ಗೊತ್ತೆ.”

“ಏನಾಗ್ಯದೊ ವಾಟ್ಯಾಪನ್.”

“ವಸ ಇನ್ನೋವಾ ತಗಂಡಿದ್ನಲ್ಲಾ. ಅದ ಯಲ್ಲಾರಿಗೂ ತೋರಿಸಿಗಂಡು ಮಾತಾಡಿಸಿಗಂಡು ತಿರುಗುತಿದ್ದ. ಮನ್ನೆ ದಿನ ಮಂಡ್ಯಾಕ್ಕೂ ಹೋಗಿ ಬಂದನಂತೆ. ಅಷ್ಟೆ. ಅವುನ ಸಮೇತ ಮನಿ ಮಕ್ಕಳಿಗ್ಯಲ್ಲ ಕರೊನ ಹಟಗಾಯಿಸಿಕೊಂಡದೆ.”

“ಛೇ ಪಾಪ ಅಂಗಾಗಬಾರದಿತ್ತು.”

“ನೀನಂಗಂತಿ ಕೇಳಿದೊರ್ಯಲ್ಲ ನಗ್ತರಲ್ಲ ಯಾಕೆ.”

“ಕ್ಯಟ್ಟ ಮನುಸರಿಗೆ ಕರೋನ ಬಂದ್ರೆ ಜನಗಳು ಕ್ಯಟ್ಟ ಕುಶಿಯಿಂದ ನಗ್ತರೆ ಕಣೊ. ಆದ್ರೆ ಇವತ್ತು ಅವುನಿಗೆ ಬಂದಿದ್ದು ನಾಳೆ ನಮಿಗೂ ಬಂದೇ ಬತ್ತದೆ ಅದ್ಕೆ ಆಡಿಕಬಾರ್ದು.”

“ನಿಜ ಕಂಡ್ಳ ನೀನೇಳಿದ್ದು. ನೋಡು ಮದ್ಲು ಮಂಡೇವುಕೆ ಬತ್ತು. ಆಮ್ಯಾಲೆ ನಾಗಮಂಗಲಕ್ಕೆ ಬತ್ತು. ಈಗ ಬಿಂಡಗನೂಲೆ ಹೆಂಗಸಿಗೆ ಬಂದದೆ. ಅಂಗೆ ಇಲ್ಲಿಗೂ ಬರಬಹುದು” ಎಂದಳು ಜುಮ್ಮಿ.

“ಬಂದೆ ಬತ್ತದೆ ಕಣಕ್ಕ. ಯಾಕೆ ಅಂದ್ರೇ ಬೆಂಗಳೂರಲ್ಲಿದ್ರಲ್ಲ ನಮ್ಮ ಜನ ಅವುರ್ಯಲ್ಲ ಮನೆ ಖಾಲಿ ಮಾಡಿಕಂಡು ಊರು ಕಡಿಕೆ ವಂಟವುರೆ. ಅವುರೇನು ಸುಮ್ಮಸುಮ್ಮನೆ ಬಂದರೇ, ಕರೋನ ಹಿಡಕಂಡೇ ಬತ್ತರೆ.”

“ಅಂಗಾದ್ರೆ ಗತಿಯೇನ್ಲ.”

“ಗತಿಯೇನು ಇಲ್ಲ ಕಣಕ್ಕ. ನಿನ್ನ ವಲ್ದತ್ರ ಒಂದು ಗುಡ್ಳಾಯ್ಕಂಡಿರು.”

“ಆಗ ಪ್ಳೇಗು ಕಾಲರ ಬಂದಾಗ ಅಂಗೇ ಮಾಡಿದ್ರಂತೆ.”

“ಈಗ್ಲು ಅಂಗೆ ಮಾಡನ ತಗೊ.”

“ಊರು ಬುಟ್ಟು ಹ್ವರಗೋಗಿ ಗುಡ್ಳಾಯ್ಕಂಡ್ರೆ ಪ್ಲೇಗು ಬತ್ತಿರಲಿಲ್ಲ. ಕರೋನ ಅಂಗಲ್ಲ ಯಾರಿಂದ ಬತ್ತದೆ ಅಂತ ಹೇಳಕ್ಕಾಗದಿಲ್ಲ” ಎಂದ ವಾಟಿಸ್ಸೆ.

“ಪಾಪ ಕೃಷ್ಣೇಗೌಡನಿಗೆ ಬಂದಿರದು ಅಂಗೆ ಅಲವೆ. ಯಾರಿಂದ ಬತ್ತು ಅಂತ್ಲೆ ಗೊತ್ತಿಲ್ಲ” ಎಂದ ಉಗ್ರಿ.

“ಥೇಟ್ ಡಿ.ಕೆ.ಶಿವಕುಮಾರನಂಗವುನೆ ಕಣೊ ಅವುನು. ನೋಡಿದ್ರೆ ಅವಳಿಜವಳಿ ಅನ್ನಬೇಕು.”

“ಅಂತೂ ಡಿ.ಕೆ.ಶಿವಕುಮಾರ್ ಕಡಿಗೂ ಅಧ್ಯಕ್ಷಾದ ಬುಡತ್ತಗೆ.”

“ಅವುನು ವಳ್ಯೊನೇನ್ಲ” ಎಂದಳು.

“ವಳ್ಳೆಯವನು ಅಂದ್ರೆ ಯಾವ ತರನಕ್ಕ. ನಿನ್ನ ಗಂಡನಂಗಿರಬೇಕೊ, ನನ್ನಂಗಿರಬೇಕೊ ಇಲ್ಲ ಈ ಉಗ್ರಿ ತರ ಇರಬೇಕೊ ಯಾವ ತರ ಅಂತ ಹೇಳು.”

“ಬಡವುರಾಧಾರಿನೆ ಅಂತ ಕೇಳಿದೆ ಕಂಡ್ಳ.”

“ಬಡವುರಾಧಾರಿ ಅನ್ನದ್ರಲ್ಲಿ ಯರಡು ಮಾತಿಲ್ಲ ಕಣಕ್ಕ. ದಿವ್ಸ ಮನೆ ಹತ್ರಕ್ಕೆ ನೂರಾರು ಜನ ಬತ್ತರೆ. ಯಾಕೆ ಅಂದ್ರೆ ಯಾರೊ ನಿನ್ನಂಥವುಳಿಗೆ ಹೆರಿಗೆಯಾಗಬೇಕಿರುತ್ತೆ ದುಡ್ಡಿರದಿಲ್ಲ ಡಿ.ಕೆ.ಶಿ ಹುಡಿಕ್ಕಂಡು ಬತ್ತಳೆ.”

“ನನ್ನಂಥೊಳು ಅಂತ ಯಾಕಂತಿಲ ಮುಂಡೆ ಮಗನೆ.”

“ಪರೆಗ್‍ಜಾಂಪಲ್ಲು ಕಣಕ್ಕ ಸಿಟ್ಟಾಗಬ್ಯಾಡ. ಇನ್ನ ಯಂತ್ಯಂಥ ಜನ ಬತ್ತರೆ ಗೊತ್ತ. ಕ್ಯಾನ್ಸರ್ ಆದೊರು, ಆರಟಾಪರೇಶನ್ ಜನ, ತಿಥಿ ಮಾಡೋರು, ನಾಮಕರಣ ಮಾಡೋರು, ತಿರುಪ್ತಿಗೋಗರು, ಅಯ್ಯಪ್ಪ ಸ್ವಾಮಿ ಹುಡಿಕ್ಕಂಡೋಗವು ಹಿಂಗೆ ಈ ಸಮಾಜದ ಸಕಲಿಸ್ಟು ರೋಗನು ಡಿ.ಕೆ.ಶಿ ಮನೆತಕ್ಕೆ ಬತ್ತದೆ.”

“ಅವಿರುಗ್ಯಲ್ಲ ದುಡ್ಡು ಕೊಟ್ಟನೆ.”

“ಯಾರ್ನು ಬರಿಕೈಲಿ ಕಳಸದಿಲ್ಲ ಕಣಕ್ಕ. ನಾನೇ ನಿಂತುಗಂಡು ನೋಡಿದಂಗೆ ಲಕ್ಷಾಂತೃಪಾಯಿ ದಾನ ಮಾಡ್ತನೆ.”

“ಬೇಕಾದಷ್ಟು ಸಂಪಾದ್ನೆ ಮಾಡ್ಯವುನೆ ಕೊಡ್ತನೆ.”

“ಮಿಸ್ಟರ್ ಉಗ್ರಿ, ಸಂಪಾದ್ನೆ ಮಾಡಿದೊರ್ಯಲ್ಲ ದಾನ ಮಾಡಿದ್ರೆ ನಮ್ಮಂಥೊರು ಹಿಂಗಿರತಿರಲಿಲ್ಲ ಕಣೊ. ಡಿ.ಕೆ.ಶಿಗಿಂತ ಅವುನ ತಮ್ಮನಂತೂ ದಾನಸೂರ ಕರ್ಣ ಕಣೊ.”

“ಕರ್ಣ ಏನು ದುಡದಿದ್ನೆ ದುರ್ಯೋಧನ ಮಾಡಿ ಮಡಗಿದ್ದ ಅವುನು ಕೊಟ್ಟ ಅಂಗೆ ಇವುನುವೆ.”

“ನೋಡೊ ಉಗ್ರಿ, ಸಣ್ಣಮಾತ ಯಲ್ಲಾರು ವಿಷಯದಲ್ಲೂ ಮಾತಾಡಕ್ಕೆ ಬರದಿಲ್ಲ. ಈ ಡಿ.ಕೆ. ಬ್ರದರ್ಸೆ ಡಿಪರೆಂಟು ಕಣೊ, ಏನಪ್ಪ ಅಂದ್ರೆ ಇವುರು ಆಸ್ತಿ ಮಾಡಿಕಂಡು ಪವರಿಗೆ ಬತ್ತಾ ಅವುರೆ, ಆದ್ರಿಂದ ಆಸ್ತಿ ಮಾಡೊ ಅಗತ್ಯ ಇಲ್ಲ. ಅದೇ ಎಡೂರಪ್ಪ ಮುಖ್ಯಮಂತ್ರಿಯಾದೇಟಿಗೆ ಬರೀ ಆಸ್ತಿ ಮಾಡದ್ನೆ ಆಡಳತ ಅನ್ನಕಂಡಿದ್ದ. ಡಿ.ಕೆ.ಶಿ ಆಸ್ತಿ ಅದರಿಂದ್ಲೆ ತೊಂದ್ರೆ ಅನುಭವಿಸಿದೋನು. ನಮ್ಮ ಜನಾಂಗದಲ್ಲಿ ಕುಮಾರಣ್ಣನಿಗಿಂತ ವಳ್ಳೆ ಪರಸನ್ನು.”

“ಅದ್ಯಂಗೇಳತಿಯೋ.”

“ಯಂಗೇ ಅಂದ್ರೆ ಡಿ.ಕೆ.ಶಿ ಕಾಂಗ್ರೆಸ್ಸಿಂದ ಬಂದವುನು. ಅವುನು ಕಾಂಗ್ರೆಸ್ಸಿಗ. ಆ ಪಾರ್ಟಿ ಸಿದ್ಧಾಂತ ಮಾತಾಡ್ತನೆ. ಅದೇ ಕುಮಾರಣ್ಣ ಯಾವ ಪಾರ್ಟಿ ಅಂತ್ಲೂ ಹೇಳಕ್ಕ ಬರದಿಲ್ಲ. ಒಟ್ಟಿನಲ್ಲಿ ನಂಬಿಕೆಗೆ ಯೋಗ್ಯನಲ್ಲ ಅಂತ ಅವನಿಂದ ದೂರ ಹೋದೊರು ಹೇಳ್ತ ಅವುರೆ. ಆದ್ರೆ ಡಿ.ಕೆ.ಶಿ ಅಂಗಲ್ಲ ಏನಪ್ಪ ಅಂದ್ರೆ ಒಂದಿಷ್ಟು ರೌಡಿ ಇಮೇಜದೆ.”

“ಸದ್ದಿಕೆ ಅದುಬೇಕು ಕಣೊ. ಈ ಬಿಜೆಪಿಗಳ ಹೆದರಸಬೇಕಾದ್ರೆ ರೌಡಿ ಗಂಟ್ಳೇಬೇಕು ಅದ್ಕೆ ಹೆದರದವುರು.”

“ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು.”

“ಅವುನ್ನೊಂದು ಸತಿ ತೋರುಸ್ಲ.”

“ಹೋಗನಿರಕ್ಕ ಮನೆತಕ್ಕೆ ಹೋಗನ. ಯಸ್ಸೆಂ ಕೃಷ್ಣನ ಕಡಿಯೋರು ಅಂದ್ರೆ ಊಟ ಮಾಡ್ಸಿ ಕಳುಸ್ತನೆ.”

“ !?

  • ಬಿ.ಚಂದ್ರೇಗೌಡ

ಇದನ್ನು ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...