Homeಅಂಕಣಗಳುಥೂತ್ತೇರಿ | ಯಾಹೂಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು - ಚಂದ್ರೇಗೌಡರ ಕಟ್ಟೆಪುರಾಣ

ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಇದು ಗಾಳಿ ಬೀಸುವ ಕಾಲ, ಬರ್ರೊ ಎಂದು ಬೀಸುವ ಗಾಳಿಯೂ ಕರೋನ ಸೋಂಕನ್ನು ಹೊತ್ತು ತರುತ್ತದೆಂದು ವಾಟಿಸ್ಸೆ ಹೇಳಿದಾಗಿನಿಂದ, ಹೆದರಿದ ಜುಮ್ಮಿ ಮನೆ ಬುಟ್ಟು ಈಚೆ ಬಂದಿರಲಿಲ್ಲ. ಆಗ ಆಗಮಿಸಿದ ಉಗ್ರಿ.

“ಸುಮಲತನಿಗೂ ಕರೋನ ಬಂದದಂತೆ ಕಣೆ” ಎಂದ.

“ಅಯ್ಯೊ ಶಿವನೇ ಅವುಳಿಗ್ಯಾಕೆ ಬತ್ತೂ.”

“ಪಾಪ ಅವಳು ಮನೆವಳಗಿಲ್ದೆಲೆ ಜನಗಳ ಜ್ವತೆ ಮಾತಾಡ್ಯವುಳೆ ಅದ್ಕೆ ಬಂದದೆ.”

“ನೀನು ಎಲ್ಲಿಂದ ಬಂದ್ಲ.”

“ಮನಿಂದ ಬಂದೆ.”

“ಅಂಗಾದ್ರೆ ವಳಿಕೆ ಬಾ, ಎಲ್ಲೆಲ್ಲೊ ನಾಯಿ ತಿರುಗಿದಂಗೆ ತಿರುಗಿದ್ರೆ ಇಲ್ಯಲ್ಲ ಬರದು ಬ್ಯಾಡ.”

“ಆ ಮಾತ ವಾಟಿಸ್ಸೆಗೇಳು.”

“ಯಾವ ಮಾತನಪ್ಪ” ಎನ್ನುತ್ತ ವಾಟಿಸ್ಸೆ ಬಂದ.

“ಇನ್ನ ಮುಂದೆ ಜುಮ್ಮಿ ಮನಿಗೆ ಬರಬೇಕಾದ್ರೆ, ನಿನ್ನ ಮನಿಂದ ಇಲ್ಲಿಗೆ ನೇರವಾಗಿ ಬರಬೇಕಂತೆ. ಅಲ್ಲಿ ಇಲ್ಲಿ ತಿರುಗಿದೊರಿಗೆ ನೊ ಎಂಟ್ರಿ.”

“ಲೇ ಉಗ್ರಿ, ನಾವು ಎಲ್ಯಾರ ತಿರುಗ್ಲಿ. ಆದ್ರೆ ಪೇಸ್‍ನ ಬಟ್ಟೆ ಮಕಾಡದಿಂದ ಕವರ್ ಮಾಡಿರಬೇಕು. ಯಾರತ್ರ ಮಾತಾಡಿದ್ರು ಟೆನ್ ಆರ್ ಪೈ ಪಿಟ್ ದೂರ ಮೆಂಟೇನ್ ಮಾಡಬೇಕು. ಕೈ ಕುಲುಕಬಾರ್ದು. ಎಷ್ಟೇ ಆತ್ಮೀಯರಾದ್ರು ತಬ್ಬಿಕಬಾರ್ದು, ನಿಸರ್ಗನೇ ತಂದಿರೊ ಅಸ್ಪೃಶ್ಯತೆನ ಚಾಚೂ ತಪ್ಪದೆ ಫಾಲೋ ಮಾಡಿದ್ರೆ ಎಲ್ಯಾರ ತಿರುಗಬಹುದು” ಎಂದ ವಾಟಿಸ್ಸೆ.

“ನಿನ್ನಂಗೆ ಮಾತಾಡಿ ಕೃಷ್ಣೇಗೌಡರ ಕತೆ ಏನಾಗ್ಯದೆ ಗೊತ್ತೆ.”

“ಏನಾಗ್ಯದೊ ವಾಟ್ಯಾಪನ್.”

“ವಸ ಇನ್ನೋವಾ ತಗಂಡಿದ್ನಲ್ಲಾ. ಅದ ಯಲ್ಲಾರಿಗೂ ತೋರಿಸಿಗಂಡು ಮಾತಾಡಿಸಿಗಂಡು ತಿರುಗುತಿದ್ದ. ಮನ್ನೆ ದಿನ ಮಂಡ್ಯಾಕ್ಕೂ ಹೋಗಿ ಬಂದನಂತೆ. ಅಷ್ಟೆ. ಅವುನ ಸಮೇತ ಮನಿ ಮಕ್ಕಳಿಗ್ಯಲ್ಲ ಕರೊನ ಹಟಗಾಯಿಸಿಕೊಂಡದೆ.”

“ಛೇ ಪಾಪ ಅಂಗಾಗಬಾರದಿತ್ತು.”

“ನೀನಂಗಂತಿ ಕೇಳಿದೊರ್ಯಲ್ಲ ನಗ್ತರಲ್ಲ ಯಾಕೆ.”

“ಕ್ಯಟ್ಟ ಮನುಸರಿಗೆ ಕರೋನ ಬಂದ್ರೆ ಜನಗಳು ಕ್ಯಟ್ಟ ಕುಶಿಯಿಂದ ನಗ್ತರೆ ಕಣೊ. ಆದ್ರೆ ಇವತ್ತು ಅವುನಿಗೆ ಬಂದಿದ್ದು ನಾಳೆ ನಮಿಗೂ ಬಂದೇ ಬತ್ತದೆ ಅದ್ಕೆ ಆಡಿಕಬಾರ್ದು.”

“ನಿಜ ಕಂಡ್ಳ ನೀನೇಳಿದ್ದು. ನೋಡು ಮದ್ಲು ಮಂಡೇವುಕೆ ಬತ್ತು. ಆಮ್ಯಾಲೆ ನಾಗಮಂಗಲಕ್ಕೆ ಬತ್ತು. ಈಗ ಬಿಂಡಗನೂಲೆ ಹೆಂಗಸಿಗೆ ಬಂದದೆ. ಅಂಗೆ ಇಲ್ಲಿಗೂ ಬರಬಹುದು” ಎಂದಳು ಜುಮ್ಮಿ.

“ಬಂದೆ ಬತ್ತದೆ ಕಣಕ್ಕ. ಯಾಕೆ ಅಂದ್ರೇ ಬೆಂಗಳೂರಲ್ಲಿದ್ರಲ್ಲ ನಮ್ಮ ಜನ ಅವುರ್ಯಲ್ಲ ಮನೆ ಖಾಲಿ ಮಾಡಿಕಂಡು ಊರು ಕಡಿಕೆ ವಂಟವುರೆ. ಅವುರೇನು ಸುಮ್ಮಸುಮ್ಮನೆ ಬಂದರೇ, ಕರೋನ ಹಿಡಕಂಡೇ ಬತ್ತರೆ.”

“ಅಂಗಾದ್ರೆ ಗತಿಯೇನ್ಲ.”

“ಗತಿಯೇನು ಇಲ್ಲ ಕಣಕ್ಕ. ನಿನ್ನ ವಲ್ದತ್ರ ಒಂದು ಗುಡ್ಳಾಯ್ಕಂಡಿರು.”

“ಆಗ ಪ್ಳೇಗು ಕಾಲರ ಬಂದಾಗ ಅಂಗೇ ಮಾಡಿದ್ರಂತೆ.”

“ಈಗ್ಲು ಅಂಗೆ ಮಾಡನ ತಗೊ.”

“ಊರು ಬುಟ್ಟು ಹ್ವರಗೋಗಿ ಗುಡ್ಳಾಯ್ಕಂಡ್ರೆ ಪ್ಲೇಗು ಬತ್ತಿರಲಿಲ್ಲ. ಕರೋನ ಅಂಗಲ್ಲ ಯಾರಿಂದ ಬತ್ತದೆ ಅಂತ ಹೇಳಕ್ಕಾಗದಿಲ್ಲ” ಎಂದ ವಾಟಿಸ್ಸೆ.

“ಪಾಪ ಕೃಷ್ಣೇಗೌಡನಿಗೆ ಬಂದಿರದು ಅಂಗೆ ಅಲವೆ. ಯಾರಿಂದ ಬತ್ತು ಅಂತ್ಲೆ ಗೊತ್ತಿಲ್ಲ” ಎಂದ ಉಗ್ರಿ.

“ಥೇಟ್ ಡಿ.ಕೆ.ಶಿವಕುಮಾರನಂಗವುನೆ ಕಣೊ ಅವುನು. ನೋಡಿದ್ರೆ ಅವಳಿಜವಳಿ ಅನ್ನಬೇಕು.”

“ಅಂತೂ ಡಿ.ಕೆ.ಶಿವಕುಮಾರ್ ಕಡಿಗೂ ಅಧ್ಯಕ್ಷಾದ ಬುಡತ್ತಗೆ.”

“ಅವುನು ವಳ್ಯೊನೇನ್ಲ” ಎಂದಳು.

“ವಳ್ಳೆಯವನು ಅಂದ್ರೆ ಯಾವ ತರನಕ್ಕ. ನಿನ್ನ ಗಂಡನಂಗಿರಬೇಕೊ, ನನ್ನಂಗಿರಬೇಕೊ ಇಲ್ಲ ಈ ಉಗ್ರಿ ತರ ಇರಬೇಕೊ ಯಾವ ತರ ಅಂತ ಹೇಳು.”

“ಬಡವುರಾಧಾರಿನೆ ಅಂತ ಕೇಳಿದೆ ಕಂಡ್ಳ.”

“ಬಡವುರಾಧಾರಿ ಅನ್ನದ್ರಲ್ಲಿ ಯರಡು ಮಾತಿಲ್ಲ ಕಣಕ್ಕ. ದಿವ್ಸ ಮನೆ ಹತ್ರಕ್ಕೆ ನೂರಾರು ಜನ ಬತ್ತರೆ. ಯಾಕೆ ಅಂದ್ರೆ ಯಾರೊ ನಿನ್ನಂಥವುಳಿಗೆ ಹೆರಿಗೆಯಾಗಬೇಕಿರುತ್ತೆ ದುಡ್ಡಿರದಿಲ್ಲ ಡಿ.ಕೆ.ಶಿ ಹುಡಿಕ್ಕಂಡು ಬತ್ತಳೆ.”

“ನನ್ನಂಥೊಳು ಅಂತ ಯಾಕಂತಿಲ ಮುಂಡೆ ಮಗನೆ.”

“ಪರೆಗ್‍ಜಾಂಪಲ್ಲು ಕಣಕ್ಕ ಸಿಟ್ಟಾಗಬ್ಯಾಡ. ಇನ್ನ ಯಂತ್ಯಂಥ ಜನ ಬತ್ತರೆ ಗೊತ್ತ. ಕ್ಯಾನ್ಸರ್ ಆದೊರು, ಆರಟಾಪರೇಶನ್ ಜನ, ತಿಥಿ ಮಾಡೋರು, ನಾಮಕರಣ ಮಾಡೋರು, ತಿರುಪ್ತಿಗೋಗರು, ಅಯ್ಯಪ್ಪ ಸ್ವಾಮಿ ಹುಡಿಕ್ಕಂಡೋಗವು ಹಿಂಗೆ ಈ ಸಮಾಜದ ಸಕಲಿಸ್ಟು ರೋಗನು ಡಿ.ಕೆ.ಶಿ ಮನೆತಕ್ಕೆ ಬತ್ತದೆ.”

“ಅವಿರುಗ್ಯಲ್ಲ ದುಡ್ಡು ಕೊಟ್ಟನೆ.”

“ಯಾರ್ನು ಬರಿಕೈಲಿ ಕಳಸದಿಲ್ಲ ಕಣಕ್ಕ. ನಾನೇ ನಿಂತುಗಂಡು ನೋಡಿದಂಗೆ ಲಕ್ಷಾಂತೃಪಾಯಿ ದಾನ ಮಾಡ್ತನೆ.”

“ಬೇಕಾದಷ್ಟು ಸಂಪಾದ್ನೆ ಮಾಡ್ಯವುನೆ ಕೊಡ್ತನೆ.”

“ಮಿಸ್ಟರ್ ಉಗ್ರಿ, ಸಂಪಾದ್ನೆ ಮಾಡಿದೊರ್ಯಲ್ಲ ದಾನ ಮಾಡಿದ್ರೆ ನಮ್ಮಂಥೊರು ಹಿಂಗಿರತಿರಲಿಲ್ಲ ಕಣೊ. ಡಿ.ಕೆ.ಶಿಗಿಂತ ಅವುನ ತಮ್ಮನಂತೂ ದಾನಸೂರ ಕರ್ಣ ಕಣೊ.”

“ಕರ್ಣ ಏನು ದುಡದಿದ್ನೆ ದುರ್ಯೋಧನ ಮಾಡಿ ಮಡಗಿದ್ದ ಅವುನು ಕೊಟ್ಟ ಅಂಗೆ ಇವುನುವೆ.”

“ನೋಡೊ ಉಗ್ರಿ, ಸಣ್ಣಮಾತ ಯಲ್ಲಾರು ವಿಷಯದಲ್ಲೂ ಮಾತಾಡಕ್ಕೆ ಬರದಿಲ್ಲ. ಈ ಡಿ.ಕೆ. ಬ್ರದರ್ಸೆ ಡಿಪರೆಂಟು ಕಣೊ, ಏನಪ್ಪ ಅಂದ್ರೆ ಇವುರು ಆಸ್ತಿ ಮಾಡಿಕಂಡು ಪವರಿಗೆ ಬತ್ತಾ ಅವುರೆ, ಆದ್ರಿಂದ ಆಸ್ತಿ ಮಾಡೊ ಅಗತ್ಯ ಇಲ್ಲ. ಅದೇ ಎಡೂರಪ್ಪ ಮುಖ್ಯಮಂತ್ರಿಯಾದೇಟಿಗೆ ಬರೀ ಆಸ್ತಿ ಮಾಡದ್ನೆ ಆಡಳತ ಅನ್ನಕಂಡಿದ್ದ. ಡಿ.ಕೆ.ಶಿ ಆಸ್ತಿ ಅದರಿಂದ್ಲೆ ತೊಂದ್ರೆ ಅನುಭವಿಸಿದೋನು. ನಮ್ಮ ಜನಾಂಗದಲ್ಲಿ ಕುಮಾರಣ್ಣನಿಗಿಂತ ವಳ್ಳೆ ಪರಸನ್ನು.”

“ಅದ್ಯಂಗೇಳತಿಯೋ.”

“ಯಂಗೇ ಅಂದ್ರೆ ಡಿ.ಕೆ.ಶಿ ಕಾಂಗ್ರೆಸ್ಸಿಂದ ಬಂದವುನು. ಅವುನು ಕಾಂಗ್ರೆಸ್ಸಿಗ. ಆ ಪಾರ್ಟಿ ಸಿದ್ಧಾಂತ ಮಾತಾಡ್ತನೆ. ಅದೇ ಕುಮಾರಣ್ಣ ಯಾವ ಪಾರ್ಟಿ ಅಂತ್ಲೂ ಹೇಳಕ್ಕ ಬರದಿಲ್ಲ. ಒಟ್ಟಿನಲ್ಲಿ ನಂಬಿಕೆಗೆ ಯೋಗ್ಯನಲ್ಲ ಅಂತ ಅವನಿಂದ ದೂರ ಹೋದೊರು ಹೇಳ್ತ ಅವುರೆ. ಆದ್ರೆ ಡಿ.ಕೆ.ಶಿ ಅಂಗಲ್ಲ ಏನಪ್ಪ ಅಂದ್ರೆ ಒಂದಿಷ್ಟು ರೌಡಿ ಇಮೇಜದೆ.”

“ಸದ್ದಿಕೆ ಅದುಬೇಕು ಕಣೊ. ಈ ಬಿಜೆಪಿಗಳ ಹೆದರಸಬೇಕಾದ್ರೆ ರೌಡಿ ಗಂಟ್ಳೇಬೇಕು ಅದ್ಕೆ ಹೆದರದವುರು.”

“ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು.”

“ಅವುನ್ನೊಂದು ಸತಿ ತೋರುಸ್ಲ.”

“ಹೋಗನಿರಕ್ಕ ಮನೆತಕ್ಕೆ ಹೋಗನ. ಯಸ್ಸೆಂ ಕೃಷ್ಣನ ಕಡಿಯೋರು ಅಂದ್ರೆ ಊಟ ಮಾಡ್ಸಿ ಕಳುಸ್ತನೆ.”

“ !?

  • ಬಿ.ಚಂದ್ರೇಗೌಡ

ಇದನ್ನು ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...