Homeಅಂಕಣಗಳುಥೂತ್ತೇರಿ | ಯಾಹೂಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು - ಚಂದ್ರೇಗೌಡರ ಕಟ್ಟೆಪುರಾಣ

ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಇದು ಗಾಳಿ ಬೀಸುವ ಕಾಲ, ಬರ್ರೊ ಎಂದು ಬೀಸುವ ಗಾಳಿಯೂ ಕರೋನ ಸೋಂಕನ್ನು ಹೊತ್ತು ತರುತ್ತದೆಂದು ವಾಟಿಸ್ಸೆ ಹೇಳಿದಾಗಿನಿಂದ, ಹೆದರಿದ ಜುಮ್ಮಿ ಮನೆ ಬುಟ್ಟು ಈಚೆ ಬಂದಿರಲಿಲ್ಲ. ಆಗ ಆಗಮಿಸಿದ ಉಗ್ರಿ.

“ಸುಮಲತನಿಗೂ ಕರೋನ ಬಂದದಂತೆ ಕಣೆ” ಎಂದ.

“ಅಯ್ಯೊ ಶಿವನೇ ಅವುಳಿಗ್ಯಾಕೆ ಬತ್ತೂ.”

“ಪಾಪ ಅವಳು ಮನೆವಳಗಿಲ್ದೆಲೆ ಜನಗಳ ಜ್ವತೆ ಮಾತಾಡ್ಯವುಳೆ ಅದ್ಕೆ ಬಂದದೆ.”

“ನೀನು ಎಲ್ಲಿಂದ ಬಂದ್ಲ.”

“ಮನಿಂದ ಬಂದೆ.”

“ಅಂಗಾದ್ರೆ ವಳಿಕೆ ಬಾ, ಎಲ್ಲೆಲ್ಲೊ ನಾಯಿ ತಿರುಗಿದಂಗೆ ತಿರುಗಿದ್ರೆ ಇಲ್ಯಲ್ಲ ಬರದು ಬ್ಯಾಡ.”

“ಆ ಮಾತ ವಾಟಿಸ್ಸೆಗೇಳು.”

“ಯಾವ ಮಾತನಪ್ಪ” ಎನ್ನುತ್ತ ವಾಟಿಸ್ಸೆ ಬಂದ.

“ಇನ್ನ ಮುಂದೆ ಜುಮ್ಮಿ ಮನಿಗೆ ಬರಬೇಕಾದ್ರೆ, ನಿನ್ನ ಮನಿಂದ ಇಲ್ಲಿಗೆ ನೇರವಾಗಿ ಬರಬೇಕಂತೆ. ಅಲ್ಲಿ ಇಲ್ಲಿ ತಿರುಗಿದೊರಿಗೆ ನೊ ಎಂಟ್ರಿ.”

“ಲೇ ಉಗ್ರಿ, ನಾವು ಎಲ್ಯಾರ ತಿರುಗ್ಲಿ. ಆದ್ರೆ ಪೇಸ್‍ನ ಬಟ್ಟೆ ಮಕಾಡದಿಂದ ಕವರ್ ಮಾಡಿರಬೇಕು. ಯಾರತ್ರ ಮಾತಾಡಿದ್ರು ಟೆನ್ ಆರ್ ಪೈ ಪಿಟ್ ದೂರ ಮೆಂಟೇನ್ ಮಾಡಬೇಕು. ಕೈ ಕುಲುಕಬಾರ್ದು. ಎಷ್ಟೇ ಆತ್ಮೀಯರಾದ್ರು ತಬ್ಬಿಕಬಾರ್ದು, ನಿಸರ್ಗನೇ ತಂದಿರೊ ಅಸ್ಪೃಶ್ಯತೆನ ಚಾಚೂ ತಪ್ಪದೆ ಫಾಲೋ ಮಾಡಿದ್ರೆ ಎಲ್ಯಾರ ತಿರುಗಬಹುದು” ಎಂದ ವಾಟಿಸ್ಸೆ.

“ನಿನ್ನಂಗೆ ಮಾತಾಡಿ ಕೃಷ್ಣೇಗೌಡರ ಕತೆ ಏನಾಗ್ಯದೆ ಗೊತ್ತೆ.”

“ಏನಾಗ್ಯದೊ ವಾಟ್ಯಾಪನ್.”

“ವಸ ಇನ್ನೋವಾ ತಗಂಡಿದ್ನಲ್ಲಾ. ಅದ ಯಲ್ಲಾರಿಗೂ ತೋರಿಸಿಗಂಡು ಮಾತಾಡಿಸಿಗಂಡು ತಿರುಗುತಿದ್ದ. ಮನ್ನೆ ದಿನ ಮಂಡ್ಯಾಕ್ಕೂ ಹೋಗಿ ಬಂದನಂತೆ. ಅಷ್ಟೆ. ಅವುನ ಸಮೇತ ಮನಿ ಮಕ್ಕಳಿಗ್ಯಲ್ಲ ಕರೊನ ಹಟಗಾಯಿಸಿಕೊಂಡದೆ.”

“ಛೇ ಪಾಪ ಅಂಗಾಗಬಾರದಿತ್ತು.”

“ನೀನಂಗಂತಿ ಕೇಳಿದೊರ್ಯಲ್ಲ ನಗ್ತರಲ್ಲ ಯಾಕೆ.”

“ಕ್ಯಟ್ಟ ಮನುಸರಿಗೆ ಕರೋನ ಬಂದ್ರೆ ಜನಗಳು ಕ್ಯಟ್ಟ ಕುಶಿಯಿಂದ ನಗ್ತರೆ ಕಣೊ. ಆದ್ರೆ ಇವತ್ತು ಅವುನಿಗೆ ಬಂದಿದ್ದು ನಾಳೆ ನಮಿಗೂ ಬಂದೇ ಬತ್ತದೆ ಅದ್ಕೆ ಆಡಿಕಬಾರ್ದು.”

“ನಿಜ ಕಂಡ್ಳ ನೀನೇಳಿದ್ದು. ನೋಡು ಮದ್ಲು ಮಂಡೇವುಕೆ ಬತ್ತು. ಆಮ್ಯಾಲೆ ನಾಗಮಂಗಲಕ್ಕೆ ಬತ್ತು. ಈಗ ಬಿಂಡಗನೂಲೆ ಹೆಂಗಸಿಗೆ ಬಂದದೆ. ಅಂಗೆ ಇಲ್ಲಿಗೂ ಬರಬಹುದು” ಎಂದಳು ಜುಮ್ಮಿ.

“ಬಂದೆ ಬತ್ತದೆ ಕಣಕ್ಕ. ಯಾಕೆ ಅಂದ್ರೇ ಬೆಂಗಳೂರಲ್ಲಿದ್ರಲ್ಲ ನಮ್ಮ ಜನ ಅವುರ್ಯಲ್ಲ ಮನೆ ಖಾಲಿ ಮಾಡಿಕಂಡು ಊರು ಕಡಿಕೆ ವಂಟವುರೆ. ಅವುರೇನು ಸುಮ್ಮಸುಮ್ಮನೆ ಬಂದರೇ, ಕರೋನ ಹಿಡಕಂಡೇ ಬತ್ತರೆ.”

“ಅಂಗಾದ್ರೆ ಗತಿಯೇನ್ಲ.”

“ಗತಿಯೇನು ಇಲ್ಲ ಕಣಕ್ಕ. ನಿನ್ನ ವಲ್ದತ್ರ ಒಂದು ಗುಡ್ಳಾಯ್ಕಂಡಿರು.”

“ಆಗ ಪ್ಳೇಗು ಕಾಲರ ಬಂದಾಗ ಅಂಗೇ ಮಾಡಿದ್ರಂತೆ.”

“ಈಗ್ಲು ಅಂಗೆ ಮಾಡನ ತಗೊ.”

“ಊರು ಬುಟ್ಟು ಹ್ವರಗೋಗಿ ಗುಡ್ಳಾಯ್ಕಂಡ್ರೆ ಪ್ಲೇಗು ಬತ್ತಿರಲಿಲ್ಲ. ಕರೋನ ಅಂಗಲ್ಲ ಯಾರಿಂದ ಬತ್ತದೆ ಅಂತ ಹೇಳಕ್ಕಾಗದಿಲ್ಲ” ಎಂದ ವಾಟಿಸ್ಸೆ.

“ಪಾಪ ಕೃಷ್ಣೇಗೌಡನಿಗೆ ಬಂದಿರದು ಅಂಗೆ ಅಲವೆ. ಯಾರಿಂದ ಬತ್ತು ಅಂತ್ಲೆ ಗೊತ್ತಿಲ್ಲ” ಎಂದ ಉಗ್ರಿ.

“ಥೇಟ್ ಡಿ.ಕೆ.ಶಿವಕುಮಾರನಂಗವುನೆ ಕಣೊ ಅವುನು. ನೋಡಿದ್ರೆ ಅವಳಿಜವಳಿ ಅನ್ನಬೇಕು.”

“ಅಂತೂ ಡಿ.ಕೆ.ಶಿವಕುಮಾರ್ ಕಡಿಗೂ ಅಧ್ಯಕ್ಷಾದ ಬುಡತ್ತಗೆ.”

“ಅವುನು ವಳ್ಯೊನೇನ್ಲ” ಎಂದಳು.

“ವಳ್ಳೆಯವನು ಅಂದ್ರೆ ಯಾವ ತರನಕ್ಕ. ನಿನ್ನ ಗಂಡನಂಗಿರಬೇಕೊ, ನನ್ನಂಗಿರಬೇಕೊ ಇಲ್ಲ ಈ ಉಗ್ರಿ ತರ ಇರಬೇಕೊ ಯಾವ ತರ ಅಂತ ಹೇಳು.”

“ಬಡವುರಾಧಾರಿನೆ ಅಂತ ಕೇಳಿದೆ ಕಂಡ್ಳ.”

“ಬಡವುರಾಧಾರಿ ಅನ್ನದ್ರಲ್ಲಿ ಯರಡು ಮಾತಿಲ್ಲ ಕಣಕ್ಕ. ದಿವ್ಸ ಮನೆ ಹತ್ರಕ್ಕೆ ನೂರಾರು ಜನ ಬತ್ತರೆ. ಯಾಕೆ ಅಂದ್ರೆ ಯಾರೊ ನಿನ್ನಂಥವುಳಿಗೆ ಹೆರಿಗೆಯಾಗಬೇಕಿರುತ್ತೆ ದುಡ್ಡಿರದಿಲ್ಲ ಡಿ.ಕೆ.ಶಿ ಹುಡಿಕ್ಕಂಡು ಬತ್ತಳೆ.”

“ನನ್ನಂಥೊಳು ಅಂತ ಯಾಕಂತಿಲ ಮುಂಡೆ ಮಗನೆ.”

“ಪರೆಗ್‍ಜಾಂಪಲ್ಲು ಕಣಕ್ಕ ಸಿಟ್ಟಾಗಬ್ಯಾಡ. ಇನ್ನ ಯಂತ್ಯಂಥ ಜನ ಬತ್ತರೆ ಗೊತ್ತ. ಕ್ಯಾನ್ಸರ್ ಆದೊರು, ಆರಟಾಪರೇಶನ್ ಜನ, ತಿಥಿ ಮಾಡೋರು, ನಾಮಕರಣ ಮಾಡೋರು, ತಿರುಪ್ತಿಗೋಗರು, ಅಯ್ಯಪ್ಪ ಸ್ವಾಮಿ ಹುಡಿಕ್ಕಂಡೋಗವು ಹಿಂಗೆ ಈ ಸಮಾಜದ ಸಕಲಿಸ್ಟು ರೋಗನು ಡಿ.ಕೆ.ಶಿ ಮನೆತಕ್ಕೆ ಬತ್ತದೆ.”

“ಅವಿರುಗ್ಯಲ್ಲ ದುಡ್ಡು ಕೊಟ್ಟನೆ.”

“ಯಾರ್ನು ಬರಿಕೈಲಿ ಕಳಸದಿಲ್ಲ ಕಣಕ್ಕ. ನಾನೇ ನಿಂತುಗಂಡು ನೋಡಿದಂಗೆ ಲಕ್ಷಾಂತೃಪಾಯಿ ದಾನ ಮಾಡ್ತನೆ.”

“ಬೇಕಾದಷ್ಟು ಸಂಪಾದ್ನೆ ಮಾಡ್ಯವುನೆ ಕೊಡ್ತನೆ.”

“ಮಿಸ್ಟರ್ ಉಗ್ರಿ, ಸಂಪಾದ್ನೆ ಮಾಡಿದೊರ್ಯಲ್ಲ ದಾನ ಮಾಡಿದ್ರೆ ನಮ್ಮಂಥೊರು ಹಿಂಗಿರತಿರಲಿಲ್ಲ ಕಣೊ. ಡಿ.ಕೆ.ಶಿಗಿಂತ ಅವುನ ತಮ್ಮನಂತೂ ದಾನಸೂರ ಕರ್ಣ ಕಣೊ.”

“ಕರ್ಣ ಏನು ದುಡದಿದ್ನೆ ದುರ್ಯೋಧನ ಮಾಡಿ ಮಡಗಿದ್ದ ಅವುನು ಕೊಟ್ಟ ಅಂಗೆ ಇವುನುವೆ.”

“ನೋಡೊ ಉಗ್ರಿ, ಸಣ್ಣಮಾತ ಯಲ್ಲಾರು ವಿಷಯದಲ್ಲೂ ಮಾತಾಡಕ್ಕೆ ಬರದಿಲ್ಲ. ಈ ಡಿ.ಕೆ. ಬ್ರದರ್ಸೆ ಡಿಪರೆಂಟು ಕಣೊ, ಏನಪ್ಪ ಅಂದ್ರೆ ಇವುರು ಆಸ್ತಿ ಮಾಡಿಕಂಡು ಪವರಿಗೆ ಬತ್ತಾ ಅವುರೆ, ಆದ್ರಿಂದ ಆಸ್ತಿ ಮಾಡೊ ಅಗತ್ಯ ಇಲ್ಲ. ಅದೇ ಎಡೂರಪ್ಪ ಮುಖ್ಯಮಂತ್ರಿಯಾದೇಟಿಗೆ ಬರೀ ಆಸ್ತಿ ಮಾಡದ್ನೆ ಆಡಳತ ಅನ್ನಕಂಡಿದ್ದ. ಡಿ.ಕೆ.ಶಿ ಆಸ್ತಿ ಅದರಿಂದ್ಲೆ ತೊಂದ್ರೆ ಅನುಭವಿಸಿದೋನು. ನಮ್ಮ ಜನಾಂಗದಲ್ಲಿ ಕುಮಾರಣ್ಣನಿಗಿಂತ ವಳ್ಳೆ ಪರಸನ್ನು.”

“ಅದ್ಯಂಗೇಳತಿಯೋ.”

“ಯಂಗೇ ಅಂದ್ರೆ ಡಿ.ಕೆ.ಶಿ ಕಾಂಗ್ರೆಸ್ಸಿಂದ ಬಂದವುನು. ಅವುನು ಕಾಂಗ್ರೆಸ್ಸಿಗ. ಆ ಪಾರ್ಟಿ ಸಿದ್ಧಾಂತ ಮಾತಾಡ್ತನೆ. ಅದೇ ಕುಮಾರಣ್ಣ ಯಾವ ಪಾರ್ಟಿ ಅಂತ್ಲೂ ಹೇಳಕ್ಕ ಬರದಿಲ್ಲ. ಒಟ್ಟಿನಲ್ಲಿ ನಂಬಿಕೆಗೆ ಯೋಗ್ಯನಲ್ಲ ಅಂತ ಅವನಿಂದ ದೂರ ಹೋದೊರು ಹೇಳ್ತ ಅವುರೆ. ಆದ್ರೆ ಡಿ.ಕೆ.ಶಿ ಅಂಗಲ್ಲ ಏನಪ್ಪ ಅಂದ್ರೆ ಒಂದಿಷ್ಟು ರೌಡಿ ಇಮೇಜದೆ.”

“ಸದ್ದಿಕೆ ಅದುಬೇಕು ಕಣೊ. ಈ ಬಿಜೆಪಿಗಳ ಹೆದರಸಬೇಕಾದ್ರೆ ರೌಡಿ ಗಂಟ್ಳೇಬೇಕು ಅದ್ಕೆ ಹೆದರದವುರು.”

“ಡಿ.ಕೆ.ಶಿ ಬಿಜೆಪಿಗಳ ಹೆದರಸ್ತನೆ ಬುಡೊ. ನೋ ಡವುಟು.”

“ಅವುನ್ನೊಂದು ಸತಿ ತೋರುಸ್ಲ.”

“ಹೋಗನಿರಕ್ಕ ಮನೆತಕ್ಕೆ ಹೋಗನ. ಯಸ್ಸೆಂ ಕೃಷ್ಣನ ಕಡಿಯೋರು ಅಂದ್ರೆ ಊಟ ಮಾಡ್ಸಿ ಕಳುಸ್ತನೆ.”

“ !?

  • ಬಿ.ಚಂದ್ರೇಗೌಡ

ಇದನ್ನು ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...