Homeಮುಖಪುಟರೈತ ಶಕ್ತಿ ಎದುರಿಸಲಾಗದ ರಾಜ್ಯ ಪೊಲೀಸರು; ರಾಜಧಾನಿ ಪ್ರವೇಶಿಸಿದ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ರೈತ ಶಕ್ತಿ ಎದುರಿಸಲಾಗದ ರಾಜ್ಯ ಪೊಲೀಸರು; ರಾಜಧಾನಿ ಪ್ರವೇಶಿಸಿದ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಇಂದು ಬೆಳಗ್ಗೆಯಿಂದಲೇ ರಾಜಧಾನಿಯ ವಿವಿಧ ಗಡಿಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗಾಗಿ ಕಾದು ಕುಳಿತಿದ್ದ ಸಾವಿರಾರು ಸಂಖ್ಯೆಯ ರೈತ ಹೋರಾಟಗಾರರು ಕೊನೆಗೂ ಇಂದು ಬೆಂಗಳೂರು ನಗರಪ್ರವೇಶಿಸುವಲ್ಲಿ ಸಫಲರಾಗಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನನ್ನು ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಇಂದು ಆಯೋಜಿಸಿದ್ದ ಟ್ರ್ಯಾಕ್ಟರ್​ ರ‍್ಯಾಲಿಗೆ ಕೊನೆಗೂ ಪೊಲೀಸರು ಅನುಮತಿ ನೀಡಿದ್ದಾರೆ. ಪರಿಣಾಮ ಇಂದು ಬೆಳಗ್ಗೆಯಿಂದಲೇ ರಾಜಧಾನಿಯ ವಿವಿಧ ಗಡಿಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗಾಗಿ ಕಾದು ಕುಳಿತಿದ್ದ ಸಾವಿರಾರು ಸಂಖ್ಯೆಯ ರೈತ ಹೋರಾಟಗಾರರು ಕೊನೆಗೂ ಇಂದು ಬೆಂಗಳೂರು ನಗರಪ್ರವೇಶಿಸುವಲ್ಲಿ ಸಫಲರಾಗಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಮಾದಾವರ ಮೈದಾನದ ಬಳಿ ಭಾರತ ಬಾವುಟದ ಜೊತೆಗೆ ರೌಂಡ್ ಹಾಕುವ ಮೂಲಕ ಪೊಲೀಸರ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದರು. ಆದರೆ, ಮಧ್ಯಾಹ್ನ 1 ಗಂಟೆಯ ವೇಳೆಗೆ ಟ್ರ್ಯಾಕ್ಟರ್​ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಿದ್ದಾರೆ. ಪೊಲೀಸರು ಅನುಮತಿ ನೀಡುತ್ತಿದ್ದಂತೆ  ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ವಾಹನಗಳು ಮಾದಾವರದಿಂದ ಇದೀಗ ಪೆರೇಡ್ ಆರಂಭಿಸಿವೆ. ಮತ್ತೊಂದೆಡೆ ರೈತ ಮುಖಂಡ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಮೈಸೂರು ರಸ್ತೆ ಮೂಲಕವೂ ರೈತರು 30ಕ್ಕೂ ಹೆಚ್ಚು ಟ್ರ್ಯಾಕ್ಟರ್​ ಜೊತೆಗೆ ಈಗಾಗಲೇ ಬೆಂಗಳೂರು ಪ್ರವೇಶಿಸಿದ್ದಾರೆ.

ಮಾದಾವರ ಮತ್ತು ಮೈಸೂರು ರಸ್ತೆಯ ರ‍್ಯಾಲಿಯಲ್ಲಿ ಸಾವಿರಾರು ಸಂಖ್ಯೆಯ ರೈತರು, ಐನೂರಕ್ಕೂ ಹೆಚ್ಚು ರೈತ ವಾಹನಗಳು ಭಾಗಿಯಾಗಿದ್ದು, ರೈತರಿಗೆ ದಲಿತ, ಕಾರ್ಮಿಕ, ಕನ್ನಡ, ಮಹಿಳಾ ಸಂಘಟನೆಗಳು ಸಾಥ್ ನೀಡಿವೆ. ಪೆರೇಡ್ ಮುಂಭಾಗದಲ್ಲಿ ಟ್ರಾಕ್ಟರ್, ಆನಂತರ ಕಾರು, ಟೆಂಪೋ, ಗೂಡ್ಸ್ ಗಾಡಿ ಆನಂತರ ಹೋರಾಟಗಾರರಿರುವ ಬಸ್​ಗಳು ಸಾಲಾಗಿ ಮೆರವಣಿಗೆ ಹೊರಟಿದ್ದು, ಈ ಮೆರವಣಿಗೆ ಶೀಘ್ರದಲ್ಲೇ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಹಾಗೂ ಅಲ್ಲಿಂದ ಫ್ರೀಡಂ ಪಾರ್ಕ್​ಗೆ ತಲುಪಲಿದೆ ಎನ್ನಲಾಗುತ್ತಿದೆ.

ಇದಲ್ಲದೆ, ಹೊಸಕೋಟೆ ಮೂಲಕವೂ ರೈತರು ತಮ್ಮ ವಾಹನಗಳ ಮೂಲಕ ಬೆಂಗಳೂರು ಪ್ರವೇಶಿಸುತ್ತಿದ್ದಾರೆ. ಹೀಗಾಗಿ ಹೊಸಕೋಟೆ ಟೋಲ್ ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಬೇಟಿ ನೀಡಿ ರೈತರ ರ‍್ಯಾಲಿ ಕುರಿತು ಮಾಹಿತಿ ಪಡೆದಿದ್ದಾರೆ. ಡಿಸಿಪಿ ದೇವರಾಜ್, ಗ್ರಾಮಾಂತರ ಜಿಲ್ಲೆ ಎಎಸ್ಪಿ ಲಕ್ಷ್ಮೀ ಗಣೇಶ್ ಸ್ಥಳದಲ್ಲಿ ಭದ್ರತೆ ಹೊಣೆ ಹೊತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ.

ಇನ್ನೂ ನಗರಕ್ಕೆ ರೈತರ ನೂರಾರು ವಾಹನಗಳ ಪ್ರವೇಶದಿಂದಾಗಿ ಮೈಸೂರು ರಸ್ತೆ, ನೈಸ್ ರೋಡ್ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ ಎನ್ನಲಾಗುತ್ತಿದೆ. ಈ ಹೋರಾಟ ಮತ್ತು ರ‍್ಯಾಲಿ ಅಂತಿಮವಾಗಿ ಫ್ರೀಂಡಂ ಪಾರ್ಕ್​ ಬಳಿ ಜಮಾಯಿಸಲಿದ್ದು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಯಲಿದೆ ಎಂದು ರೈತ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಬಿಗಿ ಭದ್ರತೆ; ರೈತ ಹೋರಾಟಕ್ಕೆ ಬೆದರಿತೇ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...