Homeಮುಖಪುಟರೈತ ಶಕ್ತಿ ಎದುರಿಸಲಾಗದ ರಾಜ್ಯ ಪೊಲೀಸರು; ರಾಜಧಾನಿ ಪ್ರವೇಶಿಸಿದ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ರೈತ ಶಕ್ತಿ ಎದುರಿಸಲಾಗದ ರಾಜ್ಯ ಪೊಲೀಸರು; ರಾಜಧಾನಿ ಪ್ರವೇಶಿಸಿದ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಇಂದು ಬೆಳಗ್ಗೆಯಿಂದಲೇ ರಾಜಧಾನಿಯ ವಿವಿಧ ಗಡಿಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗಾಗಿ ಕಾದು ಕುಳಿತಿದ್ದ ಸಾವಿರಾರು ಸಂಖ್ಯೆಯ ರೈತ ಹೋರಾಟಗಾರರು ಕೊನೆಗೂ ಇಂದು ಬೆಂಗಳೂರು ನಗರಪ್ರವೇಶಿಸುವಲ್ಲಿ ಸಫಲರಾಗಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನನ್ನು ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಇಂದು ಆಯೋಜಿಸಿದ್ದ ಟ್ರ್ಯಾಕ್ಟರ್​ ರ‍್ಯಾಲಿಗೆ ಕೊನೆಗೂ ಪೊಲೀಸರು ಅನುಮತಿ ನೀಡಿದ್ದಾರೆ. ಪರಿಣಾಮ ಇಂದು ಬೆಳಗ್ಗೆಯಿಂದಲೇ ರಾಜಧಾನಿಯ ವಿವಿಧ ಗಡಿಗಳಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗಾಗಿ ಕಾದು ಕುಳಿತಿದ್ದ ಸಾವಿರಾರು ಸಂಖ್ಯೆಯ ರೈತ ಹೋರಾಟಗಾರರು ಕೊನೆಗೂ ಇಂದು ಬೆಂಗಳೂರು ನಗರಪ್ರವೇಶಿಸುವಲ್ಲಿ ಸಫಲರಾಗಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಮಾದಾವರ ಮೈದಾನದ ಬಳಿ ಭಾರತ ಬಾವುಟದ ಜೊತೆಗೆ ರೌಂಡ್ ಹಾಕುವ ಮೂಲಕ ಪೊಲೀಸರ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದರು. ಆದರೆ, ಮಧ್ಯಾಹ್ನ 1 ಗಂಟೆಯ ವೇಳೆಗೆ ಟ್ರ್ಯಾಕ್ಟರ್​ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಿದ್ದಾರೆ. ಪೊಲೀಸರು ಅನುಮತಿ ನೀಡುತ್ತಿದ್ದಂತೆ  ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ವಾಹನಗಳು ಮಾದಾವರದಿಂದ ಇದೀಗ ಪೆರೇಡ್ ಆರಂಭಿಸಿವೆ. ಮತ್ತೊಂದೆಡೆ ರೈತ ಮುಖಂಡ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಮೈಸೂರು ರಸ್ತೆ ಮೂಲಕವೂ ರೈತರು 30ಕ್ಕೂ ಹೆಚ್ಚು ಟ್ರ್ಯಾಕ್ಟರ್​ ಜೊತೆಗೆ ಈಗಾಗಲೇ ಬೆಂಗಳೂರು ಪ್ರವೇಶಿಸಿದ್ದಾರೆ.

ಮಾದಾವರ ಮತ್ತು ಮೈಸೂರು ರಸ್ತೆಯ ರ‍್ಯಾಲಿಯಲ್ಲಿ ಸಾವಿರಾರು ಸಂಖ್ಯೆಯ ರೈತರು, ಐನೂರಕ್ಕೂ ಹೆಚ್ಚು ರೈತ ವಾಹನಗಳು ಭಾಗಿಯಾಗಿದ್ದು, ರೈತರಿಗೆ ದಲಿತ, ಕಾರ್ಮಿಕ, ಕನ್ನಡ, ಮಹಿಳಾ ಸಂಘಟನೆಗಳು ಸಾಥ್ ನೀಡಿವೆ. ಪೆರೇಡ್ ಮುಂಭಾಗದಲ್ಲಿ ಟ್ರಾಕ್ಟರ್, ಆನಂತರ ಕಾರು, ಟೆಂಪೋ, ಗೂಡ್ಸ್ ಗಾಡಿ ಆನಂತರ ಹೋರಾಟಗಾರರಿರುವ ಬಸ್​ಗಳು ಸಾಲಾಗಿ ಮೆರವಣಿಗೆ ಹೊರಟಿದ್ದು, ಈ ಮೆರವಣಿಗೆ ಶೀಘ್ರದಲ್ಲೇ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಹಾಗೂ ಅಲ್ಲಿಂದ ಫ್ರೀಡಂ ಪಾರ್ಕ್​ಗೆ ತಲುಪಲಿದೆ ಎನ್ನಲಾಗುತ್ತಿದೆ.

ಇದಲ್ಲದೆ, ಹೊಸಕೋಟೆ ಮೂಲಕವೂ ರೈತರು ತಮ್ಮ ವಾಹನಗಳ ಮೂಲಕ ಬೆಂಗಳೂರು ಪ್ರವೇಶಿಸುತ್ತಿದ್ದಾರೆ. ಹೀಗಾಗಿ ಹೊಸಕೋಟೆ ಟೋಲ್ ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಬೇಟಿ ನೀಡಿ ರೈತರ ರ‍್ಯಾಲಿ ಕುರಿತು ಮಾಹಿತಿ ಪಡೆದಿದ್ದಾರೆ. ಡಿಸಿಪಿ ದೇವರಾಜ್, ಗ್ರಾಮಾಂತರ ಜಿಲ್ಲೆ ಎಎಸ್ಪಿ ಲಕ್ಷ್ಮೀ ಗಣೇಶ್ ಸ್ಥಳದಲ್ಲಿ ಭದ್ರತೆ ಹೊಣೆ ಹೊತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ.

ಇನ್ನೂ ನಗರಕ್ಕೆ ರೈತರ ನೂರಾರು ವಾಹನಗಳ ಪ್ರವೇಶದಿಂದಾಗಿ ಮೈಸೂರು ರಸ್ತೆ, ನೈಸ್ ರೋಡ್ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ ಎನ್ನಲಾಗುತ್ತಿದೆ. ಈ ಹೋರಾಟ ಮತ್ತು ರ‍್ಯಾಲಿ ಅಂತಿಮವಾಗಿ ಫ್ರೀಂಡಂ ಪಾರ್ಕ್​ ಬಳಿ ಜಮಾಯಿಸಲಿದ್ದು ಶಾಂತಿಯುತವಾಗಿಯೇ ಪ್ರತಿಭಟನೆ ನಡೆಯಲಿದೆ ಎಂದು ರೈತ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಬಿಗಿ ಭದ್ರತೆ; ರೈತ ಹೋರಾಟಕ್ಕೆ ಬೆದರಿತೇ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...