Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...