Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...