Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...