Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...