Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...