Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...