Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...