Homeಕರ್ನಾಟಕಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ...

ಕೊನೆಗೂ ಕುರುಬ ಸಮುದಾಯದ ಕ್ಷಮೆಯಾಚಿಸಿದ ಸಚಿವ ಮಾಧುಸ್ವಾಮಿ…

- Advertisement -
- Advertisement -

ಉಪಚುನಾವಣೆ ಸಂದರ್ಭದಲ್ಲೇ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಸ್ವಾಮೀಜಿ ಕುರಿತು ಆಡಿರುವ ಮಾತುಗಳು ಕುರುಬ ಸಮುದಾಯವನ್ನು ಕೆರಳಿಸಿದ್ದು ಉಪಚುನಾವಣೆಯ ಮೇಲೆ ವ್ಯಾಪಕ ಪರಿಣಾಮ ಬೀರಲಿದೆ. ಇದೇ ಕಾರಣಕ್ಕಾಗಿಯೇ ಮುಖ್ಯಮಂತ್ರಿಗಳೇ ಸ್ವತಃ ಕುರುಬ ಸಮುದಾಯದ ಕ್ಷಮೆಯನ್ನು ಕೋರಿದ್ದರು. ಚುನಾವಣೆಯ ಮೇಲಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಸಂಧಾನ ಕಳಿಸಿ ಪ್ರಕರಣ ಸುಖ್ಯಾಂತ ಕಾಣುವಂತೆ ಮಾಡಿದ್ದಾರೆ.

ನವೆಂಬರ್ 21 ರಂದು ಕಾಗಿನೆಲೆಯ ಕನಕಗುರು ಪೀಠಕ್ಕೆ ತೆರಳಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಕುರುಬ ಸಮುದಾಯದ ಈಶ್ವರಾನಂದಸ್ವಾಮಿಗಳ ಕ್ಷಮೆಕೋರಿದ್ದು ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಆದರೆ ಜನರ ನಡುವೆ ಹೀಗೊಂದು ಚರ್ಚೆ ನಡೆಯುತ್ತಲೇ ಇದೆ. ಚಿಕ್ಕನಾಯಕನಹಳ್ಳಿಯಲ್ಲಿ ಹಿಂದೆ ಶಾಸಕರಾಗಿದ್ದಾಗಲೂ ಮಾಧುಸ್ವಾಮಿ ಜನರೊಂದಿಗೆ ಬಹು ಒರಟಾಗಿ ನಡೆದುಕೊಳ್ಳುತ್ತಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಗೊಲ್ಲ ಸಮುದಾಯದ ಯುವಕನೊಬ್ಬ ಪ್ರಶ್ನಿಸಿದ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದರು. ಆಗಲೂ ಪ್ರತಿಭಟನೆ ಎದುರಿಸಿದ್ದರು. ಜೆ.ಸಿ.ಮಾಧುಸ್ವಾಮಿ ಬಡಪೆಟ್ಟಿಗೆ ಬಗ್ಗುವ ಆಸಾಮಿ ಅಲ್ಲ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.

ಚಿಕ್ಕನಾಯನಹಳ್ಳಿ ಶಾಸಕರಾಗಿದ್ದ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ರೇಗಿ ಬೀಳುತ್ತಿದ್ದರು. ಇದೇ ಕಾರಣಕ್ಕಾಗಿಯೇ ಅವರನ್ನು ಮರು ಚುನಾವಣೆಯಲ್ಲಿ ಸೋಲುವಂತೆ ಜನರು ಮತ್ತು ಅಧಿಕಾರಿಗಳು ನೋಡಿಕೊಂಡರು. ಬದಲಾದ ಕಾಲದಲ್ಲಿ ಮಾಧುಸ್ವಾಮಿ ಜೆಡಿಯು ತೊರೆದು ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡು ಬಿಜೆಪಿ ಸೇರಿದರು. ಈಗ ಮತ್ತೆ ಗೆದ್ದು ಕಾನೂನು ಸಚಿವರಾಗಿಯೂ ಕೆಲಸ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಹಿಂದಿನಿಂದಲೂ ಅದರ ಬಗ್ಗೆ ಸೊಲ್ಲೆತ್ತದೆ ಮೌನವಹಿಸಿದ್ದಾರೆ. ಇದರ ಮರ್ಮವೇನು ಎಂದು ಸ್ಥಳೀಯ ಜನರು ಪ್ರಶ್ನಿಸುತ್ತಾರೆ.

ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿಗಳ ಒತ್ತಾಯದ ಮೇರೆಗೆ ಕ್ಷಮೆ ಯಾಚಿಸಿದ್ದಾರೆ. ಅದೂ ಉಪಚುನಾವಣೆ ಇದೆ ಎಂಬ ಕಾರಣಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಮತ್ತು ಉಪಚುನಾವಣೆ ಇಲ್ಲದಿದ್ದರೆ, ಪ್ರತಿಭಟನೆಯ ತೀವ್ರಗೊಳ್ಳದಿದ್ದರೆ ಮಾಧುಸ್ವಾಮಿ ಕ್ಷಮೆ ಕೇಳುತ್ತಿರಲಿಲ್ಲ. ಅನಿವಾರ್ಯ ರಾಜಕೀಯ ಒತ್ತಡಗಳಿಗೆ ಒಳಗಾಗಿ ಕ್ಷಮೆ ಕೇಳಬೇಕಾಗಿ ಬಂದಿದೆ ಎನ್ನುತ್ತಾರೆ ಹತ್ತಿರದಿಂದ ಬಲ್ಲವರು.

ಒತ್ತಡ ಕಾರಣಕ್ಕಾಗಿಯೇ ಮಾಧುಸ್ವಾಮಿ ಕಾಗಿನೆಲೆಗೆ ಭೇಠಿ ಕೊಟ್ಟಿರುವುದು. ಇವರ ಜೊತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೂ ಸಂಧಾನಕ್ಕೆ ಕಳಿಸಿರುವ ಮುಖ್ಯಮಂತ್ರಿಗಳು ವಿವಾದವನ್ನು ಉಪಾಯವಾಗಿ ಮೈಮೇಲೆ ಎಳೆದುಕೊಳ್ಳದ ರೀತಿಯಲ್ಲಿ ಬಗೆಹರಿಸಿದ್ದಾರೆ. ಹೀಗಾಗಿ ಉಪಚುನಾವಣೆಯ ಮೇಲೆ ಆಗುತ್ತಿದ್ದ ಡ್ಯಾಮೇಜ್ ನಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತಿತ್ತು. ಸನ್ನಿವೇಶದ ಗಂಭೀರತೆಯನ್ನು ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ಬುಧವಾರ ಸಂಜೆಯೇ ಮಾಧ್ಯಮಗಳಿಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾಧುಸ್ವಾಮಿ ಪರ ಬಹಿರಂಗ ಕ್ಷಮೆ ಕೋರಿದರು. ಕಾಗಿನೆಲೆ ಕ್ಷೇತ್ರಕ್ಕೆ ತಾನು ನೀಡಿದ ನೆರವನ್ನೂ ಪ್ರಸ್ತಾಪಿಸಿದ್ದರು. ಆದ್ದರಿಂದ ಕಾನೂನು ಸಚಿವರಿಂದಲೂ ಒಂದು ಕ್ಷಮೆ ಯಾಚನೆಯನ್ನು ಕೊಡಿಸಿದರು. ಗೃಹ ಸಚಿವರು ಕೂಡ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿವಾದ ಸದ್ಯಕ್ಕೆ ಬಗೆಹರಿದಿದೆ.

ಯಡಿಯೂರಪ್ಪನವರು ಪತ್ರ

ಕುರುಬ ಸಮುದಾಯದ ಮುಖಂಡರೇ ಹೇಳುವಂತೆ ಮಾಧುಸ್ವಾಮಿ ಕನಕ ವೃತ್ತದ ಹೆಸರನ್ನು ಬದಲಿಸಲು ಹೊರಟಿದ್ದರು. ಶಾಂತಿಸಭೆಯಲ್ಲಿ ಅದೇ ಕಾರಣಕ್ಕೆ ಈಶ್ವರಾನಂದ ಸ್ವಾಮೀಜಿ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರವನ್ನು ಕೊಟ್ಟಿದ್ದು. ಸಚಿವರಿಗೇ ಸ್ವಾಮೀಜಿ ಎಚ್ಚರ ಕೊಡುವಷ್ಟರ ಮಟ್ಟಕ್ಕೆ ಬಂದರೆ ಎಂದು ಸ್ವಾಮೀಜಿಗಳನ್ನು ಕುತ್ಕೊಳ್ರಿ ನೋಡಿದ್ದೀನಿ ಎಂದು ದಬಾಯಿಸಿದರು. ಆಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು. ಕ್ಷಮೆಯಾಚಿಸುವಂತೆ ಪಟ್ಟು ಹಿಡಿದರು. ಆದರೆ ಸಚಿವರು ಕ್ಷಮೆ ಯಾಚಿಸಲಿಲ್ಲ. ಇದರಿಂದ ಪ್ರತಿಭಟನೆ ಅನಿವಾರ್ಯವಾಯಿತು ಎನ್ನುತ್ತಾರೆ ಕುರುಬ ಸಮುದಾಯದ ಮುಖಂಡರು.

ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಕುರುಬರ ಸಂಖ್ಯೆ ಹೆಚ್ಚಾಗಿದೆ. ಇದೇ ಭಾಗದಲ್ಲಿ ಉಪಚುನಾವಣೆಯೂ ನಡೆಯುತ್ತಿದೆ. ಇದೇ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ಕಾರ್ಯಪ್ರವೃತ್ತರಾಗಿ ವಿವಾದಕ್ಕೆ ಇತಿಶ್ರೀ ಹಾಡುವಂತೆ ಮಾಡಿದ್ದಾರೆ.  ಆದರೆ ಕುರುಬ ಸಮುದಾಯ ಮಾಧುಸ್ವಾಮಿ ಬಗ್ಗೆ ಇರುವ ಸಿಟ್ಟನ್ನು ಉಪಚುನಾವಣೆಯಲ್ಲಿ ತೋರಿಸಿದರೆ ಬಿಜೆಪಿಗೆ ಹೊಡೆತವಂತೂ ಗ್ಯಾರೆಂಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...