Homeಮುಖಪುಟಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಆರ್‌ಎಸ್‌ಎಸ್‌ ತನ್ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತ್ರಿವರ್ಣ ಧ್ವಜದ ಚಿತ್ರವನ್ನು ಅಪ್‌ಲೋಡ್ ಮಾಡಿಕೊಂಡಿದೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಸೇರಿದಂತೆ ಆರ್‌ಎಸ್‌ಎಸ್‌ನ ಅಧಿಕೃತ ಖಾತೆಗಳಲ್ಲಿ ಭಾವುಟವನ್ನು ಹಾಕಿಕೊಳ್ಳಲಾಗಿದೆ.

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿದ್ದವು. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿದ್ದವು.

ಟ್ವಿಟರ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಫೇಸ್‌ಬುಕ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಅವರ ಟ್ವಿಟರ್‌ ಖಾತೆ

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದರು.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿತ್ತು.

ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದರು.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದರು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದರು.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...